ರಾಯಚೂರು: ಸಿಂಧನೂರು ತಾಲೂಕಿನಲ್ಲಿರುವ ಬಾಂಗ್ಲಾ ವಲಸಿಗರಿಗೆ ಪೌರತ್ವ ಪ್ರಮಾಣ ಪತ್ರ ವಿತರಣೆಗೆ ದಿನ ನಿಗದಿ ಮಾಡುವಂತೆ ಕೋರಿ ಸಂಸದ ಕರಡಿ ಸಂಗಣ್ಣ ಬಿಜೆಪಿ ರಾಜ್ಯಾಧ್ಯಕ್ಷರಿಗೆ ಪತ್ರ ಬರೆದಿದ್ದಾರೆ.
ಸಿಂಧನೂರು ತಾಲೂಕಿನಲ್ಲಿರುವ ಆರ್ ಎಚ್ ಕ್ಯಾಂಪ್​​ಗಳಲ್ಲಿ ಅಂದಾಜು 20 ಸಾವಿರ ಬಾಂಗ್ಲಾ ವಲಸಿಗರು ಇದ್ದಾರೆ. ಇವರು ಭಾರತೀಯ ಪೌರತ್ವ ಪಡೆಯಲು ಅರ್ಹರಾಗಿದ್ದಾರೆ. ಹೀಗಾಗಿ ಜ.15ರೊಳಗೆ ಸಿಂಧನೂರಿನಲ್ಲಿ ಪೌರತ್ವ ಪ್ರಮಾಣ ಪತ್ರ ವಿತರಣಾ ಸಮಾರಂಭ ನಡೆಸಬೇಕು ಎಂದು ಅವರು ಬಿಜೆಪಿ ರಾಜಾಧ್ಯಕ್ಷ ನಳೀನ್​ ಕುಮಾರ್​ ಕಟೀಲು ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅಥವಾ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಚರ್ಚಿಸಿ ದಿನ ನಿಗದಿಪಡಿಸಿ ಎಂದು ಸಂಸದರು ಕೋರಿದ್ದಾರೆ. (ದಿಗ್ವಿಜಯ ನ್ಯೂಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − 5 =
Remember me
