ಕುಣಿಗಲ್:ಕಾಫಿ-ಟೀ ಮಾರುತ್ತಾ ಕೂಡಿಟ್ಟ ಹಣದಲ್ಲಿ ಕೃಷಿ ಮಾಡುತ್ತಿದ್ದ ರೈತರೊಬ್ಬರು ತನ್ನ ತೋಟದಲ್ಲಿ ನಳನಳಿಸುತ್ತಿದ್ದ ಅಡಿಕೆ-ತೆಂಗು-ಬಾಳೆ ಗಿಡಗಳನ್ನು ಕಂಡು ಖುಷಿಯಿಂದಲೇ ರಾತ್ರಿ ಮನೆಗೆ ಹೋಗಿದ್ದರು. ಬೆಳಗ್ಗೆ ಎದ್ದು ತೋಟಕ್ಕೆ ಬಂದ ರೈತನು ಎದೆಬಡಿದುಕೊಂಡು ಅಳುತ್ತಿದ್ದ ದೃಶ್ಯ ಎಂತಹವರಿಗೂ ಮನಕಲಕುವಂತಿತ್ತು.
ಕುಣಿಗಲ್ ತಾಲೂಕಿನ ಹೇರುರೂ ಗ್ರಾಮದ ನಾಗರಾಜು ಅವರು ಎರಡು ಎಕರೆ ಜಮೀನಿನಲ್ಲಿ ಬೆಳೆದಿದ್ದ ಸುಮಾರು 700 ಅಡಕೆ, ತೆಂಗಿನ ಸಸಿಗಳು ಮತ್ತು ಬಾಳೆಗಿಡಗಳು ಬುಡಕ್ಕೆ ಕತ್ತಿಯ ಪೆಟ್ಟು ತಿಂದು ಎರಡ್ಮೂರು ಭಾಗವಾಗಿ ತುಂಡಾಗಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಅಡಿಕೆ, ಬಾಳೆ, ತೆಂಗು ಮೂರ್ನಾಲ್ಕು ಅಡಿ ಎತ್ತರ ಬೆಳೆದಿದ್ದವು. ಆದರೆ, ಮಂಗಳವಾರ ತಡರಾತ್ರಿ ಯಾರೋ ದುಷ್ಕರ್ಮಿಗಳು ಎಲ್ಲ ಗಿಡಗಳನ್ನೂ ಕತ್ತರಿಸಿ ಹಾಕಿದ್ದಾರೆ.
ಇದನ್ನೂ ಓದಿರಿಮಗನನ್ನು ನೋಡಲು ಹೊರಟ ದಂಪತಿ ದಾರಿಯಲ್ಲೇ ಹೆಣವಾದರು!
20 ಗುಂಟೆ ಜಮೀನಿನ ವಿಚಾರವಾಗಿ ನಾಗರಾಜು ಅವರ ಚಿಕ್ಕಪ್ಪನ ಮಗ ಸಂಜೀವ ಆಗಾಗ ಜಗಳ ತೆಗೆದು ತೊಂದರೆ ಮಾಡುತ್ತಿದ್ದ. ಆತನೇ ಈಕೃತ್ಯವೆಸಗಿದ್ದಾನೆ ಎಂದು ನಾಗರಾಜು ಕುಟುಂಬಸ್ಥರು ಆರೋಪಿಸಿದ್ದಾರೆ.
ವಿವಾದ ಏನೇ ಆಗಿರಲಿ, ಫಸಲು, ಗಿಡ-ಮರಗಳನ್ನು ಅಮಾನವೀಯವಾಗಿ ಕತ್ತರಿಸಿ ಹಾಕುವುದು ಹೀನ ಕೃತ್ಯ. ಇಂತಹ ಪಾಪದ ಕೆಲಸ ಮಾಡಿದವರಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಗ್ರಾಮಸ್ಥರು ಹಿಡಿಶಾಪ ಹಾಕುತ್ತಿದ್ದ ದೃಶ್ಯ ಕಂಡು ಬಂತು.
ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬೆಳೆದಿದ್ದ ಅಡಿಕೆ ಗಿಡಗಳು ಇನ್ನೆರಡು ವರ್ಷದಲ್ಲಿ ಫಸಲು ಬಿಡುವ ಹಂತಕ್ಕೆ ಬದ್ದಿದ್ದವು. ಎಲ್ಲವೂ ಮಣ್ಣುಪಾಲಾಗಿದೆ. ಸಂಕಟ ತೆಡೆಯಲು ಆಗುತ್ತಿಲ್ಲ ಎಂದು ಎದೆ ಬಡಿದುಕೊಂಡು ರೈತ ನಾಗರಾಜ ಗೋಳಾಡುತ್ತಿದ್ದ ದೃಶ್ಯ ಕರಳುಹಿಂಡುವಂತಿತ್ತು. ಕುಣಿಗಲ್ ಪೊಲೀಸ್​ ಠಾಣೆಯಲ್ಲಿ ಸಂತ್ರಸ್ತ ರೈತ ದೂರು ನೀಡಿದ್ದಾರೆ.
https://www.facebook.com/VVani4U/videos/318066936279335/
video/ ಶಾಸಕ ಡಾ.ರಂಗನಾಥ್​ರಿಂದ ಪ್ಲಾಸ್ಮಾ ದಾನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + two =
Remember me
