ಕಲಬುರಗಿ:ಒಂದೇ ಮನೆಯಲ್ಲಿ ಅಕ್ಕ-ತಂಗಿ ಇಬ್ಬರೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಚಿಂಚೋಳಿ ತಾಲೂಕಿನ ಐನಾಪುರ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ವಿಶ್ವನಾಥ ಸುತಾರ ಎಂಬುವರ ಪುತ್ರಿಯರಾದ ಐಶ್ವರ್ಯ ಸುತಾರ(20) ಹಾಗೂ ಸಾರಿಕಾ ಸುತಾರ(17) ಮೃತ ದುರ್ದೈವಿಗಳು.
ವಿಶ್ವನಾಥ ಸುತಾರಗೆ ಐವರು ಮಕ್ಕಳು. ಈ ಪೈಕಿ ಮೂವರಿಗೆ ಮದುವೆಯಾಗಿದೆ. ಐದನೇಯವಳಾದ ಸಾರಿಕಾಗೆ ತಿಂಗಳ ಹಿಂದಷ್ಟೆ ಮದುವೆ ನಿಶ್ಚಯವಾಗಿತ್ತು. ನಾಲ್ಕನೇಯವಳಾದ ಐಶ್ವರ್ಯಗೆ ವರನನ್ನು ಹುಡುಕಲಾಗುತಿತ್ತು ಎನ್ನಲಾಗಿದೆ. ತಂದೆ ವಿಶ್ವನಾಥ ಅವರು ಊರಿನಲ್ಲೇ ಪೆಟ್ಟಿ ಅಂಗಡಿ ಇಟ್ಟುಕೊಂಡಿದ್ದಾರೆ.
ಎಂದಿನಂತೆ ಸೋಮವಾರ ಮಧ್ಯಾಹ್ನ ಊಟಕ್ಕೆಂದು ಅಂಗಡಿಯಿಂದ ಮನೆಗೆ ಬಂದ ತಂದೆಗೆ ಈ ಸಹೋದರಿಯರೇ ಊಟ ಬಡಿಸಿದ್ದರು. ಊಟ ಮಾಡಿ ತಂದೆ ಅಂಗಡಿಗೆ ತೆರಳುತ್ತಿದ್ದಂತೆ ನೇಣುಬಿಗಿದುಕೊಂಡು ಅಕ್ಕ-ತಂಗಿ ಇಬ್ಬರೂ ಮೃತಪಟ್ಟಿದ್ದಾರೆ.
ಈ ವೇಳೆ ಮನೆಯಲ್ಲಿ ಯಾರೂ ಇರಲಿಲ್ಲ. ಸಂಜೆ ಹೊಲದಿಂದ ಮನೆಗೆ ಬಂದ ತಾಯಿ, ಮಕ್ಕಳ ಶವ ಕಂಡು ಚೀರಾಡುತ್ತಿದ್ದಂತೆ ಸ್ಥಳೀಯರು ಓಡಿ ಬಂದಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪಿಎಸ್ಐ ರಾಜಶೇಖರ ರಾಠೋಡ ಭೇಟಿ‌ ನೀಡಿ ಪರಿಶೀಲನೆ ‌ನಡೆಸಿದ್ದಾರೆ. ಈ ಸಂಬಂಧ ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಾಂಪತ್ಯ ಜೀವನಕ್ಕೆ ಕಾಲಿಡಬೇಕಿದ್ದ ಮಕ್ಕಳು ಬಾರದ ಲೋಕಕ್ಕೆ ಹೋಗಿದ್ದಾರೆಂದು ತಿಳಿಯುತ್ತಿದ್ದಂತೆ ಪಾಲಕರ ಆಕ್ರಂದನ ಮುಗಿಲುಮುಟ್ಟಿತ್ತು. ತನಿಖೆ ನಂತರವಷ್ಟೇ ಸಹೋದರಿಯರ ಸಾವಿನ ಕಾರಣ ತಿಳಿಯಲಿದೆ.
ಹಸಿವು ನೀಗಿಸಿಕೊಳ್ಳುವ ತವಕದಲ್ಲಿದ್ದ ಅಕ್ಕ-ತಮ್ಮನ ಪ್ರಾಣ ತೆಗೆದ ಕ್ರೇನ್..!

ಮದ್ವೆಗೆ 2 ದಿನ ಇದ್ದಂತೆ ವಧುಗೆ ಕೈಕೊಟ್ಟ ವರ​! ಮದ್ವೆ ದಿನ ವಾಪಸ್​ ಬಂದವನಿಂದ ಮತ್ತೊಂದು ಶಾಕ್​

ನಮ್ಮ ದೇವರಿಗೆ ನಮಸ್ತೆ… ಅಂದ ಮುನಿರತ್ನ! ವಿಧಾನಸೌಧದಲ್ಲಿ ಗುರು-ಶಿಷ್ಯ ಮುಖಾಮುಖಿ ಮಾತುಕತೆ

ನನ್ನನ್ನು ಮಂತ್ರಿ ಮಾಡಿ, ಇಲ್ಲವೇ ವಿಷ ಕೊಡಿ… ಈ ಮಾತು ಕೇಳಿ ಕಕ್ಕಾಬಿಕ್ಕಿಯಾದ ಸಿಎಂ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − eight =
Remember me
