ಬೆಳಗಾವಿ :ಸಿಡಿ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ರಾಜ್ಯ ಪೊಲೀಸರ ವಿಶೇಷ ತನಿಖಾ ತಂಡ (ಎಸ್​ಐಟಿ) ನೋಟೀಸ್ ನೀಡಿದೆ.
ಕರೊನಾ ಪಾಸಿಟೀವ್ ಬಂದಿದ್ದರಿಂದ ರಮೇಶ್ ಜಾರಕಿಹೊಳಿ ಅವರು ಬೆಳಗಾವಿ ಜಿಲ್ಲೆಯ ಗೋಕಾಕ್​ನ ತಮ್ಮ ಮನೆಯಲ್ಲಿ ಕ್ವಾರಂಟೈನ್​ನಲ್ಲಿ ಇದ್ದಾರೆ ಎನ್ನಲಾಗಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ವಿಚಾರಣೆ ನಡೆಸಲು ಇಬ್ಬರು ಎಸ್​ಐಟಿ ಅಧಿಕಾರಿಗಳು ಇಂದು ಗೋಕಾಕ್​ಗೆ ಆಗಮಿಸಿ, ಅವರ ಗೃಹಕಚೇರಿಗೆ ಭೇಟಿ ನೀಡಿದರು ಎನ್ನಲಾಗಿದೆ.
ಇದನ್ನೂ ಓದಿ:ರಮೇಶ್​ ಜಾರಕಿಹೊಳಿ ಸಿಡಿ ಕೇಸ್​ಗೆ ಸ್ಫೋಟಕ ತಿರುವು: ಉಲ್ಟಾ ಹೊಡೆದ ಯುವತಿ
ಆದರೆ ರಮೇಶ್ ಜಾರಕಿಹೊಳಿ ಅವರು ಲಭ್ಯವಾಗದಿದ್ದರಿಂದ, ಸಹೋದರ ಬಾಲಚಂದ್ರ ಜಾರಕಿಹೊಳಿ‌ ಅವರ ಕಚೇರಿಗೆ ತೆರಳಿದ ಅಧಿಕಾರಿಗಳು ಏಪ್ರಿಲ್ 20 ರಂದು 4 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ನೀಡಿದ್ದಾರೆ ಎನ್ನಲಾಗಿದೆ.
ಕೆಲಸದ ಆಮಿಷವೊಡ್ಡಿ ತನ್ನನ್ನು ಲೈಂಗಿಕವಾಗಿ ಬಳಸಿಕೊಂಡು ಬಳಿಕ ಮೋಸ ಮಾಡಿದ್ದಾರೆ ಎಂದು ರಮೇಶ್​ ಜಾರಕಿಹೊಳಿ ವಿರುದ್ಧ ಸಿಡಿ ಲೇಡಿ ಆರೋಪಿಸಿದ್ದಳು. ಈ ಕುರಿತು ಈಗಾಗಲೇ ಯುವತಿಯ ಸುದೀರ್ಘ ವಿಚಾರಣೆ ನಡೆಸಿರುವ ಎಸ್​ಐಟಿ, ಆಕೆ ವಾಸವಾಗಿದ್ದ ಬೆಂಗಳೂರಿನ ಪಿಜಿಗೆ ಭೇಟಿ ನೀಡಿ ಅಲ್ಲಿಂದಲೂ ಹಲವಾರು ಸಾಕ್ಷ್ಯಗಳನ್ನು ಸಂಗ್ರಹಿಸಿದೆ. ಇದೀಗ ರಮೇಶ್ ಜಾರಕಿಹೊಳಿ ಅವರ ವಿಚಾರಣೆಗೆ ಸಮಯ ನಿಗದಿ ಮಾಡಿದೆ ಎನ್ನಲಾಗಿದೆ.
ಸಾವಿನಲ್ಲೂ ಕಲೆ ಅರಳಿದೆ ! ಕಾಫಿನ್​ಗಳಿಗೆ ರಂಗು ತುಂಬುವ ಕಲಾವಿದರು !
ಹುಷಾರ್ ! ಕರೊನಾ ವೈರಸ್ ಗಾಳಿಯ ಮೂಲಕ ಹರಡುತ್ತೆ ಎನ್ನುತ್ತಿದೆ ತಜ್ಞರ ವರದಿ !

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + seven =
Remember me
