ಬೆಂಗಳೂರು: ಮಳೆ ಶುರುವಾಗಿದೆ. ಇದರಿಂದ ಅನೇಕ ಚರ್ಮ ರೋಗಗಳು ಬರುವ ಸಾಧ್ಯತೆ ಇದೆ. ದದ್ದುಗಳು, ಕೆಂಪು, ಸಿಪ್ಪೆಸುಲಿಯುವುದು ಇತ್ಯಾದಿಗಳು ವಿಶೇಷವಾಗಿ ಕಾಲ್ಬೆರಳುಗಳ ಮಧ್ಯೆದಲ್ಲಿ ಕಾಣಿಸಿಕೊಳ್ಳುತ್ತದೆ. ಮಳೆಗಾಲದಲ್ಲಿ ಶೂ ಮತ್ತು ಸಾಕ್ಸ್ ಅನ್ನು ಹೆಚ್ಚು ಹೊತ್ತು ಧರಿಸದಿರುವುದು ಉತ್ತಮ.  ನೈಸರ್ಗಿಕ ವಿಧಾನಗಳ ಮೂಲಕ ಅವುಗಳನ್ನು ನಿವಾರಿಸಲು ಕೆಲವು ಸಲಹೆಗಳಿವೆ. ನಾವು ಇಂದು ಈ ಕುರಿತಾಗಿ ನಿಮಗೆ ತಿಳಿಸಿಕೊಡಲಿದ್ದೇವೆ.
ಬಿಸಿ ನೀರಿಗೆ ಉಪ್ಪನ್ನು ಸೇರಿಸಿ ಈ ನೀರಿನಿಂದ ಕಾಲನ್ನು ಸ್ವಚ್ಛಗೊಳಿಸಬೇಕು. ಹೀಗೆ ಮಾಡುವುದರಿಂದ ಬ್ಯಾಕ್ಟೀರಿಯಾ ನಾಶವಾಗುತ್ತದೆ. ಇದರಿಂದ ಫಂಗಲ್ ಸೋಂಕನ್ನು ತಡೆಯಬಹುದು.
ಪೆಟ್ರೋಲಿಯಂ ಜೆಲ್ಲಿಯನ್ನು ಹಚ್ಚಿ ಸ್ವಲ್ಪ ಹೊತ್ತು ಮಸಾಜ್ ಮಾಡುವುದರಿಂದ ಒಣ ಚರ್ಮ ಮೃದುವಾಗುತ್ತದೆ. ಕ್ರಮೇಣ ತುರಿಕೆ ಕಡಿಮೆಯಾಗುತ್ತದೆ. ಪುದೀನಾ ಎಣ್ಣೆಯನ್ನು ಹಚ್ಚುವುದರಿಂದ ದದ್ದು ಮತ್ತು ಉರಿಯೂತ ಕಡಿಮೆಯಾಗುತ್ತದೆ.
ಬೆಚ್ಚಗಿನ ನೀರಿಗೆ ಎರಡು ಅಥವಾ ಮೂರು ಹನಿ ಪುದೀನಾ ಎಣ್ಣೆಯನ್ನು ಸೇರಿಸಿ ಮತ್ತು ಚೆನ್ನಾಗಿ ಮಿಶ್ರಣ ಮಾಡಿ.ಪಾದಗಳು ನೆನೆಯುವವರೆಗೆ 10 ನಿಮಿಷಗಳ ಕಾಲ ಇರಿಸಿ. ನಂತರ ಅದನ್ನು ಹೊರತೆಗೆದು ಒಣ ಬಟ್ಟೆಯಿಂದ ಸ್ವಚ್ಛಗೊಳಿಸಿ. ಹೀಗೆ ಮಾಡುವುದರಿಂದ ಉತ್ತಮ ಪರಿಹಾರ ದೊರೆಯುತ್ತದೆ.
ನೆನಪಿಡಿ..ಮಳೆಗಾಲದಲ್ಲಿ ಮೀನು ತಿನ್ನಲೇಬಾರದು! ಯಾಕೆ ಅಂತಾ ಗೊತ್ತಾದ್ರೆ ಶಾಕ್​ ಆಗೋದು ಪಕ್ಕಾ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × one =
Remember me
