ಬೆಂಗಳೂರು:ಬೆಂಗಳೂರಿನಲ್ಲಿ ನಡೆದ ವ್ಯಕ್ತಿಯೊಬ್ಬರ ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಸ್ಯಾಂಡಲ್​ವುಡ್​ ನಟ ದರ್ಶನ್​ ತೂಗುದೀಪ ಅವರನ್ನು ಪೊಲೀಸರು ಬಂಧಿಸಿದ್ದು ವಿಚಾರಣೆ ನಡೆಸುತ್ತಿದ್ದಾರೆ. ಈ ಪ್ರಕರಣ್ಕಕೆ ಸಂಬಂಧಿಸಿದ್ದಂತೆ ದರ್ಶನ್​, ಪವಿತ್ರಾಗೌಡ ಸೇರಿದಂತೆ 10 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇದನ್ನು ಓದಿ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಜೂ.08ರ ರಾತ್ರಿ ನಡೆದಿದ್ದೇನು? ವರದಿ ಹೇಳುವುದಿಷ್ಟು
ಚಿತ್ರದುರ್ಗದ ಅಪೋಲೋ ಫಾರ್ಮಸಿ ಶಾಖೆಯಲ್ಲಿ ಕೆಲಸ ಮಾಡುತ್ತಿದ್ದ ರೇಣುಕಾ ಸ್ವಾಮಿ(33) ಸುಮನಹಳ್ಳಿ ಸೇತುವೆ ಬಳಿ ಶವವಾಗಿ ಪತ್ತೆಯಾಗಿದ್ದಾರೆ. ಅವರು ಪವಿತ್ರಾ ಗೌಡಗೆ ಅವಹೇಳನಕಾರಿ ಸಂದೇಶಗಳನ್ನು ಕಳುಹಿಸಿದ್ದರು. ಈ ಕಾರಣಕ್ಕಾಗಿಯೇ ರೇಣುಕಾ ಸ್ವಾಮಿ ಕೊಲೆ ಆಗಿದೆ ಎನ್ನಲಾಗಿದೆ. ಇನ್ನು ದರ್ಶನ್ ಸೂಚನೆ ಮೇರೆಗೆ ಕೊಲೆ ಮಾಡಿದ್ದಾಗಿ ನಾಲ್ವರು ಆರೋಪಿಗಳು ಬಾಯ್ಬಿಟ್ಟಿದ್ದಾರೆ. ಘಟನೆ ವೇಳೆ ಸ್ಥಳದಲ್ಲಿ ದರ್ಶನ್ ಕೂಡ ಇದ್ದರು ಎಂದು ಹೇಳಲಾಗುತ್ತಿದೆ.
ನಟ ದರ್ಶನ್​​​ ಬಂಧನದ ಬಳಿಕ ಬಹುಭಾಷ ನಟಿ ಸಂಜನಾ ಗಲ್ರಾನಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಸುದ್ದಿ ನೋಡಿ ನನಗೆ ಶಾಕ್​ ಆಗಿದೆ. ವಿಚಾರಣೆಗೆ ಕರೆದುಕೊಂಡಿರುವ ದರ್ಶನ್​​ ಅವರ ಬಂಧನ ಆಗಬಾರದು ಮತ್ತು ದರ್ಶನ್​​ ಅವರ ಹೆಸರು ಎಫ್​ಐಆರ್​ನಲ್ಲಿ ಇರಬಾರದೆಂದು ಎಂದು ದೇವರಲ್ಲಿ ಬೇಡಿಕೊಳ್ಳುತ್ತೇನೆ. ಆದಷ್ಟು ಬೇಗೆ ಅವರ ವಿಚಾರಣೆ ಮುಗಿದು ಬಿಡುಗಡೆಯಾಗಲಿ ಎಂದು ಹೇಳಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್​ ನೀಡಿದ ಮೊದಲ ಪ್ರತಿಕ್ರಿಯೆ ಹೀಗಿದೆ ನೋಡಿ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 + 20 =
Remember me
