ಬೆಂಗಳೂರು:ಕರೊನಾ ವೈರಸ್‌ ಕ್ಷಣ ಕ್ಷಣಕ್ಕೂ ಏರುತ್ತಿರುವ ಹಿನ್ನೆಲೆಯಲ್ಲಿ, ಇದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಹೊಸ ಆದೇಶವನ್ನು ಹೊರಡಿಸಿದೆ.
ಅದರ ಪ್ರಕಾರ, ಕರೊನಾ ವೈರಸ್ ಸೋಂಕಿನ ಪರೀಕ್ಷೆಗೆ ಮಾದರಿ ಕೊಟ್ಟಿರುವ ಜನರು ಸಹ ಐಸೋಲೇಷನ್‌ನಲ್ಲಿ ಇರುವುದು ಕಡ್ಡಾಯ ಎಂದು ಹೇಳಲಾಗಿದೆ. ಇದನ್ನು ಉಲ್ಲಂಘನೆ ಮಾಡಿದವರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಇಲಾಖೆ ಎಚ್ಚರಿಸಿದೆ.
ಇದನ್ನೂ ಓದಿ:ಬಿಜೆಪಿ ಶಾಸಕನ ಆತ್ಮಹತ್ಯೆಗೆ ತಿರುವು: ಜೇಬಲ್ಲಿ ಸಿಕ್ಕಿವೆ ಮೂರು ಹೆಸರು..!
ಕರೊನಾ ವೈರಸ್‌ ಸೋಂಕಿನ ಪರೀಕ್ಷೆಗೆ ಮಾದರಿ ಕೊಟ್ಟ ನಂತರ ಅದರ ಫಲಿತಾಂಶ ಬರುವವರೆಗೂ ಜನರು ಎಲ್ಲೆಡೆ ಅಡ್ಡಾಡುತ್ತಿರುವ ಹಿನ್ನೆಲೆಯಲ್ಲಿ, ಸೋಂಕು ಇತರರಿಗೂ ತಗಲುತ್ತಿರುವ ಬಗ್ಗೆ ಎಚ್ಚೆತ್ತುಕೊಂಡಿರುವ ಇಲಾಖೆ ಇಂಥದ್ದೊಂದು ಆದೇಶ ಹೊರಡಿಸಿದೆ.
ಒಂದು ವೇಳೆ ಮಾದರಿ ಕೊಟ್ಟಿರುವ ವ್ಯಕ್ತಿ ಫಲಿತಾಂಶ ಬರುವುದಕ್ಕೂ ಮೊದಲು ಸಾರ್ವಜನಿಕ ಸ್ಥಳದಲ್ಲಿ ಸಂಚಾರ ನಡೆಸುವುದು, ಕಚೇರಿಗೆ ಹೋಗುವುದು, ಅನಗತ್ಯವಾಗಿ ತಿರುಗಾಡುವುದನ್ನು ಮಾಡುವಂತಿಲ್ಲ ಎಂದು ಆರೋಗ್ಯ ಇಲಾಖೆ ಹೇಳಿದೆ.
ಒಂದು ವೇಳೆ ವೈರಸ್‌ ಫಲಿತಾಂಶ ಬರುವುದಕ್ಕೂ ಮೊದಲು ನಿಯಮ ಮೀರಿದರೆ ಸಾಂಕ್ರಾಮಿಕ ರೋಗಗಳ ಕಾಯ್ದೆ 1897ರ ಅನ್ವಯ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮಗಳನ್ನಯ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.
COVID 19 ಪರೀಕ್ಷೆಗೆ ಮಾದರಿ ಕೊಟ್ಟಿದ್ದಲ್ಲಿ ಫಲಿತಾಂಶ ಬರುವವರೆಗು ಆ ವ್ಯಕ್ತಿಗಳ ಐಸೊಲೇಷನ್ ಕಡ್ಡಾಯ.
Isolation/Quarantine of persons who have provided sample for COVID 19 testing.pic.twitter.com/j1MQHK03eX
— K'taka Health Dept (@DHFWKA)July 13, 2020

ಎರಡು ವರ್ಷದ ಮಗುವಿಗೆ ಬಂತೊಂದು ಕರೊನಾ ನೋಟಿಸ್‌!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:sixteen + one =
Remember me
