
ಬೆಂಗಳೂರು:ಇನ್ನಷ್ಟು ಕ್ರೀಯಾಶೀಲತೆಯಿಂದ ಸಾರ್ವಜನಿಕರಗೆ ಇನ್ನಷ್ಟು ತ್ವರಿತ ಗತಿಯಲ್ಲಿ ಸೇವೆ ಸಲ್ಲಿಸಲು ಕಾರ್ಯೋನ್ಮುಖರಾಗುವಂತೆ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಫರೀದ್ ಕರೆ ನೀಡಿದ್ದಾರೆ.ವಿಕಾಸಸೌಧದಲ್ಲಿ ವಿಧಾನಸಭೆಯ ಅಧಿಕಾರಿಗಳಿಗೆ ಒತ್ತಡ ನಿರ್ವಹಣೆ ಮತ್ತು ಸ್ಥಿತಿಸ್ಥಾಪಕತ್ವ ಅಭಿವೃದ್ಧಿ ಹಾಗೂ ಪರಿಣಾಮಕಾರಿ ಸಂವಹನ ಮತ್ತು ನಾಯಕತ್ವ ಅಭಿವೃದ್ಧಿ ಕುರಿತ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.ಕೆಲಸದಲ್ಲಿ ಎಲ್ಲರಿಗೂ ಒತ್ತಡ ಇರುವುದು ಸಹಜ. ಆದರೆ ಸಹನೆ ಕಳೆದುಕೊಳ್ಳಬಾರದು. ಸರ್ಕಾರಿ ಕಚೇರಿಗಳಲ್ಲಿ ನೂರು ಜನ ಮಾಡುವ ಕೆಲಸವನ್ನು 70 ಜನ ನಿರ್ವಹಿಸುವ ಪರಿಸ್ಥಿತಿಯಲ್ಲಿದೆ. ಆದರೂ ನಾವು ಸ್ವಪ್ರೇರಣೆಯಿಂದ ಉತ್ತಮವಾಗಿ ಕೆಲಸ ನಿರ್ವಹಿಸಬೇಕು. ಈ ತರಬೇತಿಯಿಂದ ಎಲ್ಲರೂ ಅತ್ಯುತ್ತಮ ಅಧಿಕಾರಿಗಳಾಗಿ ಹೊರಹೊಮ್ಮಬೇಕು. ಜೊತೆಗೆ ನಿಮ್ಮ ಸಿಬ್ಬಂದಿಗೂ ಈ ಕುರಿತು ತರಬೇತಿ ನೀಡಬೇಕು ಎಂದರು.ನಾವೆಲ್ಲರೂ ದೈಹಿಕವಾಗಿ ಮಾತ್ರವಲ್ಲದೇ ಮಾನಸಿಕವಾಗಿಯೂ ಸದೃಢರಾಗಬೇಕು. ಜೊತೆಗೆ ಬೇರೆಯವರಿಗೆ ಸಂತೋಷ ನೀಡಿ ಅವರ ಕಷ್ಟ ಸುಖಗಳಲ್ಲಿ ಭಾಗಿಯಾಗಬೇಕು ಎಂದರು.ಶಿಕ್ಷಣದ ಗುರಿ ಬರಿ ಅಂಕಗಳಿಕೆಗೆ ಅಷ್ಟೇ ಅಲ್ಲ. ವಿದ್ಯಾರ್ಥಿಗಳು ಸುಶಿಕ್ಷಿತವಾಗುವುದಲ್ಲದೇ, ಸತ್ಪ್ರಜೆಗಳಾಗಬೇಕು. ಸಮಸ್ಯೆಯಿಲ್ಲದ ಸಂಸಾರ, ಊರು, ವ್ಯಕ್ತಿಗಳಿಲ್ಲ. ಎಲ್ಲರಿಗೂ ಒತ್ತಡ, ಯೋಚನೆಗಳು ಇರುತ್ತವೆ. ಅದನ್ನು ಮೆಟ್ಟಿ ನಾವು ಉತ್ತಮವಾಗಿ ಕೆಲಸ ನಿರ್ವಹಿಸಬೇಕು. ನಾವು ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ನಮ್ಮಲ್ಲಿರುವ ಒತ್ತಡ ನಿರ್ವಹಣೆ ನಮ್ಮ ಕೈಯಲ್ಲಿದೆ ಎಂದರು.ಅಲಯನ್ಸ್ ವಿಶ್ವವಿದ್ಯಾಲಯದ ಡಾ.ತೋಸೇಂದ್ರ ದ್ವಿವೇದಿ ಮಾತನಾಡಿ ನಾವು ಜೀವನದಲ್ಲಿ ಬೇಕಿಲ್ಲದ ಪ್ರಮುಖವಲ್ಲದ ವಿಷಯಗಳ ಕುರಿತು ಚಿಂತಿಸುತ್ತೇವೆ. ಕೆಲವರಿಗೆ ಕೆಲಸ ಸ್ಥಳಗಳು, ಕುಟುಂಬ ನಿರ್ವಹಣೆಯಲ್ಲಿ ಒತ್ತಡ ಇರುತ್ತದ್ದಲ್ಲದೇ, ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸಲು ಒತ್ತಡವೆನಿಸುತ್ತದೆ. ಒತ್ತಡ ನಿರ್ವಹಣೆಗೆ ವ್ಯಾಯಾಮ ಬಹಳ ಸಹಕಾರಿ ಎಂದರು.ಕಾರ್ಯಕ್ರಮದಲ್ಲಿ ವಿಧಾನಸಭೆಯ ಕಾರ್ಯದರ್ಶಿ ವಿಶಾಲಾಕ್ಷಿ ಎಂ.ಕೆ, ಅಲಯನ್ಸ್ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಜನರಲ್ ಸುರೇಖಾ ಶೆಟ್ಟಿ, ಪ್ರಾಧ್ಯಾಪಕರಾದ ಉಮಾ ಶ್ರೀಧರ್ ಉಪಸ್ಥಿತರಿದ್ದರು.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:eleven − one =
Remember me
