ಬೆಂಗಳೂರು:ರಾಜ್ಯದ 1038 ಕೆರೆಗಳ ಹೂಳೆತ್ತಿ ಅಭಿವೃದ್ಧಿಪಡಿಸುವುದರ ಜೊತೆಗೆ ಅಕ್ಕಪಕ್ಕದ ರಾಷ್ಟ್ರೀಯ ಹೆದ್ದಾರಿ ಯೋಜನೆಗೂ ಅವುಗಳನ್ನು ಬಳಸಿಕೊಳ್ಳುವ ನೂತನ ಯೋಜನೆಗೆ ಕೇಂದ್ರದ ಭೂ ಸಾರಿಗೆ ಮತ್ತು ಹೆದ್ದಾರಿ ಮಂತ್ರಾಲಯದ ಸಹಯೋಗದಲ್ಲಿ ಚಾಲನೆ ನೀಡಲು ನಮ್ಮ ಲೋಕೋಪಯೋಗಿ ಇಲಾಖೆಯಿಂದಲೂ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಬಗ್ಗೆ ಸೂಕ್ತ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲರು ತಿಳಿಸಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಇಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ದೇಶದಲ್ಲೇ ಮೊದಲ ಬಾರಿಗೆ ಜಾರಿಗೊಳ್ಳುತ್ತಿರುವ ಈ ಮಹತ್ವಾಕಾಂಕ್ಷಿ ಯೋಜನೆಗೆ ಕೇಂದ್ರ ಭೂ ಸಾರಿಗೆ ಸಚಿವರಾದ ಶ್ರೀ ನಿತಿನ್ ಗಡ್ಕರಿ ಅವರು ವಿಶೇಷ ಆಸಕ್ತಿ ವಹಿಸಿದ್ದಾರೆ. ಇತ್ತೀಚೆಗೆ ಅವರು ನಮ್ಮ ರಾಜ್ಯಕ್ಕೆ ಭೇಟಿ ಕೊಟ್ಟಾಗ ಈ ಯೋಜನೆಯನ್ನು ಅನುಷ್ಠಾನಗೊಳಿಸುವುದಾಗಿ ಘೋಷಿಸಿದ್ದರು. ಅಷ್ಟೇ ಅಲ್ಲ, ಕಳೆದ ಬಜೆಟ್ಟಿನಲ್ಲಿ ನಮ್ಮ ಸನ್ಮಾನ್ಯ ಮುಖ್ಯಮಂತ್ರಿಯವರಾದ ಶ್ರೀ ಬಸವರಾಜ ಬೊಮ್ಮಾಯಿಯವರು ಈ ಯೋಜನೆಯನ್ನು ಅನುಷ್ಠಾನಗೊಳಿಸುವುದಾಗಿ ಘೋಷಿಸಿದ್ದರು. ಅದರಂತೆ ನಮ್ಮ ರಾಜ್ಯದಲ್ಲಿನ 1038 ಕೆರೆಗಳನ್ನು ಈ ಯೋಜನೆಗೆ ಸೇರಿಸಲು ಸಣ್ಣ ನೀರಾವರಿ ಇಲಾಖೆಯಿಂದಲೂ ಸಹಮತಿ ಪಡೆಯಲಾಗಿದೆ. ಆ ಪ್ರಕಾರವಾಗಿ ನಮ್ಮ ಲೋಕೋಪಯೋಗಿ ಇಲಾಖೆಯ ಉಸ್ತುವಾರಿಯಲ್ಲಿ ಈ ಯೋಜನೆಯನ್ನು ಸಂಪೂರ್ಣ ಯಶಸ್ವಿಗೊಳಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಭೂ ಸಾರಿಗೆ ಮತ್ತು ಹೆದ್ದಾರಿ ಇಲಾಖೆಯ ವತಿಯಿಂದ ಗುತ್ತಿಗೆದಾರರು ಈವರೆಗೆ ಹೆದ್ದಾರಿ ಅಭಿವೃದ್ಧಿ ಕೈಗೊಳ್ಳುವಾಗ ಅವುಗಳಿಗೆ ಅವಶ್ಯವಿರುವ ಮಣ್ಣನ್ನು ಸ್ಥಳೀಯವಾಗಿ ಖರೀದಿಸುತ್ತಿದ್ದರು. ಆದರೆ ಹೆದ್ದಾರಿ ಅಕ್ಕಪಕ್ಕದ ಕೆರೆ ಮತ್ತಿತರ ಜಲಮೂಲಗಳಲ್ಲಿ ಹೂಳು ತುಂಬಿ ನೀರಿನ ಲಭ್ಯತೆಗೆ ಸಮಸ್ಯೆಯಾಗುತ್ತಿತ್ತು. ಆದ್ದರಿಂದ ಹೆದ್ದಾರಿ ಅಭಿವೃದ್ಧಿ ಕೈಗೊಳ್ಳುವಾಗ ಇವುಗಳಿಗೆ ಅವಶ್ಯವಿರುವ ಮಣ್ಣನ್ನು ಇಂತಹ ಕೆರೆಗಳಿಂದಲೇ ತೆಗೆಸಿ ರಸ್ತೆಗೆ ಬಳಸಿದರೆ ಒಂದೆಡೆ ಕೆರೆಯ ಜೀರ್ಣೋದ್ಧಾರವಾಗುತ್ತದೆ, ಜೊತೆಗೆ ಹೆದ್ದಾರಿ ನಿರ್ಮಾಣಕ್ಕೆ ಅಗತ್ಯವಾದ ಮಣ್ಣು ಕೂಡಾ ಸುಲಭವಾಗಿ ದೊರೆತಂತಾಗುತ್ತದೆ. ಅಷ್ಟೇ ಅಲ್ಲ ಹೆದ್ದಾರಿಯ ಅಕ್ಕಪಕ್ಕ ಕೆರೆ, ಸರೋವರಗಳು ನಿರ್ಮಾಣಗೊಂಡು ಉತ್ತಮ ಪರಿಸರ ಸೃಷ್ಟಿಗೂ ಕಾರಣವಾಗುತ್ತದೆ, ಪ್ರವಾಸಿಗರಿಗೂ ಆಕರ್ಷಣೆಯಾಗುತ್ತದೆ ಎಂದು ಸಿ.ಸಿ.ಪಾಟೀಲರು ವಿವರಿಸಿದ್ದಾರೆ.
ಆಜಾದೀ ಕಾ ಅಮೃತ ಮಹೋತ್ಸವದ ಆಚರಣೆಯ ಅಂಗವಾಗಿಹೆದ್ದಾರಿ ಮಂತ್ರಾಲಯವು “ಅಮೃತ ಸರೋವರ ನಿರ್ಮಾಣ” ಯೋಜನೆಯನ್ನು ನಿರ್ವಹಿಸಲು ನಮ್ಮ ರಾಜ್ಯಕ್ಕೆ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರವನ್ನು ಅನುಷ್ಠಾನ ಸಂಸ್ಥೆಯನ್ನಾಗಿ ನೇಮಿಸಿದೆ. ಗುತ್ತಿಗೆದಾರರು ಅಥವಾ ರಸ್ತೆ ನಿರ್ಮಾಣ ಪ್ರಾಧಿಕಾರವು ಕೆರೆಗಳಿಂದ ಹೂಳು ತೆಗೆಯಲು ಸರ್ಕಾರಕ್ಕೆ ಯಾವುದೇ ಶುಲ್ಕ ನೀಡಬೇಕಾಗಿಲ್ಲ ಮತ್ತು ಈ ಹೂಳನ್ನು ರಸ್ತೆ ನಿರ್ಮಾಣಕ್ಕಲ್ಲದೇ ಬೇರೆ ಉದ್ದೇಶಕ್ಕೆ ಬಳಸುವಂತಿಲ್ಲ. ಕೆರೆಯ ಸಂರಕ್ಷಣೆಗೆ ಅಪಾಯವಾಗದಂತೆ ಏನೆಲ್ಲ ಮುಂಜಾಗ್ರತೆ ಕೈಗೊಳ್ಳಬೇಕು ಎಂಬ ಬಗ್ಗೆ ನಮ್ಮ ಲೋಕೋಪಯೋಗಿ ಇಲಾಖೆಯಿಂದ ವಿವರವಾದ ಮಾರ್ಗಸೂಚಿಯನ್ನು ಈಗಾಗಲೇ ಹೊರಡಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳೊಂದಿಗೂ ಈಗಾಗಲೇ ಈ ಬಗ್ಗೆ ಹಲವು ಬಾರಿ ಸಭೆ ನಡೆಸಿ ಈ ಯೋಜನೆಯನ್ನು ಸಿದ್ಧಪಡಿಸಲಾಗಿದೆ ಎಂದು ಸಿ.ಸಿ.ಪಾಟೀಲರು ತಿಳಿಸಿದ್ದಾರೆ.
ವಿಶ್ವ ಎಮೋಜಿ ದಿನ 2022: ಅತಿ ಹೆಚ್ಚು ಬಳಕೆಯಾಗುವ ಎಮೋಜಿಗಳ ಪಟ್ಟಿ ಇಲ್ಲಿವೆ

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:one × 4 =
Remember me
