ಬಾಗಲಕೋಟೆ:ಕಳೆದೆರಡು ದಿನಗಳಿಂದ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರಿಗೆ ಜೀವ ಬೆದರಿಕೆ ಕರೆಗಳು ಬರುತ್ತಿದ್ದು, ಇದರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.
ಎರಡು ದಿನಗಳಲ್ಲಿ 5 ಕರೆಗಳು ಬಂದಿವೆ. ಕರೆ ಸ್ವೀಕರಿಸಿದ ಮುತಾಲಿಕ್​ಗೆ ಕರೆ ಮಾಡಿದವರು ಧಮ್ಕಿ ನೀಡಿದ್ದಲ್ಲದೇ, ಕೊಲೆ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಬಾಗಲಕೋಟೆಯ ಬನಹಟ್ಟಿಯಲ್ಲಿ ಹೇಳಿಕೆ ನೀಡಿರುವ ಪ್ರಮೋದ್​ ಮುತಾಲಿಕ್​ ‘ಕೊಲೆ ಬೆದರಿಕೆ ಹಾಕುವವರಿಗೆ ನಾನು ಎಚ್ಚರಿಕೆ ಕೊಡುತ್ತಿದ್ದೇನೆ .ನಿಮ್ಮ ಬೊಗಳುವಿಕೆಯನ್ನು ನಿಲ್ಲಿಸಿ. ನಾವು ಸಂವಿಧಾನ, ಕಾನೂನು, ಪ್ರಜಾಪ್ರಭುತ್ವದ ಆಧಾರದ ಮೇಲೆ ಸಂಘಟನೆ ಮಾಡ್ತಿದ್ದೇವೆ. ನಾನು ಸಾಯೋವರೆಗೂ ಹಿಂದೂತ್ವ ಹಾಗೂ ದೇಶಕ್ಕಾಗಿ ಕೆಲಸವನ್ನು ಮಾಡುತ್ತೇನೆ. ನಿಮ್ಮ ಕೊಲೆ ಬೆದರಿಕೆಗಳಿಗೆ ನಾನು ಆತಂಕಗೊಳ್ಳುವುದಿಲ್ಲ ಎಂದು ಬೆದರಿಕೆ ಕರೆ ಮಾಡಿದವರಿಗೆ ಮುತಾಲಿಕ್ ನೇರವಾಗಿ ಸವಾಲ್​ ಹಾಕಿದ್ದಾರೆ.
ಈ ಬೆದರಿಕೆಯ ಕುರಿತು ನಾನು ಈಗಾಗಲೇ ದೂರು ನೀಡಿದ್ದೇನೆ. ಕರೆ ಮಾಡಿದ್ದು ಯಾರು ಎಂಬುದು ನನಗೆ ಗೊತ್ತಿಲ್ಲ. ಫೋನ್​​ ನಂಬರನ್ನು ಪೊಲೀಸರಿಗೆ ಕೊಟ್ಟಿದ್ದೇನೆ. ಮುಂದಿನ ಕೆಲಸವೇನಿದ್ದರೂ ಪೊಲೀಸರದ್ದು. ಫೋನ್​ ಮಾಡಿದ್ದು ಯಾರು? ಏನು ? ಎಂಬುದನ್ನು ಅವರೇ ಶೋಧಿಸಬೇಕು ಎಂದು ಹೇಳಿದ್ದಾರೆ.
ಈಗಾಗಲೇ 2023 ರ ವಿಧಾನಸಭೆ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಮುತಾಲಿಕ್​ ತಮ್ಮ ಆಯ್ಕೆಯ ಕ್ಷೇತ್ರದ ಬಗ್ಗೆ ಡಿಸೆಂಬರ್​​ ಮೊದಲ ವಾರದಲ್ಲಿ ತಿಳಿಸಲಿದ್ದಾರೆ ಎನ್ನಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − ten =
Remember me
