ಬೆಂಗಳೂರು:ಮುಂದೂಡಿರುವ ಎಸ್​ಎಸ್​ಎಲ್​ಸಿ ಪರೀಕ್ಷೆ ದಿನವನ್ನು ಲಾಕ್​ಡೌನ್​ ಅವಧಿ ಮುಗಿದ ನಂತರ ನಿರ್ಧಾರ ಮಾಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣಸಚಿವಎಸ್‌.ಸುರೇಶಕುಮಾರ್‌ ​ ತಿಳಿಸಿದ್ದಾರೆ.
ಪರೀಕ್ಷೆ ದಿನಾಂಕ ನಿಗದಿ ಹಾಗೂ ವಿದ್ಯಾರ್ಥಿಗಳಿಗೆ ಧೈರ್ಯದ ಮಾತು ಹೇಳಿರುವ ವಿಡಿಯೋ ಅನ್ನು ಅವರು ಸಾಮಾಜಿ ಜಾಲ ತಾಣದಲ್ಲಿ ಅಪ್​ಲೋಡ್​ ಮಾಡಿದ್ದಾರೆ.
ಇಂದು ಎಸ್​ಎಸ್​ಎಲ್​ಸಿ ಪರೀಕ್ಷೆ ಆರಂಭವಾಗಬೇಕಿತ್ತು. ರಾಜ್ಯದ 8.5 ಲಕ್ಷ ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದ್ದರು. ಕರೊನಾ ವೈರಸ್​ ಭೀತಿಯಿಂದ ಮುಂದೂಡಲಾಯಿತು. ರಾಷ್ಟ್ರದಲ್ಲಿ ಘೋಷಿಸಿರುವ ಲಾಕ್​ಡೌನ್​ ಅವಧಿ ಮುಗಿದ ನಂತರ ಪರೀಕ್ಷೆ ದಿನಾಂಕ ನಿಗದಿಪಡಿಸಲಾಗುವುದು. ಅಲ್ಲಿವರೆಗೆ ವಿದ್ಯಾರ್ಥಿಗಳು ಉತ್ಸಾಹ ಕಳೆದುಕೊಳ್ಳದೆ ಮನೆಯಲ್ಲೇ ಇದ್ದು ಅಭ್ಯಾಸ ಮಾಡಿ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದ್ದಾರೆ.
ಜೀವನದಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆಯುವುದೇ ಮುಖ್ಯ ಅಲ್ಲ. ಅದಕ್ಕಿಂತ ಪ್ರಮುಖವಾದ ಪರೀಕ್ಷೆಗಳನ್ನು ಎದುರಿಸಬೇಕಾಗಿದೆ. ಅದರಲ್ಲೂ ಕರೊನಾ ವೈರಸ್​ ಎದುರಿಸುವುದು ದೊಡ್ಡ ಯುದ್ಧವಾಗಿದೆ. ಹೀಗಾಗಿ ಪರೀಕ್ಷೆ ಬರೆಯಲಿಲ್ಲ ಎಂಬ ಭೀತಿ ಬಿಟ್ಟು, ಅಪ್ಪ-ಅಮ್ಮನ ಜತೆ ಮನೆಯಲ್ಲೇ ಇದ್ದು ದಿನಕ್ಕೆ ಒಂದು ವಿಷಯದಂತೆ ಎಲ್ಲ ವಿಷಯಗಳನ್ನು ಅಭ್ಯಾಸ ಮಾಡಿ ಎಂದು ಮನವಿ ಮಾಡಿದ್ದಾರೆ.
ಸಮಾಜ ಹಾಗೂ ಗಣಿತ ವಿಷಯಗಳು ತುಂಬ ಕಷ್ಟ ಎಂದು ವಿದ್ಯಾರ್ಥಿಗಳು ಹೇಳುತ್ತಿದ್ದಾರೆ. ಹೀಗಾಗಿ ಈ ವಿಷಯಗಳಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ನೀಡಿರುವ ಎಲ್ಲ ಸಾಮಗ್ರಿಗಳನ್ನು ಕೂಡಿಸಿಕೊಂಡು ಹೆಚ್ಚು ಸಮಯ ಇರುವುದರಿಂದ ಅಭ್ಯಾಸ ಮಾಡಿ. ಮನೆಯಲ್ಲೇ ಇರಿ ಹೊರಗೆ ಬರಬೇಡಿ. ಕರೊನಾ ವಿರುದ್ಧ ಯುದ್ಧ ಮಾಡಿ ಗೆಲ್ಲಿ. ನಂತರ ಎಸ್​ಎಸ್​ಎಲ್​ಸಿ ಪರೀಕ್ಷೆ ಗೆಲುವು ಸುಲಭವಾಗುತ್ತದೆ ಎಂದು ಅವರು ವಿಡಿಯೋದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ್ದಾರೆ.

ಕರೊನಾ ವೈರಸ್​ ಸೋಂಕು ತಡೆಯಲು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗೆ ಮಣ್ಣು ಸುರಿದ ಗ್ರಾಮಸ್ಥರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × one =
Remember me
