ಬೆಂಗಳೂರು: ಎಸ್‌ಎಸ್‌ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೆಚ್ಚದ ಹಣವನ್ನು ವಿದ್ಯಾರ್ಥಿಗಳಿಂದಲೇ ವಸೂಲಿ ಮಾಡಬೇಕು ಎಂದು ಆದೇಶ ಹೊರಡಿಸಿರುವ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸರ್ಕಾರವನ್ನು ಗತಿಗೆಟ್ಟ ಸರ್ಕಾರ ಎಂದು ಕಟುವಾಗಿ ಟೀಕಿಸಿರುವ ಅವರು, ಕೂಡಲೇ ಈ ಆದೇಶವನ್ನು ವಾಪಸ್ ಪಡೆಯಬೇಕು, ಪರೀಕ್ಷಾ ವೆಚ್ಚವನ್ನು ಸರ್ಕಾರವೇ ಭರಿಸಬೇಕು ಎಂದು ಆಗ್ರಹಿಸಿದ್ದಾರೆ.
ಜನತೆಗೆ 5 ಗ್ಯಾರಂಟಿ ಕೊಟ್ಟೆವು ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ಅದೆಷ್ಟು ಅಧಃಪತನಕ್ಕೆ ಹೋಗಿದೆ ಎನ್ನುವುದಕ್ಕೆ ಸಾಕ್ಷ್ಯ ಇಲ್ಲಿದೆ. ಒಂದು ಕೈಯ್ಯಲ್ಲಿ ಕೊಟ್ಟು ಹತ್ತು ಕೈಗಳಲ್ಲಿ ರಾವಣನಂತೆ ಕಸಿದುಕೊಳ್ಳುತ್ತಿರುವ ಸರ್ಕಾರ, ಈಗ ಎಸ್‌ಎಸ್‌ಎಲ್‌ಸಿ ಮಕ್ಕಳ ಕಿಸೆಗೂ ಕೈ ಹಾಕಿದೆ ಎಂದು ಕಿಡಿಕಾರಿದ್ದಾರೆ.
ಫೆ. 26ರಿಂದ ಮಾರ್ಚ್ 3ರವರೆಗೂ ನಡೆಯಲಿರುವ 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಗೆ ಆಗುವ ವೆಚ್ಚವನ್ನು ನಾಚಿಕೆಗೆಟ್ಟ ಸರ್ಕಾರ ಮಕ್ಕಳಿಂದಲೇ ವಸೂಲಿ ಮಾಡಲು ಹೊರಟಿದೆ ಎಂದು ದೂರಿದ್ದಾರೆ.
ಗ್ಯಾರಂಟಿ ಕೊಟ್ಟು ಬಡವರ ಉದ್ಧಾರ ಮಾಡುತ್ತಿದ್ದೇವೆ ಎಂದು ಬೀಗುವ ಸರ್ಕಾರಕ್ಕೆ, ಅದೇ ಬಡಮಕ್ಕಳಿಗೆ 50 ರೂ. ಖರ್ಚು ಮಾಡಲು ಗತಿ ಇಲ್ಲವೇ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + 20 =
Remember me
