ಶಿರಸಿ:2019-20ನೇ ಸಾಲಿನ ಎಸ್​ಎಸ್ಎಲ್​ಸಿ ಪರೀಕ್ಷೆಯಲ್ಲಿ ಸರ್ಕಾರಿ ಶಾಲೆಯ ವಿದ್ಯಾರ್ಥಿನಿ ಸನ್ನಿಧಿ ಮಹಾಬಲೇಶ್ವರ ಹೆಗಡೆ ಟಾಪರ್​ ಆಗಿ ಹೊರಹೊಮ್ಮಿದ್ದಾರೆ. 625ಕ್ಕೆ 625 ಅಂಕ ಪಡೆದ ಸನ್ನಿಧಿ, ಶಿರಸಿಯ ಸರ್ಕಾರಿ ಮಾರಿಕಾಂಬಾ ಪ್ರೌಢಶಾಲೆಯ ವಿದ್ಯಾರ್ಥಿನಿ.
ಕರೊನಾ ಆತಂಕದ ನಡುವೆ ಎಲ್ಲಿ ಪರೀಕ್ಷೆ ರದ್ದಾಗುತ್ತದೋ ಎಂದು ಬೇಸರಗೊಂಡಿದ್ದ ಸನ್ನಿಧಿಗೆ ಎಕ್ಸಾಂ ಆರಂಭವಾದ ದಿನ ಖುಷಿಗೆ ಪಾರವೇ ಇರಲಿಲ್ಲವಂತೆ. ಈ ಬಗ್ಗೆ ಅವರೇ ಹೇಳಿಕೊಂಡಿದ್ದು, ‘ನಾನು ಲಾಕ್​ಡೌನ್​ ವೇಳೆಯೂ ಪರೀಕ್ಷೆಗೆ ನಿರಂತರ ಅಭ್ಯಾಸ ಮಾಡುತ್ತಿದೆ. ಯಾವಾಗ ಪರೀಕ್ಷೆ ಮಾಡುತ್ತಾರೋ ಎಂದು ಕಾಯುತ್ತಿದ್ದೆ. ಈ ನಡುವೆ ಪರೀಕ್ಷೆ ರದ್ದಾಗುತ್ತೆ ಎಂಬ ಸುದ್ದಿಯೂ ಹರಿದಾಡಿತ್ತು. ಆಗ ತುಂಬಾ ನಿರಾಶೆಯೂ ಆಯ್ತು. ಸದ್ಯ ಪರೀಕ್ಷೆ ನಡೆಸಿದ್ದು ಖುಷಿಯಾಯ್ತು’ ಎಂದಿದ್ದಾರೆ.
ಇದನ್ನೂ ಓದಿರಿಎಸ್​ಎಸ್​ಎಲ್​ಸಿ ಟಾಪರ್​ ಧೀರಜ್​ ರೆಡ್ಡಿಗೆ ಲಾಕ್​ಡೌನ್​ ಸಮಯವೇ ವರವಾಯ್ತು!
ಪ್ರಗತಿ ನಗರದ ಡಾ.ಮಹಾಬಲೇಶ್ವರ ಹೆಗಡೆ ಹಾಗೂ ವೀಣಾ ಹೆಗಡೆ ದಂಪತಿಯ ಮುದ್ದಿನ ಮಗಳು ಸನ್ನಿಧಿ. ತನ್ನ ಸಾಧನೆಗೆ ಶಿಕ್ಷಕ ವೃಂದ ಮತ್ತು ಪಾಲಕರ ಸಹಕಾರವೇ ಪ್ರೇರಣೆ ಎಂದ ಸನ್ನಿಧಿ, ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದ್ದಾರೆ. ಇವರ ತಂದೆ ಮಹಾಬಲೇಶ್ವರ ಹೆಗಡೆ ಅವರು ಕಾರವಾರದ ಆರೋಗ್ಯ ಇಲಾಖೆಯಲ್ಲಿ ಹಿರಿಯ ವೈದ್ಯ. ತಂದೆಯಂತೆಯೇ ಡಾಕ್ಟರ್​ ಆಗುವ ಕನಸು ಕಟ್ಟಿಕೊಂಡಿದ್ದಾರೆ ಸನ್ನಿಧಿ.
ವಿಜಯವಾಣಿಜತೆ ಮಾತನಾಡಿದ ಸನ್ನಿಧಿ, ‘ಪ್ರಥಮ ಸ್ಥಾನ ಬರುವ ನಿರೀಕ್ಷೆಯಿತ್ತು. ಅದಕ್ಕೆ ತಕ್ಕಂತೆ ಅಭ್ಯಾಸವನ್ನೂ ಮಾಡಿದ್ದೆ. ನಾನು ಯಾವುದೇ ಟ್ಯೂಷನ್​ಗೂ ಹೋಗಿರಲಿಲ್ಲ. ಕರೊನಾ ಸಂದರ್ಭದಲ್ಲಿ ಶಾಲೆಯಲ್ಲಿ ರಚಿಸಿದ ವಾಟ್ಸ್​ಆ್ಯಪ್​ ಗ್ರೂಪ್​, ಜೂಮ್​ ಮೀಟಿಂಗ್​ ಮೂಲಕ ನಿರಂತರತೆ ಕಾಪಾಡಿಕೊಂಡು, ಪಾಠಗಳ ಪುನರ್​ ಮನನ ಮಾಡಿಕೊಂಡಿದ್ದೆ. ಓದುವ ಮನಸ್ಸು ಬಂದಾಗ ಶ್ರದ್ಧೆಯಿಂದ ಓದುತ್ತಿದ್ದೆ. ಮನೆಯವರ ಸಹಕಾರ ಕೂಡ ಲಭಿಸಿದ ಕಾರಣ ಉತ್ತಮ ಫಲಿತಾಂಶ ಬರಲು ಸಾಧ್ಯವಾಯಿತು’ ಎಂದರು.
ಹಲವು ವರ್ಷಗಳಿಂದ ಉತ್ತಮ ಸಾಧನೆ ಮಾಡಿಕೊಂಡು ಬಂದಿರುವ ಶಿರಸಿಯ ಮಾರಿಕಾಂಬಾ ಸರ್ಕಾರಿ ಪ್ರೌಢಶಾಲೆಗೆ ಸನ್ನಿಧಿಯು ರಾಜ್ಯಕ್ಕೆ ಟಾಪರ್ ಆಗಿದ್ದು ಮತ್ತಷ್ಟು ಹಿರಿಮೆ ತಂದುಕೊಟ್ಟಿದೆ. ಸನ್ನಿಧಿಯ ಸಾಧನೆಗೆ ಶಿಕ್ಷಕ ವೃಂದ ಹಾಗೂ ಪಾಲಕರು ಸಂತಸ ವ್ಯಕ್ತಪಡಿಸಿದ್ದಾರೆ.
ಇವರೇ ಎಸ್​ಎಸ್​ಎಲ್​ಸಿ ಟಾಪರ್ಸ್, 625ಕ್ಕೆ 625 ಅಂಕ ಪಡೆದ ಸಾಧಕರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + seventeen =
Remember me
