ಬೆಂಗಳೂರು:2020-21ನೇ ಶೈಣಿಕ ಸಾಲಿನ ಪದವಿ ಮತ್ತು ಸ್ನಾತಕೋತ್ತರ ತರಗತಿಯನ್ನು ಯಾವಾಗ ಆರಂಭಿಸಬೇಕು ಎಂಬ ಬಗ್ಗೆ ತೀರ್ಮಾನ ಕೈಗೊಳ್ಳಲು ಉನ್ನತ ಶಿಕ್ಷಣ ಇಲಾಖೆ ತಾಲೀಮು ಆರಂಭಿಸಿದೆ.
ಉಪ ಮುಖ್ಯಮಂತ್ರಿ ಡಾ.ಸಿ.ಎನ್​.ಅಶ್ವತ್ಥನಾರಾಯಣ ಅ.20ರಂದು ಉನ್ನತ ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ಪ್ರಥಮ ಸಭೆಯನ್ನು ನಡೆಸಲಿದ್ದು, ಈ ಹಂತದಲ್ಲಿ ಕಾಲೇಜು ಆರಂಭ ಸೂಕ್ತವೇ? ಸಾಧ್ಯವೇ ಎಂಬ ಬಗ್ಗೆ ಚರ್ಚೆ ನಡೆಸಲಿದ್ದಾರೆ.
ಈ ಸಂಬಂಧ ‘ವಿಜಯವಾಣಿ’ಗೆ ಪ್ರತಿಕ್ರಿಯೆ ನೀಡಿದ ಡಾ.ಸಿ.ಎನ್​.ಅಶ್ವತ್ಥನಾರಾಯಣ, ಕರೊನಾ ಸಾಂಕ್ರಾಮಿಕ ಹರಡುತ್ತಿರುವ ಸಂದರ್ಭದಲ್ಲಿ ಕಾಲೇಜು ಆರಂಭಿಸುವ ಕುರಿತು ಸರ್ಕಾರದ ನಿಲುವು ಏನಾಗಿರಬೇಕು ಎಂಬ ಬಗ್ಗೆ ತೀರ್ಮಾನ ಕೈಗೊಳ್ಳಲು ಸಾಕಷ್ಟು ಹಂತದ ತಯಾರಿ ಬೇಕಾಗುತ್ತದೆ. ಮೊದಲ ಸಭೆ ಮಂಗಳವಾರ ನಡೆಸುತ್ತಿದ್ದೇವೆ, ಮುಂದೆ ಹಲವು ಸುತ್ತಿನ ಸಭೆ ನಡೆಸಲಾಗುತ್ತದೆ ಎಂದರು.
ಈ ಹಂತದಲ್ಲಿ ತರಗತಿ ಆರಂಭದ ಬಗ್ಗೆ ಅನಿಶ್ಚಿತತೆ ಇದೆ. ಅಧಿಕಾರಿಗಳು, ತಜ್ಞರ ಜತೆ ಸಭೆ ನಡೆಸಿ ಅಭಿಪ್ರಾಯ ಪಡೆಯಬೇಕಾಗುತ್ತದೆ. ಬಳಿಕ ಮುಖ್ಯಕಾರ್ಯದರ್ಶಿ ಹಂತದಲ್ಲಿ ಸಭೆ ನಡೆಸಬೇಕಾಗುತ್ತದೆ ಎಂದು ವಿವರಿಸಿದ ಡಿಸಿಎಂ, ನವೆಂಬರ್​ನಲ್ಲಿ ಕಾಲೇಜು ಆರಂಭಿಸುವ ಗುರಿ ಇದ್ದರೂ ಯಾವುದೇ ತರಾತುರಿ ಮಾಡಲ್ಲ. ಪರಿಸ್ಥಿತಿ ಅವಲೋಕಿಸಿ, ಸಾಧಕ, ಬಾಧಕ ಚರ್ಚೆ ಮಾಡಿ ನಿರ್ಧಾರ ಮಾಡುತ್ತೇವೆ ಎಂದರು.
ಈಗಾಗಲೇ ಆನ್​ಲೈನ್​ ಮೂಲಕ ತರಗತಿಗಳು ನಡೆಯುತ್ತಿದ್ದರೂ ಅವು ಸ್ಥಳೀಯ ವಾತಾವರಣಕ್ಕೆ ಪರಿಣಾಮಕಾರಿಯಾಗಿಲ್ಲ. ಅದರಲ್ಲೂ ವೃತ್ತಿ ಶಿಕ್ಷಣ ಕೋರ್ಸ್​ ವಿದ್ಯಾರ್ಥಿಗಳಿಗೆ ಇದು ಹೆಚ್ಚು ಸಮಸ್ಯೆಯೊಡ್ಡಲಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಕಾಲೇಜು ಆರಂಭಕ್ಕೆ ಪರ್ಯಾಯ ಮಾರ್ಗ ಹುಡುಕಾಡುತ್ತಿದೆ ಎಂದು ಮೂಲಗಳು ತಿಳಿಸಿವೆ.
ವಿದ್ಯಾರ್ಥಿಗಳಿಗೆ ಪದವಿ ಅಂತಿಮ ವರ್ಷ ಮುಖ್ಯ, ಒಂದೊಮ್ಮೆ ಅದು ಪರಿಪೂರ್ಣವಾಗಿ ಮುಗಿಯದೇ ಇದ್ದರೆ ವಿದ್ಯಾರ್ಥಿಗಳ ಔದ್ಯೋಗಿಕ ಭವಿಷ್ಯದ ಮೇಲೂ ಪರಿಣಾಮ ಬೀರಲಿದೆ. ಈ ಕಾರಣಕ್ಕೆ ಸರ್ಕಾರ ಕೂಡ ಚಿಂತಿತವಾಗಿದೆ.
ಅಪ್ಪನಾಗೋ ಸಂಭ್ರಮದ ಘಳಿಗೆಯನ್ನ ಮೊದಲೇ ಅನುಭವಿಸಿದ್ದ ಚಿರು..!

ಗಾಯಗೊಂಡ ಲಕ್ಷ್ಮೀ ಫೋಟೋ ಹಾಕಿ ಅಸಮಾಧಾನ ಹೊರಹಾಕಿದ್ರು ನಟ ದರ್ಶನ್​ ಪತ್ನಿ!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:16 + nineteen =
Remember me
