ಬೆಂಗಳೂರು:ಸರ್ಕಾರಿ ನೌಕರರ ಮುಷ್ಕರಕ್ಕೆ ಮಣಿದಿರುವ ರಾಜ್ಯ ಸರ್ಕಾರ, ಸದ್ಯ ಮೂಲ ವೇತನದ ಶೇಕಡ 17 ರಷ್ಟು ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಲು ನಿರ್ಧರಿಸಿದೆ. ಈ ಆದೇಶ ಮುಂದಿನ ತಿಂಗಳು ಏಪ್ರಿಲ್ 1ರಿಂದ ಜಾರಿಗೆ ಬರಲಿದೆ. ವೇತನ ಹೆಚ್ಚಳದ ನೂತನ ಅದೇಶದಿಂದ ಸದ್ಯ ಸರ್ಕಾರದ ಬೊಕ್ಕಸಕ್ಕೆ 6,000 ಕೋಟಿ ರೂ.ಗಳನ್ನು ಹೆಚ್ಚುವರಿ ಹೊರೆ ಬೀಳುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.
ಈ ಬಾರಿಯ ಬಜೆಟ್​ನಲ್ಲಿ ಸರ್ಕಾರಿ ನೌಕರರ ಹೆಚ್ಚುವರಿ ವೇತನಕ್ಕೆ 6 ಸಾವಿರ ಕೋಟಿ ರೂ. ಮೀಸಲಿಡಲಾಗಿತ್ತು. ಆದರೆ ನೂತನ ಆದೇಶದಿಂದ ಸರ್ಕಾರ ವಾರ್ಷಿಕ 10,800 ಕೋಟಿ ರೂ. ಮೀಸಲಿಡಬೇಕಾಗಿದೆ. ಇದು ಸರ್ಕಾರದ ಅಂದಾಜಿಗಿಂತ 4,800 ಕೋಟಿ ರೂ. ಹೆಚ್ಚುವರಿ ಹೊರೆಯಾಗಲಿದೆ ಎಂದು ಲೆಕ್ಕಾಚಾರ ಹಾಕಲಾಗಿದೆ. ಇನ್ನು ಮುಂದೆ ಪ್ರತಿ ತಿಂಗಳು ಸರ್ಕಾರಿ ನೌಕರರಿಗೆ ವೇತನ ನೀಡಲು 900 ಕೋಟಿ ರೂ. ಹೆಚ್ಚುವರಿಯಾಗಿ ಮೊತ್ತ ಬರಿಸಬೇಕಾಗಿದೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:4 + 4 =
Remember me
