ಬೆಂಗಳೂರು:ಕರೊನಾ ವೈರಸ್ ಹಾವಳಿಯಿಂದಾಗಿ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯ ಸರ್ಕಾರ ಅಭಿವೃದ್ಧಿ ಕಾರ್ಯಗಳನ್ನು ಮುಂದುವರಿಸಲು 33 ಸಾವಿರ ಕೋಟಿ ರೂ. ಸಾಲ ಪಡೆಯಲು ನಿರ್ಧರಿಸಿದ್ದು, ಅದಕ್ಕೆ ಮಂಗಳವಾರ ಸಚಿವ ಸಂಪುಟ ಸಭೆಯ ಒಪ್ಪಿಗೆ ಪಡೆದಿದೆ.
ಕೇಂದ್ರ ಸರ್ಕಾರ ರಾಜ್ಯಗಳಿಗೆ ನೀಡಬೇಕಾಗಿದ್ದ ಜಿಎಸ್‌ಟಿ ಪರಿಹಾರವನ್ನು ಕೊಡದೇ ಇದ್ದ ಕಾರಣದಿಂದಲೂ ಬಹುತೇಕ ರಾಜ್ಯ ಸರ್ಕಾರಗಳು ಅರ್ಥಿಕ ಸಂಕಷ್ಟಕ್ಕೆ ಸಿಲುಕಿವೆ. ಈ ಕುರಿತು ಇತ್ತೀಚೆಗೆ ಸಭೆ ನಡೆಸಿದ್ದ ಕೇಂದ್ರ, ಎರಡು ಆಯ್ಕೆಗಳನ್ನು ನೀಡಿತ್ತು. ಅದರಲ್ಲಿ ಸಾಲ ಮಾಡುವುದು ಮೊದಲ ಆಯ್ಕೆಯಾಗಿದ್ದು, ಕರ್ನಾಟಕ ಸರ್ಕಾರ ಇದನ್ನು ಆಯ್ಕೆ ಮಾಡಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಕರ್ನಾಟಕ ಆರ್ಥಿಕ ಹೊಣೆಗಾರಿಕೆ ಕಾಯ್ದೆಗೆ ತಿದ್ದುಪಡಿ ತಂದು ಸಾಲ ಪಡೆಯಲು ಸಂಪುಟದಲ್ಲಿ ತೀರ್ಮಾನಿಸಲಾಗಿದೆ ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.ಇದನ್ನೂ ಓದಿರಿಆರೋಗ್ಯ ಚಿಕಿತ್ಸಾ ಸಲಹೆಗೆ ಇ-ಸಂಜೀವಿನಿ ಆ್ಯಪ್ ಬಳಸಿ
ರಾಜ್ಯದ ಒಟ್ಟು ನಿವ್ವಳ ಉತ್ಪನ್ನದ (ಜಿಎಸ್‌ಡಿಪಿ) ಶೇ. 2ರಷ್ಟು ಅಂದರೆ 36 ಸಾವಿರ ಕೋಟಿ ರೂ. ಹೆಚ್ಚುವರಿ ಸಾಲವನ್ನು ಯಾವುದೇ ಷರತ್ತಿಗೆ ಒಳಪಡದೇ ಪಡೆಯಲು ರಾಜ್ಯ ಸರ್ಕಾರಕ್ಕೆ ಅವಕಾಶವಿದೆ. ಅದರ ಆಧಾರದ ಮೇಲೆ ಒಂದು ಬಾರಿಗೆ ಮಾತ್ರ ಅನ್ವಯವಾಗುವಂತೆ 33 ಸಾವಿರ ಕೋಟಿ ರೂ. ಸಾಲ ಪಡೆಯಲು ಸರ್ಕಾರ ನಿರ್ಧರಿಸಿದೆ. ಕೇಂದ್ರದಿಂದ ಜಿಎಸ್‌ಟಿ ಪರಿಹಾರ 11 ಸಾವಿರ ಕೋಟಿ ರೂ. ಬರಬೇಕಿತ್ತು. ಬರಲಿಲ್ಲ. ಜತೆಗೆ ಕರೊನಾ ಕಾರಣದಿಂದ ರಾಜಸ್ವ ಸಂಗ್ರಹ ಕುಂಠಿತವಾಗಿದೆ. ಹಾಗಾಗಿ ಮತ್ತಷ್ಟು ಸಾಲ ಪಡೆಯುವ ಅನಿವಾರ್ಯತೆ ಎದುರಾಗಿದೆ. ಹೆಚ್ಚುವರಿ ಸಾಲ ಹೊರೆಯಾದರೂ ಬೇರೆ ದಾರಿ ಇಲ್ಲ ಎಂದು ವಿವರಿಸಿದರು.
‘ನಾವಿಬ್ಬರೂ ಒಟ್ಟಿಗೆ ಡ್ರಗ್ಸ್​ ಸೇವಿಸುತ್ತಿದ್ದೆವು, ಬಿಎಂಡಬ್ಲ್ಯು ಕಾರಿನಲ್ಲೇ ಹೋಟೆಲ್​ಗೆ ಕರೆದೊಯ್ಯುತ್ತಿದ್ದೆ…’

ಐಂದ್ರಿತಾ ರೇ-ದಿಗಂತ್​ಗೆ ಸಿಸಿಬಿ ನೋಟಿಸ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + eighteen =
Remember me
