ಬೆಂಗಳೂರು:ಈ ಹಿಂದಿನಿಂದಲೂ ಹಲವು ಬಾರಿ ರೈತಾಪಿ ವರ್ಗದ ಯುವಕರನ್ನು ವರಿಸುವ ಯುವತಿಯರಿಗೆ ಪ್ರೋತ್ಸಾಹಧನ ಅಥವಾ ಇತರೆ ಯೋಜನೆ ಘೋಷಿಸಿ ಎಂದು ಅನೇಕ ರೈತ ಸಂಘಟನೆಗಳು ಆಗ್ರಹಿಸಿತ್ತು. ಇದೀಗ ಈ ವಿಷಯ ಮತ್ತೊಮ್ಮೆ ಪ್ರಸ್ತಾಪಗೊಂಡಿದ್ದು, ರಾಜ್ಯದ ರೈತ ಹುಡುಗನನ್ನು ಮದುವೆಯಾಗುವ ಯುವತಿಗೆ ಐದು ಲಕ್ಷ ರೂ. ಅನ್ನು ರಾಜ್ಯ ಸರ್ಕಾರ ನೀಡಬೇಕು ಎಂದು ಕೋರಲಾಗಿದೆ.
ಇದನ್ನೂ ಓದಿ:VIDEO | ಬೈಕ್‌ನಲ್ಲೇ ಅಜ್ಜನನ್ನು ಆಸ್ಪತ್ರೆಗೆ ಕರೆತಂದ ವ್ಯಕ್ತಿ! ಈ ದೃಶ್ಯ ‘3 ಈಡಿಯಟ್ಸ್‌’ ಚಿತ್ರವನ್ನು ನೆನಪಿಸಿತು ಎಂದ ನೆಟ್ಟಿಗರು
ವೃತ್ತಿಯಲ್ಲಿ ರೈತನಾದ ಹುಡುಗನನ್ನು ಮದುವೆಯಾಗುವ ಯುವತಿಗೆ ರಾಜ್ಯ ಸರ್ಕಾರದಿಂದ 5 ಲಕ್ಷರೂ. ಪ್ರೋತ್ಸಾಹಧನ ನೀಡಬೇಕು ಎಂದು ರೈತ ಸಂಘಟನೆಗಳ ಪ್ರತಿನಿಧಿಗಳು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ. ಇದೀಗ ರಾಜ್ಯ ಬಜೆಟ್​ಗೆ ಕ್ಷಣಗಣನೆ ಆರಂಭಗೊಳ್ಳುತ್ತಿದ್ದಂತೆ ಈ ವಿಷಯವನ್ನು ಸಿಎಂ ಗಮನಕ್ಕೆ ತರುವಲ್ಲಿ ರೈತರು ಮುಂದಾಗಿದ್ದಾರೆ.
ರೈತ ಸಂಘಟನೆಗಳ ಸುಮಾರು 218 ಪ್ರತಿನಿಧಿಗಳು, ಮುಖಂಡರೊಂದಿಗೆ ಸಿಎಂ ಸಿದ್ದರಾಮಯ್ಯ ಅವರು ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಭಾನುವಾರ ಸಭೆ ನಡೆಸಿದರು. ಈ ವೇಳೆ ಮಾತನಾಡಿದ ಬಡಗಲಪುರ ನಾಗೇಂದ್ರ, ”ಕೃಷಿ ಮಾಡುವವರ ಮಕ್ಕಳಿಗೆ ಇಂದು ಹೆಣ್ಣು ಕೊಡುತ್ತಿಲ್ಲ. 45 ವರ್ಷವಾದರೂ ವಿವಾಹವಾಗುತ್ತಿಲ್ಲ. ಇದರಿಂದಾಗಿ ಕೃಷಿಗೂ ಆದ್ಯತೆ ಸಿಗುತ್ತಿಲ್ಲ. ಹಾಗಾಗಿ, ರೈತನನ್ನು ವಿವಾಹವಾಗುವ ಹುಡುಗಿಗೆ ಪ್ರೋತ್ಸಾಹ ಧನ ನೀಡಬೇಕು” ಎಂದು ಒತ್ತಿ ಹೇಳಿದರು.
ಇದನ್ನೂ ಓದಿ:ಗ್ಯಾರಂಟಿ ಭಾರದ ನಡುವೆ ಜನಪ್ರಿಯ ಬಜೆಟ್?; ಜನಸಾಮಾನ್ಯರಿಂದ ಭರಪೂರ ನಿರೀಕ್ಷೆ
ರೈತರ ಸಾಲ ಮನ್ನಕ್ಕೂ ಆಗ್ರಹಿಸಲಾಗಿದೆ. ಕೃಷಿಗೆ ಹೆಚ್ಚಿನ ಉತ್ತೇಜನ ನೀಡಬೇಕು, ರೈತಪರ ಬಜೆಟ್ ಮಂಡಿಸಬೇಕು ಎಂದು ಸಹ ಮನವಿ ಮಾಡಲಾಗಿದೆ ಎಂದು ರೈತ ಪ್ರತಿನಿಧಿಗಳು ಹೇಳಿದ್ದಾರೆ. ಇನ್ನು ಗ್ಯಾರಂಟಿ ಯೋಜನೆ ಬಗ್ಗೆ ರೈತ ಮುಖಂಡರು ಮೆಚ್ಚುಗೆ ವ್ಯಕ್ತಪಡಿಸಿದರು.
‘ಓಂ’ ಚಿತ್ರದಲ್ಲಿರುವ ಈ ಇಬ್ಬರು ಮಕ್ಕಳು ಈಗ ಹೇಗಿದ್ದಾರೆ ಗೊತ್ತಾ? ಸ್ಟಾರ್​ ನಟನ ಮಕ್ಕಳಿವರು!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:five × two =
Remember me
