ಸುಳ್ಯ(ದಕ್ಷಿಣ ಕನ್ನಡ):ಪಟ್ಟಣದ ಮನೆಯೊಂದರಲ್ಲಿ ಮಹಿಳೆಯ ಮೃತದೇಹ ಗೋಣಿಚೀಲದಲ್ಲಿ ಪತ್ತೆಯಾಗಿದ್ದು, ಆಕೆಯ ಪತಿ ನಾಪತ್ತೆಯಾಗಿದ್ದಾನೆ.
ಆತನೇ ಪತ್ನಿಯನ್ನು ಕೊಲೆಗೈದು ಚೀಲದಲ್ಲಿ ತುಂಬಿಸಿಟ್ಟಿರುವ ಸಂಶಯ ವ್ಯಕ್ತವಾಗಿದೆ. ಪಶ್ಚಿಮ ಬಂಗಾಲ ಮೂಲದ ಇಮ್ರಾನ್​ ಎಂಬಾತ ಓಡಬಾಯಿ ಬಳಿ ಹೋಟೆಲೊಂದರಲ್ಲಿ ಆರು ತಿಂಗಳಿನಿಂದ ಕೆಲಸಕ್ಕಿದ್ದ. ಅಲ್ಲೇ ಸನಿಹದ ಬೀರಮಂಗಲದಲ್ಲಿ ಪತ್ನಿ ಜತೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ. ಎರಡು ದಿನಗಳ ಹಿಂದಷ್ಟೇ ಊರಿಗೆ ಹೋಗುತ್ತೇನೆಂದು ಇಮ್ರಾನ್​ ರಜೆ ಮಾಡಿ ತೆರಳಿದ್ದ. ಆದರೆ ಹೋಗುವಾಗ ಹೆಂಡತಿಯನ್ನು ಕರೆದುಕೊಂಡು ಹೋಗಿರಲಿಲ್ಲ ಎನ್ನಲಾಗಿದೆ.
ಸ್ಥಳೀಯರು ಸಂಶಯಗೊಂಡು ಹೋಟೆಲ್​​ ಮಾಲೀಕರಿಗೆ ತಿಳಿಸಿದ್ದರು. ಬಳಿಕ ಪೊಲೀಸರ ಸಹಾಯದೊಂದಿಗೆ ಮಂಗಳವಾರ ಮನೆ ಪರಿಶೀಲಿಸಿದಾಗ ಪತ್ನಿಯ ಮೃತದೇಹ ಗೋಣಿಚೀಲದಲ್ಲಿ ತುಂಬಿಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮಹಿಳೆಯ ಹೆಸರು, ಆಕೆ ಯಾವ ಧರ್ಮದವಳು ಎಂಬ ಮಾಹಿತಿ ಪೊಲೀಸರಿಗೂ ಲಭಿಸಿಲ್ಲ. ಆಕೆ ಹಿಂದಿ ಮಾತನಾಡುತ್ತಿದ್ದಳು ಎಂದು ಸ್ಥಳೀಯರು ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಣಬೆ ಪದಾರ್ಥ ತಿಂದು ತಂದೆ-ಮಗ ಸಾವು!? ರಾತ್ರಿಯಿಡೀ ನರಳಾಡಿ ಮನೆಯ ಅಂಗಳದಲ್ಲೇ ದುರಂತ ಅಂತ್ಯ

ಗೆಳೆಯನನ್ನು ಕೊಂದು ಕಾರಿನಲ್ಲಿ ಮೃತದೇಹದೊಂದಿಗೆ ಪೊಲೀಸ್ ಠಾಣೆಗೇ ಬಂದ ಭೂಪ! ಬೆಂಗಳೂರಲ್ಲಿ ಬೆಚ್ಚಿಬೀಳಿಸೋ ಘಟನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × four =
Remember me
