ಚಾಮರಾಜನಗರ: ಸುಪ್ರೀಂಕೋರ್ಟ್​ ನಿವೃತ್ತ ಮುಖ್ಯ ನ್ಯಾಯಮೂರ್ತಿ ರಂಜನ್​ ಗೊಗೋಯ್​ ದಂಪತಿ ಜಿಲ್ಲೆಯ ಪ್ರಸಿದ್ಧ ಯಾತ್ರಾ ಸ್ಥಳಗಳಿಗೆ ಭೇಟಿ ದೇವರ ದರ್ಶನ ಪಡೆದರು.
ಪತ್ನಿ ಸಮೇತ ಜಿಲ್ಲೆಗೆ ಆಗಮಿಸಿದ ಅವರು ರಾಮಸಮುದ್ರದ ಹರಳುಕೋಟೆ ಆಂಜನೇಯಸ್ವಾಮಿ ದೇವಾಲಯಕ್ಕೆ ತೆರಳಿದರು. ದೇವಾಲಯದ ಆಡಳಿತ ಮಂಡಳಿ ದಂಪತಿಗೆ ಪೂರ್ಣಕುಂಭ ಸ್ವಾಗತ ನೀಡಿತು. ನಂತರ ವಿಶೇಷ ಪೂಜೆ ನೆರವೇರಿಸಿದರು.
ಅಲ್ಲಿಂದ ಕೆ.ಗುಡಿ ಅರಣ್ಯ ವಿಶ್ರಾಂತಿ ಧಾಮಕ್ಕೆ ತೆರಳಿದರು. ವಿಶ್ರಾಂತಿ ಧಾಮದಲ್ಲಿ ಭಾನುವಾರ ರಾತ್ರಿ ವಾಸ್ತವ್ಯ ಹೂಡಲಿದ್ದಾರೆ. ಸೋಮವಾರ ಬೆಳಗ್ಗೆ ಬಿಳಿಗಿರಿ ರಂಗನಬೆಟ್ಟಕ್ಕೆ ಭೇಟಿ ಕೊಡಲಿದ್ದಾರೆ. ಸುತ್ತೂರು ಮಠಕ್ಕೆ ತೆರಳಿ ಶ್ರೀಗಳ ಆರ್ಶೀವಾದ ಪಡೆದು ಅಲ್ಲಿಂದ ಹಿಮವದ್​ ಗೋಪಾಲಸ್ವಾಮಿಬೆಟ್ಟ ಹಾಗೂ ಬಂಡೀಪುರ ಅರಣ್ಯಕ್ಕೆ ಭೇಟಿ ನೀಡಲಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − 11 =
Remember me
