ಕರೊನಾ ಸೋಂಕಿಗೆ ಒಳಗಾಗಿ, ಆಸ್ಪತ್ರೆಗೆ ದಾಖಲಾಗಿದ್ದ ಶಿಕ್ಷಣ ಸಚಿವ ಎಸ್​.ಸುರೇಶ್​ ಕುಮಾರ್ ಅವರು ನಿನ್ನೆ ಆಸ್ಪತ್ರೆಯಿಂದ ಡಿಸ್​ಚಾರ್ಜ್ ಆಗಿದ್ದಾರೆ. ಆದರೆ ಸಂಪೂರ್ಣವಾಗಿ ಗುಣಮುಖರಾಗಿಲ್ಲ ಎಂದು ತಮ್ಮ ಫೇಸ್​ಬುಕ್​ನಲ್ಲಿ ಬರೆದುಕೊಂಡಿದ್ದಾರೆ.
ಅಕ್ಟೋಬರ್​ 5ರಂದು ನನ್ನಲ್ಲಿ ಕರೊನಾ ಸೋಂಕು ದೃಢಪಟ್ಟಿತ್ತು. ಆಗ ನಾನು ಹೋಂ ಐಸೋಲೇಶನ್​ಗೆ ಒಳಗಾಗಿ, ವೈದ್ಯರು ಸೂಚಿಸಿದ್ದ ಔಷಧಗಳನ್ನು ತೆಗೆದುಕೊಳ್ಳುತ್ತಿದ್ದೆ. ಆದರೆ ಅಕ್ಟೋಬರ್​ 10ರಂದು ನನ್ನ ಮನೆಗೆ ಬಂದ ವೈದ್ಯರೋರ್ವರು ನನ್ನ ಉಸಿರಾಟದಲ್ಲಿ ವ್ಯತ್ಯಾಸ ಆಗುತ್ತಿರುವುದನ್ನು ಗಮನಿಸಿ ತಕ್ಷಣ ಪರೀಕ್ಷೆಗೆ ಒಳಗಾಗಿ ಎಂದರು. ಅವರ ಸೂಚನೆ ಮೇರೆಗೆ ಸಿಟಿ ಸ್ಕ್ಯಾನ್​ಗೆ ಒಳಗಾದೆ.
ಆಗ ನನ್ನ ಶ್ವಾಸಕೋಶಕ್ಕೆ ಸ್ವಲ್ಪ ಹೆಚ್ಚಿನ ಪ್ರಮಾಣದಲ್ಲಿಯೇ ಸೋಂಕು ತಗುಲಿರುವುದು ಗೊತ್ತಾಯಿತು. ನನಗೆ ಇನ್ನೂ ಎರಡೂ ವಾರ ಎಲ್ಲಿಯೂ ಹೋಗಬಾರದು ಎಂಬ ಷರತ್ತಿನ ಮೇಲೆ ಬಿಡುಗಡೆ ಮಾಡಿದ್ದಾರೆ. ನಾನಿನ್ನು ಮನೆಯಲ್ಲೇ ಚಿಕಿತ್ಸೆ ಪಡೆಯುತ್ತೇನೆ ಎಂದಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 11 =
Remember me
