ಬೆಂಗಳೂರು:ಭಕ್ತರು ನಮ್ಮ ಜೋಳಿಗೆ ತುಂಬಿಸಿದರೆ ಮಾತ್ರ ನಾವು ಬಡವರ ಕೈ ಹಿಡಿಯಲು ಸಾಧ್ಯ. ಒಂದು ಸಮಾಜದಲ್ಲಿ ಎಷ್ಟು ಜನ ಶಿಕ್ಷಣವಂತರು ಇದ್ದಾರೆ ಎಂಬುದರ ಮೇಲೆ ಆ ಸಮಾಜ ಎಷ್ಟು ಬೆಳವಣಿಗೆ ಕಂಡಿದೆ ಎನ್ನಬಹುದು ಎಂದು ಕನಕಧಾಮ ಶಾಖಾಮಠದ ಈಶ್ವರಾನಂದಪುರಿ ಸ್ವಾಮೀಜಿ ತಿಳಿಸಿದರು.
ಶ್ರೀ ಕಾಗಿನೆಲೆ ಮಹಾಸಂಸ್ಥಾನ ಪೀಠ ವಿಜಯನಗರದ ಬಂಟರ ಸಂಘದ ಸಭಾಂಗಣದಲ್ಲಿ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಜ್ಞಾನ ಒಂದು ಸಮುದಾಯದ ಸ್ವತ್ತಲ್ಲ.ಹಲವಾರು ಜನ ನಮ್ಮ ಬಳಿ ಬಂದಾಗ ಹಣ ಇಲ್ಲ ಎನ್ನಲು ದುಃಖವಾಗುತ್ತದೆ. ಈ ನಿಟ್ಟಿನಲ್ಲಿ ಹತ್ತು ಕೋಟಿ ರೂಪಾಯಿ ಮೊತ್ತದ ನಿಶ್ಚಿತ ಠೇವಣಿ ಇಟ್ಟು ಬಡ ಮಕ್ಕಳಿಗೆ ಪ್ರೋತ್ಸಾಹ ನೀಡೋಣ ಎಂದ ಅವರು ಸಿದ್ದರಾಮಯ್ಯ ಅವರಿಗೆ ಕಪ್ಪು ಚುಕ್ಕೆ ತರುವ ಪ್ರಯತ್ನ ನಡೆಯುತ್ತಿದೆ. ನಾವು ಆ ಚುಕ್ಕೆಯನ್ನು ಅವರಿಗೆ ದೃಷ್ಟಿಬೊಟ್ಟಾಗಿ ಬದಲಿಸುತ್ತೇವೆ. ಮುಡಾದವರು ಅವರ ಸೈಟಗ ಗಳನ್ನು ಬೇಕಾದರೆ ವಾಪಸ್ ಪಡೆಯಲಿ. ಬೇರೆ ರಾಜಕಾರಣಿಗಳು ಎಷ್ಟು ಆಸ್ತಿ ಮಾಡಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಆದರೆ ಸಿದ್ದರಾಮಯ್ಯ ವಿರುದ್ಧ ಪಿತೂರಿ ಸಲ್ಲದು ಎಂದು ಹೇಳಿದರು.
ಗುಲ್ಬರ್ಗಾ ಕನಕಗುರು ಪೀಠದ ಸಿದ್ದರಾಮಾನಂದಪುರಿ ಸ್ವಾಮೀಜಿ ಮಾತನಾಡಿ, ಲಿಂಗಾಯತ ಸಮುದಾಯ ಕಳೆದ 300 ವರ್ಷಗಳಿಂದ ವಿದ್ಯಾದಾನ ಮಾಡುತ್ತಿದೆ. ಆದರೆ ನಾವು ಕಳೆದ 25-30 ವರ್ಷಗಳಿಂದ ಶಿಕ್ಷಣಕ್ಕೆ ನೆರವು ನೀಡುತ್ತಿದ್ದೇವೆ. ಈ ಮೊದಲೇ ಪ್ರೋತ್ಸಾಹ ನೀಡಿದ್ದರೆ ಸಮಾಜದಲ್ಲಿ ಶೈಕ್ಷಣಿಕ ಪ್ರಗತಿ ಹೆಚ್ಚಿರುತ್ತಿತ್ತು. ನಾವು ಉಳ್ಳವರಿಂದ ಬೇಡಿ ಕಾರ್ಯಕ್ರಮ ಮಾಡುವ ಪರಿಸ್ಥಿತಿ ಬಂದಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಸಮುದಾಯದ ಪ್ರತಿಭೆಗಳನ್ನು ಪ್ರೋತ್ಸಾಹಿಸುವುದು ಸಮಾಜದ ಜವಾಬ್ದಾರಿ. ಯಾವುದೇ ಸ್ಥಾನಮಾನ ಶಾಶ್ವತ ಅಲ್ಲ. ಅಧಿಕಾರ ಮತ್ತು ಹಣ ಬಂದಾಗ ನಮ್ಮವರನ್ನು ಮರೆಯಬಾರದು. ಸೌಂದರ್ಯ ಹಣ ಶಾಶ್ವತ ಅಲ್ಲ. ಜ್ಞಾನ ಮಾತ್ರ ಶಾಶ್ವತ. ಜ್ಞಾನ ಪಡೆಯಲು ಓದಬೇಕು. ವಿದ್ಯೆ ಗಳಿಸಿದವನಿಗೆ ಜಗತ್ತೇ ಆಸ್ತಿ ಎಂದರು.
ಮಾಜಿ ಸಚಿವ.ಎಚ್.ಎಂ.ರೇವಣ್ಣ ಮಾತನಾಡಿ, ಅಪರೂಪದ ರಾಜಕಾರಣಿ ಸಿದ್ದರಾಮಯ್ಯ. ದೇವರಾಜ ಅರಸು, ವೀರಪ್ಪ ಮೊಯಿಲಿ, ಬಂಗಾರಪ್ಪ ಅವರಿಗೆ ಕಷ್ಟ ಕೊಟ್ಟವರು ಯಾರು ಎಂದು ಪ್ರಶ್ನಿಸಿದರು. ಸಿದ್ದ ರಾಮಯ್ಯ 40 ವರ್ಷ ಕಪ್ಪು ಚುಕ್ಕೆ ಇಲ್ಲದೆ ಕೆಲಸ ಮಾಡಿರುವ ರಾಜಕಾರಣಿ. ಅತಿ ಹಿಂದುಳಿದ ವರ್ಗಗಳ ಜನತೆಗೆ ಮಂತ್ರಿ ಸ್ಥಾನ ನೀಡಿದವರು. ಹಿಂದುಳಿದ, ಅಲ್ಪಸಂಖ್ಯಾತ, ದಲಿತರ ಧ್ವನಿಯಾಗಿದ್ದಾರೆ. ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ತಮ್ಮ ನಿವೇಶನಗಳನ್ನು ವಾಪಸ್ ಕೊಡಬೇಕಾಗಿಲ್ಲ ಎಂದರು.
ರಾಜ್ಯದಲ್ಲಿ ರಾಜ್ಯಪಾಲರ ಹಕ್ಕು ಕರ್ತವ್ಯ ಏನು ಎಂಬುದನ್ನು ಸಂವಿಧಾನ ಹೇಳಿದೆ. ಗೌಡರ ಮನೆಯವರು 47 ನಿವೇಶನಗಳನ್ನು ಪಡೆದುಕೊಂಡಿದೆ. ಪ್ರೌಢಾವಸ್ಥೆಗೆ ಬಾರದವರ ಹೆಸರಲ್ಲಿಯೂ ನಿವೇಶನ ಖರೀದಿ ಮಾಡಿದ್ದಾರೆ. ಜನತೆಗೆ ಸರಿಯಾದ ರೀತಿಯಲ್ಲಿ ತಿಳಿವಳಿಕೆ ನೀಡಲು ಮುಂದಾಗಬೇಕು. ಪ್ರಕರಣದ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶ ಕೊಟ್ಟಿದ್ದರೂ ಈಗ ಪಾದಯಾತ್ರೆ ಮಾಡಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಇದೇ ವೇಳೆ ಶ್ರೀ ಕಾಗಿನೆಲೆ ಮಹಾ ಸಂಸ್ಥಾನ ಕನಕ ಗುರು ಪೀಠದಿಂದ ಪ್ರತಿಭಾವಂತ 850ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.ಗುಲ್ಬರ್ಗಾ ವಿಭಾಗದ ಪೀಠದ ರಮಾನಂದಪುರಿ ಸ್ವಾಮೀಜಿ, ಮತ್ತಿತರರು ಉಪಸ್ಥಿತರಿದ್ದರು.
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:thirteen + eleven =
Remember me
