ಬೆಂಗಳೂರು:ಡಿಜೆ ಹಳ್ಳಿ, ಕೆಜಿ ಹಳ್ಳಿ ಮತ್ತು ಕಾವಲ್​ ಭೈರಸಂದ್ರ ಗಲಭೆ ಪ್ರಕರಣ ಕ್ಷಣ ಕ್ಷಣಕ್ಕೂ ಸ್ಫೋಟಕ ತಿರುವು ಪಡೆಯುತ್ತಿದೆ. ಗಲಭೆ ಪ್ರಕರಣದ 4೦ಕ್ಕೂ ಹೆಚ್ಚು ಆರೋಪಿಗಳಿಗೆ ಭಯೋತ್ಪಾದನೆ ಚಟುವಟಿಕೆಗಳ ಲಿಂಕ್ ಇದೆ ಎಂಬ ಆಘಾತಕಾರಿ ವಿಚಾರ ಸಿಸಿಬಿಯ ಟೆಕ್ನಿಕಲ್ ಇನ್ವೆಸ್ಟಿಗೇಶನ್​ನಲ್ಲಿ ಬಯಲಾಗಿದೆ
ರುದ್ರೇಶ್ ಹತ್ಯೆ ಪ್ರಕರಣ ಸೇರಿ ಕೆಲ ವಿದ್ವಂಸಕ‌ ಕೃತ್ಯಗಳಲ್ಲಿ ಭಾಗಿಯಾಗಿರುವ ಆರೋಪಿಗಳ ಜೊತೆ ಬೆಂಗಳೂರಿನ ಗಲಭೆ ಪ್ರಕರಣದ ಕೆಲ ಆರೋಪಿಗಳ ಒಡನಾಟ‌ ಇತ್ತು ಎಂಬ ಅಂಶ ಬೆಳಕಿಗೆ ಬಂದಿದೆ.
ಇದನ್ನೂ ಓದಿರಿಆರೋಪಿ ನವೀನ್​ನನ್ನು ಗಲಭೆಕೋರರಿಂದ ಬಚಾವ್​ ಮಾಡಿದ್ದೇ ಅಖಂಡ ಶ್ರೀನಿವಾಸ ಮೂರ್ತಿ!
ಗಲಭೆಯಲ್ಲಿ ಭಾಗಿಯಾದ ನಂತರ ಬಹುತೇಕ ಆರೋಪಿಗಳು ನಾಪತ್ತೆಯಾಗಿದ್ದಾರೆ. ಈಗಾಗಲೇ ಬಂಧಿತನಾಗಿರುವ ಸಮಿಯುದ್ದೀನ್​​ನನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ. ರುದ್ರೇಶ್ ಹತ್ಯೆ ಆರೋಪಿಗಳು ಜೈಲಿನಲ್ಲಿದ್ದಾರೆ. ವಿಸಿಟರ್ ರೀತಿ ಜೈಲಿಗೆ ಹೋಗುತ್ತಿದ್ದ ಸಮಿಯುದ್ದೀನ್​, ರುದ್ರೇಶ್​ ಹತ್ಯೆ ಆರೋಪಿಗಳನ್ನೂ ಭೇಟಿಯಾಗಿದ್ದಾನೆ. ಇದಲ್ಲದೆ ಗಲಭೆಯ ಕೆಲ ಆರೋಪಿಗಳು, ಜೈಲಿನಲ್ಲಿದ್ದ ವಿವಿಧ ಶಂಕಿತ ಉಗ್ರರನ್ನೂ ಭೇಟಿ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಗಲಭೆ ವೇಳೆಯ ಕೆಲ ಆರೋಪಿಗಳ ವಿಡಿಯೋ ಮತ್ತು ಜೈಲಿನಲ್ಲಿ ಆರೋಪಿಗಳನ್ನು ಭೇಟಿ ಮಾಡೋಕೆ ಹೋದ ವೇಳೆ ಅಲ್ಲಿನ ಸಿಸಿಟಿವಿಯ ದೃಶ್ಯಗಳು ಹೊಲಿಕೆಯಾಗುತ್ತಿವೆ. ಸದ್ಯ ಸಿಸಿಬಿಯ anti terrorist cellನಿಂದ ಸಮಿಯುದ್ದೀನ್​​ನನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ.
https://www.facebook.com/DighvijayNews/videos/599733364058382/
ಡಿಜೆ ಹಳ್ಳಿ ಗಲಭೆಕೋರರ ಹೆಡೆಮುರಿ ಕಟ್ಟಲು ಸಿಎಂ ಸಜ್ಜು; ಗೂಂಡಾ ಕಾಯ್ದೆ, ನಷ್ಟ ವಸೂಲಿ ಬ್ರಹ್ಮಾಸ್ತ್ರ ಬಳಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 3 =
Remember me
