ಆನೇಕಲ್:ಮನೆಯಲ್ಲೇ ಇದ್ದ 46 ವರ್ಷದ ಮಹಿಳೆಗೂ ಕರೊನಾ ಸೋಂಕು ತಗುಲಿದ್ದು, ಇವರ ಸಂಪರ್ಕದಲ್ಲಿದ್ದ 7 ಜನರನ್ನು ಕ್ವಾರಂಟೈನ್ ಮಾಡಲಾಗಿದೆ.
ಚಿಂತಲ‌ ಮಡಿವಾಳದ ನಿವಾಸಿಯಾದ ಈ ಮಹಿಳೆ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಕಾರಣ ಎರಡು ದಿನದ ಹಿಂದಷ್ಟೇ ನಾರಾಯಣ ಹೃದಯಾಲಯ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಮರುದಿನ ಬಂದ ವರದಿಯಲ್ಲಿ ಕರೊನಾ ಸೋಂಕು ದೃಢಪಟ್ಟಿದ್ದು, ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.
ಇದನ್ನೂ ಓದಿರಿರಾತ್ರೋರಾತ್ರಿ ಕುಸಿದ ದೇವಾಲಯ ಗೋಪುರ! ಇದು ಅಪಾಯದ ಮುನ್ಸೂಚನೆಯೇ..?
ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಮಹಿಳೆ ಇತ್ತೀಚಿಗೆ ನಾರಾಯಣ ಹೃದಯಾಲಯಕ್ಕೆ ದಾಖಲಾಗಿದ್ದರು. ಇದಕ್ಕೂ ಮುನ್ನ ಎರಡು ಖಾಸಗಿ ಆಸ್ಪತ್ರೆಗಳಿಗೆ ಭೇಟಿ ನೀಡಿದ್ದರು. ಬುಧವಾರ ಹೃದಯ ಸಂಬಂಧಿತ ಶಸ್ತ್ರಚಿಕಿತ್ಸೆ ಕೂಡ ಆಗಿದೆ. ನಾರಾಯಣ ಹೆಲ್ತ್ ಸಿಟಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಕರೊನಾ ಟೆಸ್ಟ್​ನಲ್ಲಿ ಮಹಿಳೆಗೆ ಪಾಸಿಟಿವ್​ ಬಂದಿದ್ದು, ಗುರುವಾರ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿರಿಆಗಸ್ಟ್ ಅಂತ್ಯಕ್ಕೆ ಹೆಚ್ಚಲಿದೆ ಕರೊನಾ ಸೋಂಕಿತರ ಸಂಖ್ಯೆ; ಸಚಿವ ಡಾ.ಸುಧಾಕರ್
ಮಹಿಳೆಯ ಪತಿ, ಮಗ ಸೇರಿ ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದ 7 ಜನರನ್ನು ಸದ್ಯ ಕ್ವಾರಂಟೈನ್​ ಮಾಡಲಾಗಿದೆ. ಮಹಿಳೆಯ ಪತಿ ಮಾತ್ರ ವ್ಯಾಪಾರಕ್ಕಾಗಿ ಹೊರ ಹೋಗಿ ಬಂದಿದ್ದಾರೆ. ಗುರುವಾರ ರಾತ್ರಿ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದಾಗ ಪತಿಗೂ ಗಂಟಲು ನೋವು ಎಂದು ಹೇಳಲಾಗಿತ್ತು. ಪತಿಯ ಸ್ವಾಬ್ ಟೆಸ್ಟ್ ಮಾಡಲಾಗಿದ್ದು ವರದಿ ಬರಬೇಕಿದೆ.
ಮಹಿಳೆಯ ಮನೆ ಬಳಿ ತಹಸೀಲ್ದಾರ್ ಮಹಾದೇವಯ್ಯ ಆರೋಗ್ಯ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ್ದಾರೆ. ಸುಮಾರು ಹತ್ತು ವರ್ಷಗಳಿಂದ ಒಂದೇ ಮನೆಯಲ್ಲಿ ಈ ಮಹಿಳೆ ಬಾಡಿಗೆಗೆ ಇದ್ದಾರೆ. ಮಹಿಳೆ ವಾಸವಿದ್ದ ಅಕ್ಕಪಕ್ಕದ ಮನೆಗಳ ನಿವಾಸಿಗಳಲ್ಲಿ ಆತಂಕ ಹೆಚ್ಚಾಗಿದೆ.
ಇದನ್ನೂ ಓದಿರಿಕ್ಯಾಬ್​ ಚಾಲಕರ ಹೈಟೆಕ್​ ವಂಚನೆಗೆ 500 ಸಿಮ್​ ಬಳಕೆ… ಹೇಗೆಲ್ಲ ಯಾಮಾರಿಸ್ತಾರೆ ನೋಡಿ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 2 =
Remember me
