ಮಂಗಳೂರು:ಶಾಸಕ ಯು.ಟಿ.ಖಾದರ್​ ಅವರು ಪಿಪಿಇ ಕಿಟ್​ ಧರಿಸದೆ ಮೃತ ಕೊವಿಡ್​-19 ಸೋಂಕಿತನ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಂಡು ವಿವಾದ ಸೃಷ್ಟಿಸಿದ್ದಾರೆ. ಜವಾಬ್ದಾರಿಯುತ ಜನಪ್ರತಿನಿಧಿಯಾಗಿ ಹೀಗೆ ನಿರ್ಲಕ್ಷ್ಯ ಮಾಡುವುದು ತಪ್ಪಲ್ಲವಾ? ಎಂಬ ಪ್ರಶ್ನೆಗಳು ಹುಟ್ಟಿಕೊಂಡ ಬೆನ್ನಲ್ಲೇ ಅವರು ಸ್ಪಷ್ಟನೆ ನೀಡಿದ್ದಾರೆ.
ಅಂತ್ಯ ಸಂಸ್ಕಾರದಲ್ಲಿ ಕೆಲಸ ಮಾಡಬೇಕು ಎಂಬ ಭಾವನೆ ಬಂತು. ಹಾಗಾಗಿ ಭಾಗಿಯಾಗಿದ್ದೆ. ಸೋಂಕಿತನ ಮೃತದೇಹದಿಂದ ವೈರಸ್​ ಹರಡೋದಿಲ್ಲ. ಮೃತದೇಹದಿಂದ ವೈರಸ್ ಹರಡುತ್ತದೆ ಎಂದು ವೈದ್ಯಕೀಯ ಅಧ್ಯಯನ ಹೇಳಿಲ್ಲ. ಹಾಗಾಗಿ ಪಿಪಿಇ ಕಿಟ್​ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
ಮಕ್ಕಳು ತಂದೆಯ ಶವ ನೋಡೋದಿಕ್ಕೆ ಬರುವುದಿಲ್ಲ. ಜನ ಅಷ್ಟು ಭಯಭೀತರಾಗಿದ್ದಾರೆ. ಧಾರ್ಮಿಕ ವಿಧಿವಿಧಾನ ಮಾಡೋದಕ್ಕೂ ಜನರಿಗೆ ಹೆದರಿಕೆ ಆಗಿದೆ. ಕಾನೂನು ಪ್ರಕಾರ ಪಿಪಿಇ ಕಿಟ್ ಧರಿಸದೆ ಇರುವುದು ತಪ್ಪು. ಆದರೆ ಮೃತದೇಹದಿಂದ ಕರೊನಾ ಹರಡುವುದಿಲ್ಲ ಎಂದು ಜನರಿಗೆ ಮನವರಿಕೆ ಮಾಡಿಸಲೆಂದೇ ನಾನು ಪಿಪಿಇ ಕಿಟ್​ ಧರಿಸದೆ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದೇನೆ. ಆದರೆ ಜನರು ಧಾರ್ಮಿಕ ವಿಧಿವಿಧಾನದ ಪ್ರಕಾರ ಅಂತ್ಯಕ್ರಿಯೆ ಮಾಡಬಹುದು ಎಂದು ಖಾದರ್​ ಹೇಳಿದ್ದಾರೆ.(ಏಜೆನ್ಸೀಸ್​)
ಪಿಪಿಇ ಕಿಟ್​ ಧರಿಸದೆ ಕೋವಿಡ್​ ಸೋಂಕಿತನ ಅಂತ್ಯಸಂಸ್ಕಾರ ನೆರವೇರಿಸಿದ ಶಾಸಕ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen + twenty =
Remember me
