ಬೆಂಗಳೂರು: ಕ್ವಿಟ್ ಇಂಡಿಯಾ ಚಳುವಳಿ ವರ್ಷಾಚರಣೆ ಅಂಗವಾಗಿ ಹಾಗೂ ಸ್ವಾತಂತ್ರ್ಯ ದಿನಾಚರಣೆಯ ಮಹೋತ್ಸವದ ಪ್ರಯುಕ್ತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಬುಧವಾರ ಐವರು ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ಖುದ್ದಾಗಿ ತೆರಳಿ ಸ್ವಾತಂತ್ರ್ಯ ಹೋರಾಟಗಾರರನ್ನು ಸನ್ಮಾನಿಸಿ, ಸಿಹಿ ನೀಡುವ ಮೂಲಕ ಗೌರವ ಸಲ್ಲಿಸಿದರು.
ಬುಧವಾರ ಬೆಳಿಗ್ಗೆ ಮೊದಲಿಗೆ ಬಸವನಗುಡಿಯಲ್ಲಿರುವ ಶ್ರೀ ಸಾಯಿ ವ್ರೃದ್ದಾಶ್ರಮದಲ್ಲಿ ವಾಸಿಸುತ್ತಿರುವ ಶಕುಂತಲ ಅವರನ್ನು ರಾಜ್ಯಪಾಲರು ಭೇಟಿ ಮಾಡಿ, ಸನ್ಮಾನಿಸಿ, ಪ್ರಮಾಣ ಪತ್ರ, ಸಿಹಿ ನೀಡಿ ನಮನ ಸಲ್ಲಿಸಿದರು.
ನಂತರ ಯಲಚೇನಹಳ್ಳಿಯ ನಂಜಪ್ಪ ಲೇಔಟ್ ನಲ್ಲಿರುವ ಸ್ವಾತಂತ್ರ ಹೋರಾಟಗಾರರಾದ ಎಸ್ ವಿ ಟಿ ಗುಪ್ತಾ ಅವರ ಮನೆಗೆ ತೆರಳಿದರು. ನಂತರ ಬನಶಂಕರಿ 3ನೇ ಹಂತದಲ್ಲಿರುವ ಸ್ವಾತಂತ್ರ್ಯ ಹೋರಾಟಗಾರರಾದ ಶಂಕರನಾರಾಯಣ ರಾವ್ ಅವರ ಮನೆಗೆ ತೆರಳಿ ಅವರನ್ನು ಸನ್ಮಾನಿಸಿ, ಸಿಹಿ ತಿನಿಸಿದರು. ಅವರ ಕುಶಲೋಪರಿ ವಿಚಾರಿಸಿದ ರಾಜ್ಯಪಾಲರು, ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗಿಯಾಗಿ ನಮಗೆ ಸ್ವಾತಂತ್ರ್ಯ ತಂದುಕೊಟ್ಟ ತಮಗೆ ಗೌರವ ಸಲ್ಲಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದರು.
ಮಲ್ಲೇಶ್ವಂರಂನಲ್ಲಿರುವ ನಾಗಭೂಷಣ್ ರಾವ್ ಅವರ ಮನೆಗೆ ತೆರಳಿದ ರಾಜ್ಯಪಾಲರು, ಸನ್ಮಾನಿಸಿ, ಕುಶಲೋಪರಿ ವಿಚಾರಿಸಿದರು. ತಮ್ಮ ದೇಶ ಸೇವೆ ನಮ್ಮೆಲ್ಲರಿಗೆ ಸ್ಫೂರ್ತಿ. ನಿಮಗೆ ಹಾಗೂ ನಿಮ್ಮ ಕುಟುಂಬಗಳಿಗೆ ಗೌರವ ಸಲ್ಲಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಹೇಳಿ ತಲೆಬಾಗಿ ನಮಿಸಿದ್ದು ವಿಶೇಷವಾಗಿತ್ತು. ಕೊನೆಯಲ್ಲಿ ಭೂಪಸಂದ್ರದ ವಿನಾಯಕ ಲೌಔಟ್ ನಲ್ಲಿರುವ ಸ್ವಾತಂತ್ರ್ಯ ಹೋರಾಟಗಾರರಾದ ಕೆ ಸಿ ನಾರಾಯಣಪ್ಪ ಅವರನ್ನು ಭೇಟಿ ಮಾಡಿ, ಸನ್ಮಾಸಿದರು. ಈ ವೇಳೆ ಜಿಲ್ಲಾಧಿಕಾರಿ ದಯಾನಂದ್ ಮುಂತಾದ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:seventeen − 8 =
Remember me
