ಬೆಂಗಳೂರು:ವರದಕ್ಷಣೆಗಾಗಿ ಪತ್ನಿ ಮೇಲೆ ಕುಡಗೋಲಿನಿಂದ 35 ಬಾರಿ ಹಲ್ಲೆ ನಡೆಸಿ ಕೊಲೆ ಮಾಡಿದ್ದ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿ 71ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.
ಇದನ್ನೂ ಓದಿ:ಪಾರಿವಾಳಗಳಿಗೆ ಆಹಾರ ಹಾಕಿದರೆ 500 ರೂ. ದಂಡ..!
ಸುಬ್ರಮಣ್ಯಪುರ ನಿವಾಸಿ ರಘು ಶಿಕ್ಷೆಗೆ ಒಳಗಾದ ಅಪರಾಧಿ. 2009ರ ಆಗಸ್ಟ್‌ನಲ್ಲಿ ಅಂಬಿಕಾ ಮತ್ತು ರಘು ಮದುವೆ ಆಗಿದ್ದರು. ದಂಪತಿಗೆ ಒಂದೂವರೆ ವರ್ಷದ ಮಗು ಇದೆ. ಮದುವೆ ಸಮಯದಲ್ಲಿ ಚಿನ್ನಾಭರಣ ಮತ್ತು 50 ಸಾವಿರ ರೂ. ವರದಕ್ಷಿಣೆ ಪಡೆದಿದ್ದ ರಘು, ಮತ್ತೆ ಹೆಚ್ಚಿನ ವರದಕ್ಷಣೆ ತರುವಂತೆ ಪ್ರತಿದಿನ ಪತ್ನಿಗೆ ಮಾನಸಿಕ ಮತ್ತು ದೈಹಿಕ ಹಿಂಸೆ ನೀಡುತ್ತಿದ್ದ. 2012ರ ಡಿಸೆಂಬರ್ 8ರ ರಾತ್ರಿ 8 ಗಂಟೆಯಲ್ಲಿ ಮಗುವಿನ ಜತೆ ಮಲಗಿದ್ದ ಅಂಬಿಕಾಳನ್ನು ದೋಣ್ಣೆ ಮತ್ತು ಕುಡುಗೊಲಿನಿಂದ ಅಪರಾಧಿ ರಘು ಹಲ್ಲೆ ನಡೆಸಿ ಕೊಲೆ ಮಾಡಿದ್ದ.
ಇದನ್ನೂ ಓದಿ:ಪತ್ನಿಯನ್ನು ತವರು ಮನೆಗೆ ಕಳಿಸಿ..ಮಗಳ ಕತ್ತು ಹಿಸುಕಿ ಜೀವತೆಗೆದ ತಂದೆ
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಸುಬ್ರಮಣ್ಯಪುರ ಠಾಣೆಯ ಅಂದಿನ ಇನ್‌ಸ್ಪೆಕ್ಟರ್ ಬಾಳೇಗೌಡ, ಕೃತ್ಯ ಎಸಗಿದ ರಘುನನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು. ತನಿಖೆ ಬಳಿಕ ಕೋರ್ಟ್‌ಗೆ ಆರೋಪಪಟ್ಟಿ ಸಲ್ಲಿಸಿದ್ದರು. ಕೊಲೆ ಎಸಗಿದ ಪತಿ ರಘುಗೆ ಜೀವಾವಧಿ ಶಿಕ್ಷೆ ಮತ್ತು 20 ಸಾವಿರ ರೂ. ದಂಡ ವಿಧಿಸಿ 71ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯ ನ್ಯಾ.ಕೆ.ಎಸ್.ಜ್ಯೋತಿ, ತೀರ್ಪು ನೀಡಿದ್ದಾರೆ. ಸರ್ಕಾರಿ ಅಭಿಯೋಜಕಿ ಎಚ್.ಆರ್. ಸತ್ಯವತಿ ಅವರು ವಾದ ಮಂಡಿಸಿದ್ದರು.
ಸಿದ್ದರಾಮಯ್ಯ ಬರುವುದಾದರೆ ಆಳಂದ ಕ್ಷೇತ್ರ ಬಿಟ್ಟು ಕೊಡುವೆ: ಬಿ.ಆರ್ ಪಾಟೀಲ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 2 =
Remember me
