ಬೆಂಗಳೂರು: ಜನತಾ ಕರ್ಫ್ಯೂ ಬೆಂಬಲಿ ರಾಜ್ಯ ವ್ಯಾಪಿ ನಾಗರಿಕರು ಮನೆಯಿಂದ ಹೊರ ಬಂದು ಚಪ್ಪಾಳೆ ತಟ್ಟಿ ಕರೊನಾ ವಿರುದ್ಧ ಸೆಣೆಸಾಡುತ್ತಿರುವವರಿಗೆ ಧನ್ಯವಾದ ಸಲ್ಲಿಸಿದರು.
ಕರೊನಾ ತಡೆಗಾಗಿ ಶ್ರಮಿಸುತ್ತಿರುವ ವೈದ್ಯರು, ಸಿಬ್ಬಂದಿ, ಸೈನಿಕರು ಹಾಗೂ ಸರ್ಕಾರಿ ಅಧಿಕಾರಿಗಳನ್ನು  ಗೌರವಿಸಿ ಐದು ನಿಮಿಷ ಚಪ್ಪಾಳೆ ತಟ್ಟಿದರು .
ಸಿಎಂ ಯಡಿಯೂರಪ್ಪ ಡಾಲರ್ಸ್​ ಕಾಲೋನಿಯಲ್ಲಿರುವ ತಮ್ಮ ಮನೆಯಿಂದ ಕುಟುಂಬ ಸದಸ್ಯರೊಂದಿಗೆ ಹೊರ ಬಂದು ಚಪ್ಪಾಳೆ ತಟ್ಟಿದರು. ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡ ಕೂಡ ಚಪ್ಪಾಳೆ ತಟ್ಟಿದರು. ದೇವೇಗೌಡರು ವಾಸ ಇರುವ ಅಕ್ಕ-ಪಕ್ಕದ ಮನೆಯವರು ಹೊರಗೆ ಬಂದು ಚಪ್ಪಾಳೆ ತಟ್ಟಿದರು. ಬೆಂಗಳೂರು ನಗರ ಪೊಲೀಸ್​ ಆಯುಕ್ತ ಭಾಸ್ಕರ್​ರಾವ್​ ಸೇರಿದಂತೆ ಹಲವು ಗಣ್ಯರು ಚಪ್ಪಾಳೆ ತಟ್ಟಿ ಧನ್ಯವಾದ ಅರ್ಪಿಸಿದರು. ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರ ನಿವಾಸಕ್ಕೆ ಭದ್ರತೆ ಒದಗಿಸಿರುವ ಪೊಲೀಸರು ಕೂಡ ಈ ಕಾರ್ಯಕ್ಕೆ ಕೈಜೋಡಿಸಿದರು.
ಜಾಗಟೆಯನ್ನು ಬಾರಿಸಿದರು: ಸಾರ್ವಜನಿಕರು ಜಾಗಟೆ ಬಾರಿಸಿ ವೈದ್ಯರಿಗೆ ಗೌರವ ಅರ್ಪಿಸಿದರು. ಸಂಜೆ 5 ಗಂಟೆ ಆಗುತ್ತಲೇ ಮನೆಯಿಂದ ಹೊರಗೆ ಬಂದ ನಾಗರಿಕರು ಜಾಗಟೆ ಬಾರಿಸಿದರು. ಮಕ್ಕಳು ಕೂಡ ಕೈಜೋಡಿಸಿದರು.
ರಾಯಚೂರು ನಗರದಲ್ಲಿ ವಸತಿ ಗೃಹಗಳಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ಹೊರಗೆ ಬಂದು ಚಪ್ಪಾಳೆ ತಟ್ಟಿ ಗೌರವ ಸಲ್ಲಿಸಿದರು.
ಸ್ಯಾನಿಟೈಜರ್​ ಬೆಲೆ ಕಡಿಮೆ ಮಾಡಿ ಕರೊನಾ ವೈರಸ್​ ನಿಯಂತ್ರಣಕ್ಕೆ ಕೈಜೋಡಿಸಿದ ಐಟಿಸಿ ಕಂಪನಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 + five =
Remember me
