ಪಣಜಿ: ವಾಸ್ಕೋದ ಮುರಗಾಂವ ಕೇಸರವಾಲ್ ಗಣೇಶ ಮಂದಿರದ ಅರ್ಚಕರಾಗಿ ಸೇವೆ ಸಲ್ಲಿಸುತ್ತಿರುವ ಕರ್ನಾಟಕದ ವಿಜಯಪುರದ ಬಸವರಾಜ್ ಹೊಸ್ಮಠ ಎಂಬುವರ ಮೇಲೆ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಬಸವರಾಜ್ ಅವರು ಅನೇಕ ವರ್ಷಗಳಿಂದ ಗೋವಾದ ಮುರಗಾಂವ ಗಣೇಶ ಮಂದಿರದಲ್ಲಿ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಆದರೆ, ಇದ್ದಕ್ಕಿದ್ದಂತೆಯೇ ಅರ್ಚಕರನ್ನು ಸ್ಥಳೀಯರು ಕಾರಿನಲ್ಲಿ ಹೊತ್ತೊಯ್ದು ಥಳಿಸಿ ಬೆದರಿಕೆಯೊಡ್ಡಿದ್ದಾರೆ ಎನ್ನಲಾಗಿದೆ. ದೇವಸ್ಥಾನದ ಪೂಜೆ ಬಿಟ್ಟು ವಾಪಸ್ ಊರಿಗೆ ತೆರಳುವಂತೆ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.
ಇದರಿಂದ ಭಯಭೀತರಾಗಿರುವ ಅರ್ಚಕರು ಊರಿಗೆ ವಾಪಸ್ ತೆರಳಲು ಸಿದ್ಧತೆ ನಡೆಸಿದ್ದರು. ವಿಷಯ ತಿಳಿದ ಭಕ್ತರು ಹಾಗೂ ದೇವಸ್ಥಾನ ಸಮಿತಿ ಪ್ರಮುಖರು ಭೀತಿಗೊಳಗಾಗಿದ್ದು, ದೇವಸ್ಥಾನವನ್ನು ತೆರವುಗೊಳಿಸಲು ಈ ರೀತಿ ಕೃತ್ಯ ನಡೆಸಲಾಗುತ್ತಿದೆಯೇ..? ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:twenty − 4 =
Remember me
