ಬೆಂಗಳೂರು:ಅಪರಾಧ ಪ್ರಕರಣಗಳಲ್ಲಿ ಭಾಗಿಯಾದ ಅಪರಾಧಿಗಳನ್ನು ಹುಡುಕಿಕೊಟ್ಟಂತಹ ವ್ಯಕ್ತಿಗಳಿಗೆ ಪೊಲೀಸ್ ಇಲಾಖೆಯಿಂದ ನೀಡಲಾಗುವ ಬಹುಮಾನದ ಮೊತ್ತವನ್ನು ಪರಿಷ್ಕರಣೆ ಮಾಡಲಾಗಿದೆ. ಈ ಹಿಂದೆ ಇದ್ದ 20,000 ರೂ. ಬಹುಮಾನ ಮೊತ್ತವನ್ನು 5 ಲಕ್ಷ ರೂ.ಗೆ ಹೆಚ್ಚಿಸಲಾಗಿದ್ದು, ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ಅನುಮೋದನೆ ನೀಡಿದ್ದಾರೆ.
ಅಪರಾಧ ಪ್ರಕರಣದಲ್ಲಿ, ಉದ್ಘೋಷಿತ ಅಪರಾಧಿಗಳನ್ನು(ಅಪರಾಧಿಗಳನ್ನು ಪತ್ತೆ ಮಾಡಿದವರಿಗೆ ಸೂಕ್ತ ಬಹುಮಾನದಂತಹ ಜಾಹೀರಾತು) ಪತ್ತೆ ಮಾಡುವ, ರಾಷ್ಟ್ರೀಯ ಸುರಕ್ಷತೆ, ಕಾನೂನು ಮತ್ತು ಸುವ್ಯವಸ್ಥೆ, ಮಾದಕದ್ರವ್ಯ ಕಳ್ಳ ಸಾಗಣೆ, ಆಯುಧ ಕಳ್ಳ ಸಾಗಣೆ ಮತ್ತು ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯದಂತಹ ಪ್ರಕರಣಗಳಲ್ಲಿ, ಪೊಲೀಸರಿಗೆ ಸುಳಿವು ನೀಡುವ ವ್ಯಕ್ತಿಗಳಿಗೆ ಇನ್ನು ಮುಂದೆ 5 ಲಕ್ಷ ರೂ. ಬಹುಮಾನ ನೀಡಲಾಗುತ್ತದೆ.
ಬಹುಮಾನದ ಮೊತ್ತವನ್ನು ಹೆಚ್ಚಿಸುವ ಸಂಬಂಧ ರಾಜ್ಯ ಪೊಲೀಸ್ ಮುಖ್ಯಸ್ಥರು ಗೃಹ ಇಲಾಖೆಗೆ ಪ್ರಸ್ತಾವನೆ ಸಲ್ಲಿಸೊದ್ದರು. ಇದರನ್ವಯ ಇದೀಗ ಸಚಿವ ಅರಗ ಜ್ಞಾನೇಂದ್ರ ಅನುಮೋದನೆಗೆ ಅಂಕಿತ ಹಾಕಿದ್ದಾರೆ. ಬಹುಮಾನದ ಮೊತ್ತವನ್ನು ಈ ಹಿಂದೆ 2017 ರಲ್ಲಿ ಪರಿಷ್ಕರಿಸಲಾಗಿತ್ತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 2 =
Remember me
