ಬೆಂಗಳೂರು:ಕೇಂದ್ರ ತನಿಖಾ ಸಂಸ್ಥೆಗಳ ಮಾದರಿ ಎಫ್​ಐಆರ್ ದಾಖಲಿಸುವ ಅಧಿಕಾರವನ್ನು ಅಪರಾಧ ತನಿಖಾ ವಿಭಾಗಕ್ಕೂ (ಸಿಐಡಿ) ವಹಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಇದೀಗ ಸಿಐಡಿಗೆ ಪ್ರತ್ಯೇಕ ಎಫ್​ಐಆರ್ ದಾಖಲಿಸುವ ಅಧಿಕಾರ ಲಭಿಸಿದ್ದು, ತನಿಖೆಗೆ ಚುರುಕು ಮತ್ತು ಮತ್ತಷ್ಟು ಪಾರದರ್ಶಕತೆ ಸಿಗಲಿದೆ.
ದೇಶದಲ್ಲಿ ನಡೆಯುವ ಭಯೋತ್ಪಾದಕ ಚಟುವಟಿಕೆ, ಆರ್ಥಿಕ ಅಪರಾಧ, ಹವಾಲ ದಂಧೆ ಸೇರಿ ಗಂಭೀರ ಅಪರಾಧ ಪ್ರಕರಣಗಳನ್ನು ಸಿಬಿಐ, ಎನ್​ಐಎ ಸೇರಿ ಕೇಂದ್ರ ತನಿಖಾ ಸಂಸ್ಥೆಗಳು ಕೈಗೊಂಡಾಗ ತಮ್ಮ ವ್ಯಾಪ್ತಿಯ ಠಾಣೆಯಲ್ಲಿ ಎಫ್​ಐಆರ್ ದಾಖಲಿಸಿ ತನಿಖೆ ಶುರು ಮಾಡಲಿವೆ. ರಾಜ್ಯದಲ್ಲಿ ಉನ್ನತ ತನಿಖಾ ಸಂಸ್ಥೆಯಾದ ಸಿಐಡಿಗೆ ಈ ಅಧಿಕಾರ ಇರಲಿಲ್ಲ. ರಾಜ್ಯ ಸರ್ಕಾರ ಗಂಭೀರ ಅಪರಾಧ ಪ್ರಕರಣಗಳ ತನಿಖೆಯನ್ನು ಸಿಐಡಿಗೆ ವಹಿಸಿದಾಗ ಅಪರಾಧ ಕೃತ್ಯ ನಡೆದ ಸ್ಥಳೀಯ ಠಾಣೆಯಲ್ಲಿ ಅಥವಾ ಸ್ಥಳೀಯ ಪೊಲೀಸರು ದಾಖಲಿಸುವ ಎಫ್​ಐಆರ್ ಆಧಾರದ ಮೇಲೆ ತನಿಖೆ ಶುರು ಮಾಡುತ್ತಿದ್ದರು. ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ಸಹ ಸ್ಥಳೀಯ ಕೋರ್ಟ್​ನಲ್ಲಿ ನಡೆಯುತ್ತಿತ್ತು. ತನಿಖೆ ಪೂರ್ಣಗೊಂಡ ಮೇಲೂ ಸಿಐಡಿ ಅಧಿಕಾರಿಗಳು ಸ್ಥಳೀಯ ಕೋರ್ಟ್​ಗೆ ಆರೋಪಪಟ್ಟಿ ಸಲ್ಲಿಸುತ್ತಿದ್ದರು. ಜಿಲ್ಲಾ ಕೋರ್ಟ್ಗಳಲ್ಲಿ ಮೇಲ್ವಿಚಾರಣೆಗೆ ಸಿಐಡಿ ಅಧಿಕಾರಿಗಳಿಗೆ ಕಷ್ಟಸಾಧ್ಯವಾಗಿತ್ತು.
ಇದನ್ನು ಮನಗಂಡ ಸಿಐಡಿ ಡಿಜಿಪಿ ಡಾ.ಎಂ.ಎ. ಸಲೀಂ, ಕೇಂದ್ರ ತನಿಖಾ ಸಂಸ್ಥೆಗಳ ಮಾದರಿ ಸಿಐಡಿಗೂ ಎಫ್​ಐಆರ್ ದಾಖಲಿಸುವ ಅಧಿಕಾರ ನೀಡಬೇಕೆಂದು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ಗೃಹ ಇಲಾಖೆ ಮತ್ತು ಕಾನೂನು ಇಲಾಖೆ ಸಮ್ಮತಿಸಿ ಸಿಐಡಿಗೆ ಪೊಲೀಸ್ ಠಾಣೆ ಅಧಿಕಾರವನ್ನು ಕೊಟ್ಟು ಅಧಿಸೂಚನೆ ಹೊರಡಿಸಿದೆ. ಸುಪ್ರೀಂ ಕೋರ್ಟ್, ಹೈಕೋರ್ಟ್, ರಾಜ್ಯ ಸರ್ಕಾರ ಅಥವಾ ರಾಜ್ಯ ಪೊಲೀಸ್ ಮಹಾನಿರ್ದೇಶಕರ ಅಡಿಯಲ್ಲಿ ಅಪರಾಧ ಕೃತ್ಯಗಳ ತನಿಖೆಗೆ ಎಫ್​ಐಆರ್ ದಾಖಲಿಸುವ ಅಧಿಕಾರವನ್ನು ಇನ್​ಸ್ಪೆಕ್ಟರ್ ದರ್ಜೆ ಅಧಿಕಾರಿಗೆ ವಹಿಸಲಾಗಿದೆ. ಸಿಐಡಿ ಅಧೀನದಲ್ಲಿ ಈ ಇನ್​ಸ್ಪೆಕ್ಟರ್ ಕರ್ತವ್ಯ ನಿರ್ವಹಿಸಲಿದ್ದು, ಕಾರ್ಯ ವ್ಯಾಪ್ತಿ ಇಡೀ ರಾಜ್ಯವಾಗಿರುತ್ತದೆ. ಇನ್ನು ಮುಂದೆ ರಾಜ್ಯ ಸರ್ಕಾರ ವರ್ಗಾವಣೆ ಮಾಡುವ ಪ್ರಕರಣಗಳ ಸಂಬಂಧ ಸಿಐಡಿ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಎಫ್​ಐಆರ್ ದಾಖಲಿಸಿ ತನಿಖೆ ಶುರು ಮಾಡಲಾಗುತ್ತದೆ. ಗಂಭೀರ ಪ್ರಕರಣಗಳನ್ನು ಮಾತ್ರ ತನಿಖೆ ನಡೆಸುವುದರಿಂದ ಮಾಹಿತಿ ಸೋರಿಕೆ ಆಗುವುದನ್ನು ತಪ್ಪಿಸಲು ಸಾಧ್ಯವಾಗಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸಿಸಿಬಿಗೂ ಅಧಿಕಾರ:ಬೆಂಗಳೂರು ನಗರ ಪೊಲೀಸ್ ಕಮಿಷನರೇಟ್​ನಲ್ಲಿ ಇರುವ ಕೇಂದ್ರ ಅಪರಾಧ ವಿಭಾಗ(ಸಿಸಿಬಿ)ಕ್ಕೂ ಪೊಲೀಸ್ ಠಾಣೆ ಅಧಿಕಾರವನ್ನು ರಾಜ್ಯ ಸರ್ಕಾರ ವಹಿಸಿದೆ. ಸಿಸಿಬಿಯಲ್ಲೇ ನೇರವಾಗಿ ಎಫ್​ಐಆರ್ ದಾಖಲಿಸಿ ತನಿಖೆ ಶುರು ಮಾಡಬಹುದು. ಈ ಮೊದಲು ಸ್ಥಳೀಯ ಠಾಣೆಗಳಲ್ಲಿ ದಾಖಲಾಗಿರುವ ಪ್ರಕರಣಗಳನ್ನು ಪೊಲೀಸ್ ಆಯುಕ್ತರು ಶಿಫಾರಸು ಮಾಡಿದಾಗ ಸಿಸಿಬಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದರು. ಇದರ ಜತೆಗೆ ಸಿಸಿಬಿ ಪೊಲೀಸರು, ದೂರು ಪಡೆದು ಪ್ರಾಥಮಿಕ ತನಿಖೆ ನಡೆಸಿ ಸಾಕ್ಷ್ಯಾಧಾರ ಇದ್ದರೆ ಕೃತ್ಯ ನಡೆದ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಿಸಿ ಮುಂದಿನ ತನಿಖೆ ನಡೆಸಿ ಕೋರ್ಟ್​ಗೆ ಆರೋಪಪಟ್ಟಿ ಸಲ್ಲಿಸುತ್ತಿದ್ದರು. ಇದೀಗ ಪೊಲೀಸ್ ಠಾಣೆ ಅಧಿಕಾರವನ್ನು ಸಿಸಿಬಿ ವಹಿಸಲಾಗಿದೆ. ಚಾಮರಾಜಪೇಟೆ ಸಿಸಿಬಿ ಕಟ್ಟಡದಲ್ಲಿಯೇ ಪೊಲೀಸ್ ಠಾಣೆ ತೆರೆದು ಇನ್​ಸ್ಪೆಕ್ಟರ್ ನೇಮಕ ಮಾಡಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − thirteen =
Remember me
