ಹಾಸನ:ಬೇಲೂರು ತಾಲೂಕಿನ ಕಣಗುಪ್ಪೆ ಗ್ರಾಮದ ಮುಖ್ಯ ರಸ್ತೆಯಲ್ಲಿ ಬೆಳ್ಳಂಬೆಳಗ್ಗೆ ದೈತ್ಯ ಗಾತ್ರದ ಕಾಡಾನೆ ಕಾಣಿಸಿಕೊಂಡಿದ್ದು, ಸದ್ಯ ಈ ವಿಡಿಯೋ ವೈರಲ್ ಆಗಿದೆ.
ಆನೆಯು ಮನೆಗಳ ಅಕ್ಕಪಕ್ಕದಲ್ಲೇ ಗಾಂಭೀರ್ಯದಿಂದ ನಡೆದುಕೊಂಡು ಹೋಗುತ್ತಿರುವುದನ್ನು ಕಂಡು ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಸದ್ಯ ಕಾಡು ಆನೆಗಳ ಹಾವಳಿ ಮಲೆನಾಡು ಭಾಗದಲ್ಲಿ ಹೆಚ್ಚಿದ್ದು, ಈ ಭಾಗದ ಗ್ರಾಮಸ್ಥರಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ.
ಲಾರಿಯೊಂದರ ಮೇಲೆ ಕಾಡಾನೆ ದಾಳಿಕೆಲವು ದಿನಗಳ ಹಿಂದೆ ಕೆಟ್ಟು ನಿಂತಿದ್ದ ಲಾರಿಯೊಂದರ ಮೇಲೆ ಕಾಡಾನೆಯೊಂದು ದಾಳಿ ಮಾಡಿ ಟಾರ್ಪಲ್ ಕಿತ್ತೆಸೆದು ರಂಪಾಟ ಮಾಡಿರುವ ಘಟನೆ ಚಾಮರಾಜನಗರ ಗಡಿಭಾಗದ ತಮಿಳುನಾಡಿನ‌ ಆಸನೂರಿನಲ್ಲಿ ನಡೆದಿತ್ತು.
ಆಹಾರ ಅರಸಿ ಆಗಾಗ್ಗೆ ಆನೆಗಳು ಕಾಡಿನಿಂದ ರಸ್ತೆಗಿಳಿದು ರಂಪಾಟ ನಡೆಸುತ್ತವೆ. ಕಬ್ಬು ತುಂಬಿದ ಲಾರಿಗಳಿಗಾಗಿ ಆನೆಗಳು ರಸ್ತೆಗೆ ಬರುತ್ತಿರುವುದರಿಂದ ನಿತ್ಯವೂ ವಾಹನ ಸವಾರರು ಇಲ್ಲಿ ಹೈರಾಣಾಗಿದ್ದಾರೆ.
ಅಧ್ಯಯನಕ್ಕೆ ತಜ್ಞರ ಸಮಿತಿಇತ್ತೀಚೆಗೆಷ್ಟೇ ಈಶ್ವರ ಖಂಡ್ರೆ ಅವರು ಆನೆ ದಾಳಿ ತಡೆಯಲು ಇಲಾಖೆಯಿಂದ ಸಾಕಷ್ಟು ಕ್ರಮ ಕೈಗೊಳ್ಳುತ್ತಿದ್ದೇವೆ. ಆನೆ ದಾಳಿಯಿಂದ ಜನರ ಸಾವಿನ ಬಗ್ಗೆ ಅಧ್ಯಯನ ಮಾಡಲು ತಜ್ಞರ ಸಮಿತಿ ರಚನೆ ಮಾಡಲಾಗುತ್ತಿದೆ. ವರದಿ ಸಂಗ್ರಹಿಸಿ ಶಾಶ್ವತ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸುತ್ತೇವೆ. ಪ್ರಮುಖವಾಗಿ ಆನೆ ಕಾರಿಡಾರ್ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ತತ್​​​ಕ್ಷಣ ಯಾವುದೇ ಕೆಲಸ ಆಗುವುದಿಲ್ಲ. ಆನೆ ದಾಳಿ ತಡೆಯಲು ರೈಲ್ವೆ ಬ್ಯಾರಿಕೇಡ್ ನಿರ್ಮಾಣ ಮಾಡುವ ಸಲಹೆ ಬಂದಿದೆ ಎಂದು ತಿಳಿಸಿದರು.
ಈ ಹುಡುಗ ಕಾಲೇಜಿಗೆ ಹೋಗೋದು ಬೈಕ್-ಕಾರ್​​​​ನಲ್ಲಿ ಅಲ್ಲ, ಫ್ಲೈಟ್​​​​ನಲ್ಲಿ… ಯಾಕೆ ‘ಏನಕ್ಕೆ’ ಅನ್ನೋದು ಗೊತ್ತಾದ್ರೆ ಬೆರಗಾಗ್ತೀರಾ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven − 3 =
Remember me
