ಬೆಂಗಳೂರುಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿರುವ ಶಾಲೆ ಮತ್ತು ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ 9ನೇ ತರಗತಿ ಮತ್ತು ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಮಾತ್ರ ಶೈಕ್ಷಣಿಕ ಪ್ರವಾಸಕ್ಕೆ ಅವಕಾಶವಿದ್ದು, ಉಳಿದ ವಿದ್ಯಾರ್ಥಿಗಳು ಪ್ರವಾಸದಿಂದ ವಂಚಿತರಾಗುತ್ತಿದ್ದಾರೆ.
9 ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರವಾಸೋದ್ಯಮ ಇಲಾಖೆ ಸಹಯೋಗದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲು ಸಮಾಜ ಕಲ್ಯಾಣ ಇಲಾಖೆಯು ಆದೇಶ ಹೊರಡಿಸಿದೆ. ಇದೇ ಆದೇಶವು ಉಳಿದ ತರಗತಿಗಳ ವಿದ್ಯಾರ್ಥಿಗಳಿಗೆ ಏಕಿಲ್ಲ ಎಂದು ಪ್ರಶ್ನಿಸಿದ್ದಾರೆ.
2019ರ ವರೆಗೂ 6ರಿಂದ 12ನೇ ತರಗತಿಯ ಎಲ್ಲ ವಿದ್ಯಾರ್ಥಿಗಳಿಗೂ ಪ್ರವಾಸಕ್ಕೆ ಅನುಮತಿ ನೀಡಲಾಗಿತ್ತು. 2019ರ ನಂತರ ಕೇವಲ 2 ತರಗತಿಗಳಿಗೆ ಮಾತ್ರ ಅನುಮತಿ ನೀಡಿದೆ. ಉಳಿದ ತರಗತಿಗಳನ್ನು ಪರಿಗಣಿಸುತ್ತಿಲ್ಲ ಎನ್ನುತ್ತಾರೆ.
ಶೈಕ್ಷಣಿಕ ಪ್ರವಾಸಕ್ಕೆ ಇಲಾಖೆಯಿಂದಲೇ ಅನುದಾನ ನೀಡಬೇಕಿದೆ. ಎಲ್ಲ ಮಕ್ಕಳಿಗೂ ನೀಡಲು ಸಾಕಷ್ಟು ಹಣ ಬೇಕಾಗುತ್ತದೆ. ಆದ್ದರಿಂದ ವಸತಿ ಶಾಲೆಯಲ್ಲಿ ಒಂದು ಬಾರಿ ಪ್ರವಾಸಕ್ಕೆ ಕರೆದುಕೊಂಡು ಹೋಗುವ ಉದ್ದೇಶದಿಂದ ಈ ರೀತಿಯ ನಿಯಮಗಳನ್ನು ತರಲಾಗಿದೆ ಎಂದು ವಸತಿ ಶಾಲೆಯ ಶಿಕ್ಷಕರೊಬ್ಬರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಪ್ರವಾಸ ಕೈಗೊಳ್ಳಲು ಕಡ್ಡಾಯವಾಗಿ ಪಾಲಕರ ಅನುಮತಿ ಪಡೆಯಬೇಕು. ಪ್ರವಾಸದ ನಂತರ ಖರ್ಚಿನ ಬಾಬ್ತು ಲೆಕ್ಕಪತ್ರಗಳನ್ನು ಇಲಾಖೆಗೆ ಸಲ್ಲಿಸಬೇಕು. ಯಾವುದೇ ಕಾರಣಕ್ಕೂ ಬಲವಂತವಾಗಿ ಹಣ ಸಂಗ್ರಹಿಸಿ ಪ್ರವಾಸ ಕೈಗೊಳ್ಳಬಾರದು. ಡಿಸೆಂಬರ್ ತಿಂಗಳೊಳಗೆ ಪ್ರವಾಸ ಕೈಗೊಳ್ಳಬೇಕು ಎಂದು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಕರು ಸೂಚನೆ ನೀಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − 10 =
Remember me
