ಬೆಂಗಳೂರು: ಕೇಂದ್ರ ಸರ್ಕಾರ ಜಾರಿ ಮಾಡಿರುವ ಮಹಿಳಾ ಮೀಸಲಾತಿ ಕಾಯ್ದೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಇದು ಮಹಿಳೆಯರಿಗೆ ಬಿಜೆಪಿ ಮಾಡಿರುವ ಪರಮ ವಂಚನೆ ಎಂಬುದಾಗಿ ಹೇಳಿದ್ದಾರೆ.
ಡಾ.ರಾಮ ಮನೋಹರ ಲೋಹಿಯಾ ಸಮತಾ ವಿದ್ಯಾಲಯ, ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಮತ್ತು ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಇಂದು ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ “ಮಹಿಳಾ ಮೀಸಲಾತಿ” ವಿಚಾರ ಸಂಕಿರಣ ಉದ್ಘಾಟಿಸಿದ ಸಿಎಂ ಈ ರೀತಿ ಹೇಳಿದರು.
ಮಹಿಳಾ ಮೀಸಲಾತಿಗೆ ಡಿ-ಲಿಮಿಟೇಷನ್, ಜನಗಣತಿಯ ಕೊಕ್ಕೆ ಹಾಕಿ ಆಯಸ್ಸು ಫಿಕ್ಸ್ ಮಾಡಿರುವುದು ಬಿಜೆಪಿಯ ಡೋಂಗಿತನ. ಆದ್ದರಿಂದ ಮಹಿಳಾ ಮೀಸಲಾತಿ ಜಾರಿ ಆಗುವುದೇ ಅನುಮಾನ. ಮಹಿಳೆಯರಿಗೆ ಮೀಸಲಾತಿ ಕೊಡಬೇಕು ಎನ್ನುವ ಪ್ರಾಮಾಣಿಕ ಕಾಳಜಿ ಬಿಜೆಪಿಗೆ ಇದ್ದಿದ್ದರೆ ಇಷ್ಟೊಂದು ಅಡೆತಡೆಗಳನ್ನು ಹಾಕುತ್ತಿರಲಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.
ಪ್ರಧಾನಿ ಜಾರಿ ಮಾಡಿರುವ ಮಹಿಳಾ ಮೀಸಲಾತಿಗೆ ಕೇಂದ್ರ ಸರ್ಕಾರ 15 ವರ್ಷ ಆಯಸ್ಸು ಫಿಕ್ಸ್ ಮಾಡಿದೆ. ಕಾಯ್ದೆ ಜಾರಿಯಾದ ದಿನದಿಂದ 15 ವರ್ಷ ಆಯಸ್ಸು ಇದೆ. ಅಂದರೆ ಈಗ ಕಾಯ್ದೆ ಜಾರಿ ಆಗಿದೆ. ಇದಕ್ಕೆ ಇನ್ನು 15 ವರ್ಷ ಮಾತ್ರ ಆಯಸ್ಸು. ಆದರೆ, ಜಾತಿ ಜನಗಣತಿ ಮತ್ತು ಡಿ-ಲಿಮಿಟೇಷನ್ ಎನ್ನುವ ಎರಡು ಕೊಕ್ಕೆ ಹಾಕಿಟ್ಟಿದ್ದಾರೆ. ಇವರೆಡೂ ಮುಗಿಯುವ ವೇಳೆಗೆ 15 ವರ್ಷ ಆಗಿರತ್ತೆ. ಹೀಗಾಗಿ ಮಹಿಳಾ ಮೀಸಲಾತಿ ಕಾಯ್ದೆ ಜಾರಿ ಆಗುವ ಮೊದಲೇ ಅದರ ಆಯಸ್ಸೇ ಮುಗಿದು ಹೋಗಿರುತ್ತದೆ. ಇದು ಮಹಿಳೆಯರಿಗೆ ಮಾಡಿರುವ ಪರಮ ವಂಚನೆ ಎಂದು ಅವರು ಹೇಳಿದರು.
ಮಹಿಳಾ ಮೀಸಲಾತಿ ಜಾರಿ ಮಾಡುವುದಕ್ಕೆ ದೇವರೇ ನನ್ನನ್ನು ಕಳುಹಿಸಿದ್ದು ಎಂದು ಪ್ರಧಾನಿ ತಮ್ಮ ಭಾಷಣದಲ್ಲಿ ಮೊನ್ನೆ ಹೇಳಿದರು. ಈಗ ನೋಡಿದ್ರೆ ಈ ರೀತಿ ಮಹಿಳೆಯರಿಗೆ ವಂಚನೆ ಆಗಿದೆ. ಮಹಿಳೆಯರಿಗೆ ವಂಚನೆ ಮಾಡಿ ಅಂತಲೇ ದೇವರು ಮೋದಿಯವರನ್ನು ಕಳುಹಿಸಿದ್ದು? ಎಂದು ಅವರು ಹೇಳಿದರು.
ಮಹಿಳಾ ಮೀಸಲಾತಿ ಬಿಲ್ ಸಿದ್ಧ ಪಡಿಸಿದ್ದು ಕಾಂಗ್ರೆಸ್. ಕಾಂಗ್ರೆಸ್ ಯಾವತ್ತೂ ಮಹಿಳಾ ಮೀಸಲಾತಿ ಮತ್ತು ಸಾಮಾಜಿಕ ನ್ಯಾಯದ ಪರವಾಗಿ ಇದೆ. ಮಹಿಳಾ ಮೀಸಲಾತಿಯಲ್ಲೂ ಹಿಂದುಳಿದ ವರ್ಗಗಳ ಮಹಿಳೆಯರಿಗೆ ಮೀಸಲಾತಿ ಇರಬೇಕು ಎನ್ನುವುದಕ್ಕೆ ನನ್ನ ಪೂರ್ಣ ಬೆಂಬಲ ಇದೆ. ಅದರಲ್ಲೂ ಶೇ. 33 ಮಾತ್ರವಲ್ಲ, ಶೇ. 50 ಮೀಸಲಾತಿಗೆ ನನ್ನ ಸಂಪೂರ್ಣ ಬೆಂಬಲ ಇದೆ ಎಂದರು.
ಈಗ ಮೋದಿಯವರು ಜಾರಿ ಮಾಡಿದ್ದೇನೆ ಎನ್ನುತ್ತಿರುವ ಈ ಮಹಿಳಾ ಮೀಸಲಾತಿ 2024ರಲ್ಲೂ ಜಾರಿ ಆಗುವುದಿಲ್ಲ. 2029ರಲ್ಲೂ ಜಾರಿ ಆಗುವುದಿಲ್ಲ, 2034ರಲ್ಲೂ ಜಾರಿ ಆಗುವುದಿಲ್ಲ. ಅಷ್ಟೊತ್ತಿಗೆ ಕಾಯ್ದೆಯ ಆಯಸ್ಸೇ ಮುಗಿದಿರುತ್ತದೆ ಎಂದು ಹೇಳಿದರು.
ಮಹಿಳೆಯರೂ ಶೂದ್ರರ ರೀತಿ ಶಿಕ್ಷಣದಿಂದ ಸಂಪೂರ್ಣ ವಂಚಿತರಾಗಿದ್ದರು. ಮಹಿಳೆಯರ ಹೋರಾಟ ಮತ್ತು ಸಂವಿಧಾನದ ಕಾರಣಕ್ಕೆ ಶಿಕ್ಷಣದಲ್ಲಿ ಅವಕಾಶ ದೊರೆಯಿತು. ಅವಕಾಶ ಸಿಕ್ಕಿದ್ದರಿಂದ ಪುರುಷರಿಗಿಂತ ಶಿಕ್ಷಣದಲ್ಲಿ ಮುಂದಿದ್ದಾರೆ. ಮಹಿಳಾ ಮೀಸಲಾತಿ ಜಾರಿ ಆಗಿಬಿಟ್ಟಿತು ಎಂದು ಸುಳ್ಳು ನಂಬಿಕೊಂಡು ಸುಳ್ಳು ಚಪ್ಪಾಳೆ ಹೊಡಿಬೇಡಿ. ಮಹಿಳಾ ಮೀಸಲಾತಿ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ನಾವು, ನೀವೆಲ್ಲಾ ಹೋರಾಟ ಮುಂದುವರಿಸಬೇಕು ಎಂದು ಸಿಎಂ ಹೇಳಿದರು.
ಪ್ರಧಾನಿ ಮೋದಿಯನ್ನು ‘ಖಿಲಾಡಿ ನಂ. 1’ ಎಂದು ಕರೆದ ನಟ ಪ್ರಕಾಶ್ ರಾಜ್

ಈ ಲೋಕವನ್ನೇ ಬಿಟ್ಟು ಹೋದ ಪತ್ನಿ; ಪತಿ ಹಾಗೂ ಕುಟುಂಬಸ್ಥರು ಮನೆಬಿಟ್ಟು ಪರಾರಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 + 8 =
Remember me
