ಹಾಸನ: ಹಾಸನಾಂಬ ಭಕ್ತರಿಗೆ ವರ್ಷಕ್ಕೊಮ್ಮೆ ದೊಡ್ಡ ಸಂಭ್ರಮ. ವರ್ಷದಲ್ಲಿ ಒಮ್ಮೆ ಸಿಗುವ ಅದೊಂದು ಅಪರೂಪದ ಅವಕಾಶಕ್ಕೆ ಕಾತರದಿಂದ ಕಾಯುವ ಭಕ್ತರಿಗೆ ಈ ಸಲ ನಿರಾಸೆ ಉಂಟಾಗಿದೆ.
ಹಾಸನಾಂಬ ದರ್ಶನಕ್ಕೆ ದಿನ ನಿಗದಿ ಮಾಡಲಾಗಿದ್ದರೂ ಈ ಸಲ ಸಾರ್ವಜನಿಕರಿಗೆ ದೇವಿ ದರ್ಶನಕ್ಕೆ ಅವಕಾಶವಿಲ್ಲ. “ನವೆಂಬರ್​ 5ರಿಂದ 16ರ ವರೆಗೆ ದೇವಿಯ ದರ್ಶನಕ್ಕೆ ದಿನ ನಿಗದಿ ಮಾಡಲಾಗಿದೆ. ಆದರೆ ಜಿಲ್ಲೆಯಲ್ಲಿ ಕರೊನಾ ಸೋಂಕು ಹೆಚ್ಚಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ನೇರವಾಗಿ ದೇವಿಯನ್ನು ನೋಡಲು ಅವಕಾಶವಿಲ್ಲ” ಎಂದು ಇಂದು ಹಾಸನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆ ಬಳಿಕ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ತಿಳಿಸಿದ್ದಾರೆ.
ಅದಾಗ್ಯೂ ನಗರದಲ್ಲಿ 12 ಕಡೆ ಎಲ್​ಇಡಿ ಪರದೆ ವ್ಯವಸ್ಥೆ ಮಾಡುವ ಮೂಲಕ ದೇವರ ದರ್ಶನ ಲಭಿಸುವಂತೆ ಮಾಡಲಾಗುವುದು. ಮೊದಲ ದಿನ ಬಾಗಿಲು ತೆಗೆಯುವ ವೇಳೆ ಉದ್ಘಾಟನೆಗೆ ಬರುವಂತೆ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರನ್ನು ಕರೆಯುತ್ತೇವೆ. ಮೊದಲ ಹಾಗೂ ಕೊನೆಯ ದಿನ ಆಹ್ವಾನಿತರಿಗೆ ಮಾತ್ರ ನೇರ ದರ್ಶನಕ್ಕೆ ಅವಕಾಶ ಇರುತ್ತದೆ. ಇವೆರಡು ದಿನಗಳ ಹೊರತಾಗಿ ಬೇರೆ ದಿನಗಳಲ್ಲಿ ಯಾವ ವಿಐಪಿಗೂ ದರುಶನ ಇಲ್ಲವೇ ಇಲ್ಲ ಎಂಬುದಾಗಿ ಸಚಿವರು ಸ್ಪಷ್ಟವಾಗಿ ತಿಳಿಸಿದ್ದಾರೆ. ‌
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:seventeen − 14 =
Remember me
