ಚಿತ್ರದುರ್ಗ:ಏನ್ನೂ ಅರಿಯದ ಹಾಲುಗಲ್ಲದ ಕಂದಮ್ಮ ತಂದೆಯಿಂದಲೇ ಕೊಲೆಯಾಗಿದ್ದಾಳೆ.
ಹೆತ್ತ ಮಗಳನ್ನೇ ಕೊಂದು ಊರ ಆಚೆ ಪಾಪಿ ತಂದೆಯೊಬ್ಬ ಸಮಾಧಿ ಮಾಡಿರುವ ಪ್ರಕರಣ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಗುತ್ತಿದುರ್ಗದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಗುತ್ತಿದುರ್ಗದ ನಿಂಗಪ್ಪ ಕೊಲೆ ಆರೋಪಿ. ಈತನಿಗೆ ಪತ್ನಿ ಹಾಗೂ ಇಬ್ಬರು ಗಂಡು ಮಕ್ಕಳಿದ್ದರೂ ಗುತ್ತಿದುರ್ಗದ ಶಶಿಕಲಾಳನ್ನು ಎರನೇ ಮದುವೆಯಾಗಿದ್ದ. 2ನೇ ಹೆಂಡತಿಗೆ ಜನಿಸಿದ ಮಗಳನ್ನೇ ಹತ್ಯೆ ಮಾಡಿದ್ದಾನೆ. 3 ವರ್ಷದ ಸಿರಿಶಾ ಅಪ್ಪನಿಂದಲೇ ಕೊಲೆಯಾದ ನತದೃಷ್ಟ ಮಗು.
ಚಿತ್ರದುರ್ಗದಲ್ಲಿ ವಾಸವಿದ್ದ ನಿಂಗಪ್ಪ, ಒಂದು ತಿಂಗಳ ಹಿಂದೆಯೇ ಸಿರಿಶಾಳನ್ನು ಹತ್ಯೆ ಮಾಡಿ ಗುತ್ತಿದುರ್ಗ ಗ್ರಾಮದ ಹೊರವಲಯದಲ್ಲಿ ಮಣ್ಣು ಮಾಡಿದ್ದ. ಮಗು ನಾಪತ್ತೆಯಾಗಿರುವ ಬಗ್ಗೆ 20 ದಿನಗಳ ಹಿಂದೆಯೇ ಮಹಿಳಾ ಪೊಲೀಸ್ ಠಾಣೆಯಲ್ಲಿ ಶಶಿಕಲಾ ಪ್ರಕರಣ ದಾಖಲಿಸಿದ್ದರು. ಮಗಳನ್ನು ತಂದೆಯೇ ಸಮಾಧಿ ಮಾಡಿರುವ ಬಗ್ಗೆ ಗುತ್ತಿದುರ್ಗ ಗ್ರಾಮಸ್ಥರಿಂದ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ಚಿತ್ರದುರ್ಗ ಮತ್ತು ದಾವಣಗೆರೆ ಪೊಲೀರು ಜಂಟಿಯಾಗಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಭೀಕರ ಅಪಘಾತ: ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು, ತಲೆ-ದೇಹ ಇಬ್ಭಾಗ!

ಮಟಮಟ ಮಧ್ಯಾಹ್ನ ಒಂದೇ ಕುಟುಂಬದ ಮೂರು ಮಕ್ಕಳ ಪ್ರಾಣ ಹೊತ್ತೊಯ್ದ ಜವರಾಯ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven + eighteen =
Remember me
