ಬೆಂಗಳೂರು: ಲಾಕ್​ಡೌನ್ ಅವಧಿಯಲ್ಲಿ ರದ್ದಾದ ರೈಲುಗಳಲ್ಲ ಪ್ರಯಾಣಿಸಲು ಟಿಕೆಟ್ ಪಡೆದಿದ್ದವರಿಗೆ ಹಣ ಮರುಪಾವತಿಸಲು ನೈಋತ್ಯ ರೈಲ್ವೆ ಅಧಿಕಾರಿಗಳು ಮುಂದಾಗಿದ್ದು, ಅದಕ್ಕಾಗಿ 9 ನಿಲ್ದಾಣಗಳಲ್ಲಿ ಕೇಂದ್ರಗಳನ್ನು ತೆರೆದಿದ್ದಾರೆ.
ಇದನ್ನೂ ಓದಿ:ಭೀಕರ ಕರಡಿ ದಾಳಿಗೆ ತತ್ತರಿಸಿದ ಚನ್ನಪಟ್ಟಣ: ನಗರಸಭೆ ಮಾಜಿ ಸದಸ್ಯೆ ಸ್ಥಿತಿ ಗಂಭೀರ
ಕರೊನಾ ಭೀತಿಯಿಂದಾಗಿ ಮಾ. 24ರಿಂದ ದೇಶವ್ಯಾಪಿ ಲಾಕ್​ಡೌನ್ ಮಾಡಲಾಗಿದೆ. ಅದರಿಂದಾಗಿ ರೈಲು ಸಂಚಾರ ರದ್ದಾಗುವಂತಾಗಿತ್ತು. ಆದರೆ, ಅದಕ್ಕೂ ಮುನ್ನ ರೈಲಿನಲ್ಲಿ ಪ್ರಯಾಣಿಕರು ಸಾವಿರಾರು ಜನರು ಟಿಕೆಟ್ ಖರೀದಿಸಿದ್ದರು. ರದ್ದಾದ ರೈಲುಗಳಲ್ಲಿ ಸಂಚರಿಸಲು ಟಿಕೆಟ್ ಖರೀದಿಸಿದವರಿಗೆ ಹಣ ವಾಪಸ್ ನೀಡಲು ನೈಋತ್ಯ ರೈಲ್ವೆ ನಿರ್ಧರಿಸಿದೆ. ಅದಕ್ಕಾಗಿ ಕೆಎಸ್​ಆರ್ ಬೆಂಗಳೂರು ನಗರ ನಿಲ್ದಾಣ, ಬೆಂಗಳೂರು ದಂಡು, ಯಶವಂತಪುರ, ಕೆ.ಆರ್. ಪುರ, ಕೆಂಗೇರಿ, ಮಂಡ್ಯ, ತುಮಕೂರು ಮತ್ತು ಹೊಸೂರು ನಿಲ್ದಾಣಗಳ ಮುಂಗಡ ಟಿಕೆಟ್ ಕಾಯ್ದಿರಿಸುವ ಕೌಂಟರ್​ಗಳಲ್ಲಿ ಹಣ ವಾಪಸ್ ಪಡೆಯಬಹುದು.
ಇದನ್ನೂ ಓದಿ:ತಳವಾರ, ಪರಿವಾರಕ್ಕೆ ಪರಿಶಿಷ್ಟ ಪಂಗಡ ಪ್ರಮಾಣಪತ್ರ ನೀಡಿ
ವಾರದ ದಿನಗಳಲ್ಲಿ ಮಧ್ಯಾಹ್ನ 12ರಿಂದ ಸಂಜೆ 6ರವರೆಗೆ ಹಾಗೂ ಭಾನುವಾರ ಮತ್ತು ರಜಾದಿನಗಳಲ್ಲಿ ಬೆಳಗ್ಗೆ 11ರಿಂದ ಮಧ್ಯಾಹ್ನ 2 ಗಂಟೆವರೆಗೆ ಟಿಕೆಟ್ ಹಣ ವಾಪಸ್ ಪಡೆಯಲು ಸಮಯ ನಿಗದಿ ಮಾಡಲಾಗಿದೆ. ಜು.31ರೊಳಗೆ ಹಣ ನಿಗದಿತ ಕೌಂಟರ್​ಗಳಲ್ಲಿ ಹಣ ಪಡೆಯುವಂತೆ ಅಧಿಕಾರಿಗಳು ತಿಳಿಸಿದ್ದಾರೆ.
ಸತ್ತವ ಎದ್ದು ಬಂದ; ಮತ್ತೆ ಸತ್ತ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 3 =
Remember me
