ಕೊಡಗು:ರಾಷ್ಟ್ರೀಯ ಪ್ರಾಣಿ ಹುಲಿಯನ್ನೇ ಕೊಂದ ದುಷ್ಕರ್ಮಿಗಳು ಉಗುರಿಗಾಗಿ ಅದರ ಕಾಲು ಕತ್ತರಿಸಿದ ಅಮಾನವೀಯ ಘಟನೆ ನಾಗರಹೊಳೆ ಅಭಯಾರಣ್ಯ ವ್ಯಾಪ್ತಿಯ ಕಲ್ಲಹಳ್ಳದಲ್ಲಿ ಬೆಳಕಿಗೆ ಬಂದಿದೆ.
ಹುಲಿ ಹತ್ಯೆಕೋರರ ಪತ್ತೆಗಾಗಿ ಶೋಧ ಕಾರ್ಯಕ್ಕೆ ಬಂಡೀಪುರದಿಂದ ಶ್ವಾನದಳದ ರಾಣನನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಿರಾಜಪೇಟೆಯ ಬಾಳೆಲೆ ಗ್ರಾಮಕ್ಕೆ ಕರೆತಂದಿದ್ದರು. ಮಲಯಾಳಿ ಸಂತೋಷ್ ಮನೆಗೆ ನುಗ್ಗಿದ ರಾಣಾನಿಂದ ಅಲ್ಲಿದ್ದ ಒಂದೂವರೆ ಕೆಜಿ ಜಿಂಕೆ ಮಾಂಸ ಪತ್ತೆಯಾಯ್ತು. ಆರೋಪಿ ಸಂತೋಷ್​ನನ್ನು ಪೊಲೀಸರು ಬಂಧಿಸಿದರು. ನಂತರ ಸಂತೋಷ್​ನ​ ಸಹಚರರಾದ ಹೊಟ್ಟೆಂಗಡ ರಂಜು, ಕಾಂಡೇರ ಶಶಿ, ಕಾಂಡೇರ ಶರಣು ಮನೆ ಬಳಿಯೂ ಹೋದ ರಾಣಾ, ಆ ಮನೆಯಲ್ಲಿ ದುಷ್ಕರ್ಮಿಗಳು ಬಚ್ಚಿಟ್ಟಿದ್ದ ಹುಲಿಯ ಪಂಜ, ಕಾಡತೂಸುಗಳನ್ನೂ ಪತ್ತೆ ಮಾಡಿತು.
ಇದನ್ನೂ ಓದಿರಿಖುಷಿಗಾಗಿ ಕಡಲತೀರಕ್ಕೆ ಬಂದ ದಂಪತಿ ಬದುಕಲ್ಲಿ ಬಿರುಗಾಳಿ, ಪತ್ನಿ ಕಣ್ಣೆದುರಲ್ಲೇ ಪತಿ ಸಾವು
ಹುಲಿ ಕೊಂದು ಅದ ಪಂಜ ಬಚ್ಚಿಟ್ಟಿದ್ದ ಮೂವರು ದುಷ್ಕರ್ಮಿಗಳು ಪರಾರಿಯಾಗಿದ್ದು, ಅವರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ರಾಣಾ ಜಾಣ್ಮೆಯನ್ನು ಬಾಳೆಲೆ ಗ್ರಾಮಸ್ಥರು ಶ್ಲಾಘಿಸಿದ್ದಾರೆ. ತಮ್ಮೂರಿಗೆ ಕಪ್ಚುಚುಕ್ಕೆಯಾದ ಪ್ರಕರಣದಲ್ಲಿ ಪಾಲ್ಗೊಂಡ ಮೂವರು ಆರೋಪಿಗಳನ್ನು ಬಂಧಿಸಿ ಶಿಕ್ಷಿಸುವಂತೆ ಜಿಪಂ ಮಾಜಿ ಸದಸ್ಯ ಅರಮಣಮಾಡ ರಂಜನ್ ಚಂಗಪ್ಪ ಒತ್ತಾಯಿಸಿದ್ದಾರೆ.
ಎರಡು ಕ್ವಿಂಟಾಲ್​ ಗಾಂಜಾ ವಶ, ರಾಜಕೀಯ ನಾಯಕನ ಬಂಧನ

ಸ್ನೇಹಿತನ ಅಜ್ಜಿಯ ಅಂತ್ಯಸಂಸ್ಕಾರಕ್ಕೆ ಹೊರಟಿದ್ದ ನಾಲ್ವರಲ್ಲಿ ಇಬ್ಬರು ದಾರಿಯಲ್ಲೇ ಹೆಣವಾದರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − four =
Remember me
