ಬೆಂಗಳೂರು:ತಜ್ಞರ ಮಾತಿಗೆ ನಿರ್ಲಕ್ಷ್ಯ ಹಾಗೂ ಸರ್ಕಾರ ಕೋವಿಡ್ ಮಾರ್ಗಸೂಚಿ ಉಲ್ಲಂಘನೆ ಪರಿಣಾಮ ರಾಜ್ಯದಲ್ಲಿ ಕರೊನಾ ಸೋಂಕು ಪ್ರಕರಣಗಳ ಸಂಖ್ಯೆ ದಿನೇ ದಿನೇ ಏರುತ್ತಿದ್ದು, ಕಳೆದ 24 ಗಂಟೆಯಲ್ಲಿ 6,976 ಹೊಸ ಪ್ರಕರಣಗಳು ವರದಿಯಾಗಿದ್ದು, ಬೆಂಗಳೂರಿನಲ್ಲಿ 25 ಮಂದಿ ಸೇರಿದಂತೆ 35 ಮಂದಿ ಸಾವನ್ನಪ್ಪಿದ್ದಾರೆ.
ಇದರೊಂದಿಗೆ ದಿನದ ಸೋಂಕು ಪ್ರಮಾಣ ಶೇ. 5.56ಕ್ಕೆ ಹಾಗೂ ಮರಣ ಪ್ರಮಾಣದ ದರ ಶೇ. 0.50ಗೆ ಏರಿಕೆಯಾಗಿದೆ. ಇದರೊಂದಿಗೆ ಈವರೆಗಿನ ಸೋಂಕಿತರ ಸಂಖ್ಯೆ 10.33 ಲಕ್ಷ ದಾಟಿದ್ದು, ಮೃತರ ಸಂಖ್ಯೆ 12,731 ತಲುಪಿದೆ. ಬುಧವಾರ 2,794 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಗುಣಮುಖರ ಸಂಖ್ಯೆ 9.71 ಮೀರಿದೆ.
ಇದನ್ನೂ ಓದಿ:ಕರೊನಾ ಲಸಿಕೆಯ ಸುತ್ತ… ವಾಟ್ಸ್​​ಆ್ಯಪ್​ನಲ್ಲಿ ಬಂದಿವೆ ಹೊಸ ಸ್ಟಿಕ್ಕರ್ಸ್ !
ರಾಜ್ಯದಲ್ಲಿ ಸೋಂಕು ಹೆಚ್ಚಳದಿಂದಾಗಿ ಸಕ್ರಿಯ ಪ್ರಕರಣಗಳ ಸಂಖ್ಯೆ 49,254ಕ್ಕೆ ಹೆಚ್ಚಿದ್ದು, ಈ ಪೈಕಿ 353 ಮಂದಿ ಗಂಭೀರ ಸಮಸ್ಯೆಯಿಂದಾಗಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದವರು ಆಸ್ಪತ್ರೆಗಳು, ಕೋವಿಡ್ ಆರೈಕೆ ಕೇಂದ್ರ ಹಾಗೂ ಲಕ್ಷಣ ರಹಿತ ಸೋಂಕಿತರ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಹೆಚ್ಚು ಸೋಂಕು ವರದಿಯಾದ ಜಿಲ್ಲೆಗಳು ಬೆಂಗಳೂರು ನಗರ 4,991, ಮೈಸೂರು 243, ಬೀದರ 214, ಕಲಬುರಗಿ 205, ತುಮಕೂರು 204, ದಕ್ಷಿಣ ಕನ್ನಡ 112, ಬೆಳಗಾವಿ 101 ಹೊಸ ಸೋಂಕು ಪ್ರಕರಣಗಳು ವರದಿಯಾಗಿವೆ. 1.25 ಲಕ್ಷ ಪರೀಕ್ಷೆ ರಾಜ್ಯದಲ್ಲಿ ಬುಧವಾರ ಒಂದೇ ದಿನ 8,433 ರ‌್ಯಾಪಿಡ್ ಅಂಟಿಜೆನ್ ಪರೀಕ್ಷೆ ಹಾಗೂ 1,16,57 ಆರ್‌ಟಿಪಿಸಿಆರ್ ಪರೀಕ್ಷೆ ಸೇರಿದಂತೆ 1.25 ಲಕ್ಷ ಮಾದರಿಗಳ ಪರೀಕ್ಷೆ ನಡೆಸಲಾಗಿದೆ. ಈವರೆಗೂ 2.22 ಕೋಟಿ ಮಾದರಿಗಳ ಕೋವಿಡ್ ಪರೀಕ್ಷೆ ನಡೆಸಲಾಗಿದೆ.
ಏಪ್ರಿಲ್ 11 ರಿಂದ ಕೆಲಸದ ಸ್ಥಳಗಳಲ್ಲೇ ಕರೊನಾ ಲಸಿಕೆ ಸೌಲಭ್ಯ

ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ ಮೇಲೆ ಮಾರಕ ದಾಳಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + twelve =
Remember me
