ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರು ಸಾರ್ವಜನಿಕರಿಗೆ ತಮ್ಮ ಊರುಗಳಿಗೆ ತೆರಳಲು ಅನುಮತಿ ನೀಡುತ್ತಿದ್ದಂತೆ ಪ್ರಮುಖ ರಸ್ತೆಗಳಲ್ಲಿ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.
ಮಂಗಳವಾರ ರಾತ್ರಿ ವೇಳೆಗೆ ಬೆಂಗಳೂರಿನಿಂದ ತಮ್ಮ ಊರುಗಳಿಗೆ ಹಾಗೂ ಬೇರೆ ಕಡೆಗಳಿಂದ ಬೆಂಗಳೂರಿಗೆ ಬರುವವರಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಸಿಎಂ ಹೇಳಿಕೆ ನೀಡುತ್ತಿದ್ದಂತೆ ನಾಗರಿಕರು ತಮ್ಮ ಊರುಗಳತ್ತ ಹೊರಟರು. ಇದರಿಂದ ತುಮಕೂರು, ಮೈಸೂರು, ಮಾಗಡಿ, ಕನಕಪುರ, ಬಳ್ಳಾರಿ, ಕೋಲಾರ, ಹೊಸೂರು ರಸ್ತೆಗಳತ್ತ ಜನರು ಧಾವಿಸಿದರು. ಇದರಿಂದ ಸಂಚಾರ ದಟ್ಟಣೆ ಅಧಿಕವಾಯಿತು.
ಕೆಎಸ್​ಆರ್​ಟಿಸಿ ಬಸ್​ಗಳು ಇಲ್ಲದ ಹಿನ್ನೆಲೆಯಲ್ಲಿ ಪ್ರಯಾಣಿಕರು ಖಾಸಗಿ ವಾಹನ ಬೈಕ್​ಗಳು ಹಾಗೂ ಕಾರುಗಳಲ್ಲಿ ತೆರಳುತ್ತಿದ್ದಾರೆ. ತುಮಕೂರು, ನೆಲಮಂಗಲ ಟೋಲ್​ ಬಳಿ ವಾಹನಗಳು ಸಾಲುಗಟ್ಟಿ ನಿಂತಿವೆ. ತುಮಕೂರು ರಸ್ತೆಯ 8ನೇ ಮೈಲಿಗಲ್ಲು ಬಳಿ ಇರುವ ಬಸ್​ ನಿಲ್ದಾಣದಲ್ಲಿ ನೂರಾರು ಮಂದಿ ಬಸ್​ಗಾಗಿ ಕಾಯುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಬೆಂಗಳೂರು ನಗರ ಲಾಕ್​ಡೌನ್​ ಮಾಡುವ ಘೋಷಣೆ ಹೊರ ಬೀಳುತ್ತಿದ್ದಂತೆ ಜನರು ಮನೆ ಸೇರಿಕೊಂಡಿದ್ದರು. ರಸ್ತೆಯಲ್ಲಿ ಸಂಚರಿಸುವವರನ್ನು ಪೊಲೀಸರು ನಿಯಂತ್ರಿಸಿದ್ದರು. ಸಿಎಂ ಘೋಷಣೆ ಹೊರಬೀಳುತ್ತಲೇ ಜನರ ಊರಿನತ್ತ ಹೊರಟಿದ್ದಾರೆ. (ದಿಗ್ವಿಜಯ ನ್ಯೂಸ್​)
ಪಾತ್ರೆ ತೊಳೆದ ಕತ್ರೀನಾ ಮತ್ತು ಕಾರ್ತಿಕ್: ಹೌಸ್ ಅರೆಸ್ಟ್ ಆಗಿರುವ ತಾರೆಗಳ ಸದ್ಯದ ಸ್ಥಿತಿ ಇದು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × three =
Remember me
