ಬೆಂಗಳೂರು:ಕರೊನಾ ವೈರಸ್ ತಗಲಿರುವ ಶಂಕೆ ಹಿನ್ನೆಲೆಯಲ್ಲಿ ಚೀನಾ ಪ್ರವಾಸ ಮುಗಿಸಿಕೊಂಡು ಬಂದಿರುವ ಇಬ್ಬರ ರಕ್ತದ ಮಾದರಿಯನ್ನು ಪುಣೆಯ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿ (ಎನ್​ಐವಿ) ಸಂಸ್ಥೆಗೆ ಕಳುಹಿಸಿದ್ದು, ವರದಿಗೆ ಕಾಯಲಾಗುತ್ತಿದೆ. ಜ. 18ರಂದು ವಾಪಸಾಗಿದ್ದ ಈ ಇಬ್ಬರ ಆರೋಗ್ಯದಲ್ಲೂ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಭಾನುವಾರ ರಾತ್ರಿ ನಗರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ. ಚೀನಾದಿಂದ ರಾಜ್ಯಕ್ಕೆ ಆಗಮಿಸುತ್ತಿರುವ ಪ್ರಯಾಣಿಕರ ಮೇಲೆ ನಿಗಾ ವಹಿಸಲಾಗಿದೆ. ಇದಕ್ಕಾಗಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೇಂದ್ರ ಆರೋಗ್ಯ ಸಚಿವಾಲಯ ವತಿಯಿಂದ ಸಹಾಯ ಕೇಂದ್ರ ಆರಂಭಿಸಿದ್ದು, ಕಳೆದೊಂದು ವಾರದಲ್ಲಿ ಚೀನಾದಿಂದ ಬಂದ 2,572 ಪ್ರಯಾಣಿಕರನ್ನು ಥರ್ಮಲ್  ಸ್ಕ್ಯಾನರ್​ಗೆ ಒಳಪಡಿಸಲಾಗಿದೆ. ವಿದೇಶಿ ಪ್ರವಾಸಿಗರು ಹಾಗೂ ವಿದೇಶಗಳಿಗೆ ಹೋಗಿ ಬರುವ ಭಾರತೀಯರನ್ನು ಆರೋಗ್ಯ ಇಲಾಖೆ ಅಧಿಕಾರಿಗಳೆ ತಪಾಸಣೆಗೆ ಒಳಪಡಿಸುತ್ತಿದ್ದಾರೆ.
ಇತ್ತೀಚೆಗೆ ಚೀನಾದಿಂದ ಆಗಮಿಸಿದ್ದ ವ್ಯಕ್ತಿಯೊಬ್ಬರಿಗೆ ಕೆಮ್ಮು, ನೆಗಡಿ ಕಾಣಿಸಿಕೊಂದ್ದರಿಂದ ಆಸ್ಪತ್ರೆಗೆ ದಾಖಲಿಸಿ ರಕ್ತ ಪರೀಕ್ಷೆ ನಡೆಸಲಾಗಿತ್ತು. ವರದಿಯಲ್ಲಿ ಸೋಂಕು ಇಲ್ಲದಿರುವುದು ದೃಢಪಟ್ಟಿದ್ದು ಆತಂಕ ದೂರಾಗಿದೆ. ನಾಲ್ವರು ಚೀನಾ ನಾಗರಿಕರು ರಾಜ್ಯಕ್ಕೆ ಆಗಮಿಸಿದ್ದು, ಚೀನಾ ಪ್ರವಾಸಕ್ಕೆ ತೆರಳಿದ್ದ ಇಬ್ಬರು ಭಾರತೀಯರು ರಾಜ್ಯಕ್ಕೆ ವಾಪಸ್ಸಾಗಿದ್ದಾರೆ. ಈ ಎಲ್ಲ ಒಂಬತ್ತು ಮಂದಿಯೊಂದಿಗೆ ಆರೋಗ್ಯ ಇಲಾಖೆಯು ನಿರಂತರ ಸಂಪರ್ಕದಲ್ಲಿದೆ.
ರೋಗ ಲಕ್ಷಣ:ವಿಪರೀತ ಜ್ವರ, ಎದೆ ನೋವಿ ನಿಂದ ಕೂಡಿದ ಉಸಿರಾಟದ ತೊಂದರೆ, ಶೀತ, ನೆಗಡಿ, ಕೆಮ್ಮು, ಗಂಟಲು ಕೆರೆತ, ನ್ಯುಮೋನಿಯ.
ಸೋಂಕಿತರ ಚಿಕಿತ್ಸೆಗಾಗಿ ಬೆಂಗಳೂರಿನ ರಾಜೀವ್ ಗಾಂಧಿ ಎದೆ ರೋಗಗಳ ಆಸ್ಪತ್ರೆ ಹಾಗೂ ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಗಳಲ್ಲಿ ಪ್ರತ್ಯೇಕ ಹಾಸಿಗೆಗಳ ವ್ಯವಸ್ಥೆ ಕಲ್ಪಿಸಲಾಗಿದೆ.
ಕರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಕುರಿತು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ಎಲ್ಲ ರಾಜ್ಯಗಳ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ಹಾಗೂ ವೈದ್ಯಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಪರೆನ್ಸ್ ನಡೆಸಿದೆ.
| ಡಾ. ಬಿ.ಜಿ. ಪ್ರಕಾಶ್ ಕುಮಾರ್ಸಹ ನಿರ್ದೇಶಕರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + seventeen =
Remember me
