ಬೆಂಗಳೂರು:ಕಾಂಗ್ರೆಸ್​​ ಪಕ್ಷ ಚುನಾವಣಾ ಅವಧಿಯಲ್ಲಿ ಮತದಾರರಿಗೆ ನೀಡಿರುವ ಗ್ಯಾರಂಟಿ ಭರವಸೆಯಲ್ಲಿ , ಶಕ್ತಿ ಯೋಜನೆ‌ ಕೂಡಾ ಒಂದಾಗಿದೆ. ಈ ಉಚಿತ ಬಸ್ ವ್ಯವಸ್ಥೆಯು ಹೆಣ್ಮಕ್ಕಳ ಪೋಷಕರಲ್ಲಿ ಕೊಂಚ ತಲೆನೋವು ತಂದಿದೆ.
ಬಸ್ಸಿನಲ್ಲಿ ಸೀಟಿಗಾಗಿ ನಾರಿಯರ ಗಲಾಟೆ ಒಂದೆಡೆಯಾದರೆ ಇನ್ನೊಂದೆಡೆ ಚಿಕ್ಕಪುಟ್ಟ ವಿಷಯಕ್ಕೆಲ್ಲ ಬೇಜಾರ್ ಮಾಡಿಕೊಂಡು ಮಕ್ಕಳು ಬಸ್ ಏರುತ್ತಿದ್ದಾರೆ. ಇಂತಹದ್ದೆ ಒಂದು ಪ್ರಕರಣ ಇದೀಗ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ.
ಬೆಂಗಳೂರಿನಲ್ಲಿ ಸಹೋದರಿಯರಿಬ್ಬರು ಅಪ್ಪ ಚಾಕಲೇಟ್​ಗೆ ದುಡ್ಡು ಕೊಡುತ್ತಿಲ್ಲವೆಂದು ಉಚಿತ ಬಸ್ ಹತ್ತಿಕೊಂಡು ಧರ್ಮಸ್ಥಳಕ್ಕೆ ಹೋಗಿದ್ದಾರೆ. ಇತ್ತ ಪೋಷಕರು ಹೆಣ್ಣು ಮಕ್ಕಳು ಕಾಣೆಯಾಗಿದ್ದಾರೆ ಎಂದು ಕೋಣನಕುಂಟೆ ಠಾಣೆಗೆ ಪೋಷಕರು ದೂರು ನೀಡಿದ್ದಾರೆ. ಎರಡು ದಿನದ ಬಳಿಕ ಮಕ್ಕಳು ಧರ್ಮಸ್ಥಳದಲ್ಲಿ ಸಿಕ್ಕಿದ್ದಾರೆ.
ಇದನ್ನೂ ಓದಿ:ಸಾಲಿಡಾರಿಟಿ ಕರ್ನಾಟಕದ ರಾಜ್ಯಾಧ್ಯಕ್ಷರಾಗಿ ಲಬೀದ್ ಶಾಫಿ ಪುನರಾಯ್ಕೆ
ಅಪ್ಪನಿಗೆ ಚಾಕ್ಲಟ್ ಕೂಡಿಸೋಕೆ ಹೇಳಿದ್ವಿ. ಅವರು ಕೊಡಿಸಲಿಲ್ಲ, ಜೊತೆಗೆ ನಮ್ಮ ಮೇಲೆ ಕೂಗಾಡಿದ್ರು. ಉಚಿತ ಬಸ್ ಹತ್ತಿದೇವು, ಹೇಗೂ ಟಿಕೆಟ್‌ಗೆ ಹಣ ಕೊಡಬೇಕಿಲ್ಲ ಅಲ್ವಾ ಧರ್ಮಸ್ಥಳಕ್ಕೆ ಬಂದು ಇಳಿದಿದ್ದೇವೆ ಎಂದು ಮಕ್ಕಳು ಹೇಳಿದ್ದಾರೆ.
ಒಬ್ಬಳು 10ನೇ ತರಗತಿ ಇನ್ನೊಬ್ಬಳು 9 ನೇ ತರಗತಿ ಓದುತ್ತಿದ್ದು, ಇಬ್ಬರು ಸಹೋದರಿಯರಾಗಿದ್ದಾರೆ. ಶಕ್ತಿ ಯೋಜನೆಯಿಂದ ಮಕ್ಕಳು ಈ ರೀತಿ ಮಾಡಿದ್ದು ಪೋಷಕರಿಗೆ ಬೇಸರ ತಂದಿದೆ.
ಸಾಲಿಡಾರಿಟಿ ಕರ್ನಾಟಕದ ರಾಜ್ಯಾಧ್ಯಕ್ಷರಾಗಿ ಲಬೀದ್ ಶಾಫಿ ಪುನರಾಯ್ಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + fourteen =
Remember me
