ವಿಜಯನಗರ:ಪ್ರಧಾನಿ ಸೇರಿ ಕೆಲವು ಜನಪ್ರತಿನಿಧಿಗಳಿಗೆ ಇತ್ತೀಚೆಗೆ ಕೊಲೆ ಬೆದರಿಕೆಗಳು ಬಂದಿದ್ದು, ಇದೀಗ 61ಕ್ಕೂ ಅಧಿಕ ಸಾಹಿತಿಗಳಿಗೆ ಜೀವ ಬೆದರಿಕೆಯ ಇರುವ ಪತ್ರವೊಂದು ರವಾನೆಯಾಗಿದೆ. ನಿಮ್ಮ ಮನೆಯಲ್ಲಿ ಶವಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಳ್ಳಿ ಎಂಬುದಾಗಿ ಕೊಲೆ ಬೆದರಿಕೆ ಹಾಕಲಾಗಿದೆ.
ಹೀಗೆ ಇತ್ತೀಚೆಗೆ ಸುದ್ದಿಯಲ್ಲಿರುವ ಕುಂ.ವೀರಭದ್ರಪ್ಪ ಮತ್ತು ಇನ್ನು 61ಕ್ಕೂ ಅಧಿಕ ಸಾಹಿತಿಗಳಿಗೆ ಕೊಲೆ ಬೆದರಿಕೆ ಒಡ್ಡಲಾಗಿದೆ. ಇವರೆಲ್ಲ ಈ ಹಿಂದೆ ಮುಖ್ಯಮಂತ್ರಿಯವರಿಗೆ ಬರೆದ ಪತ್ರವೊಂದಕ್ಕೆ ಪ್ರತಿಯಾಗಿ ಕುಂ.ವೀರಭದ್ರಪ್ಪ ಮತ್ತು ಇತರ 61ಕ್ಕೂ ಅಧಿಕ ಸಾಹಿತಿಗಳನ್ನು ಉಲ್ಲೇಖಿಸಿ ಜೀವ ಬೆದರಿಕೆ ಹಾಕಲಾಗಿದೆ.ಈ ಕೊಲೆ ಬೆದರಿಕೆಗೆ ಕಾರಣ ಒಂದೆರಡಲ್ಲ. ಹಿಜಾಬ್ ಪರವಾಗಿ, ಮುಸ್ಲಿಂ ಪರವಾಗಿ ಹಾಗೂ ಭಗವದ್ಗೀತೆ ವಿರುದ್ಧವಾಗಿ ನೀವು ಮತ್ತು 61 ಎಡಬಿಡಂಗಿ ಸಾಹಿತಿಗಳು ಮುಖ್ಯಮಂತ್ರಿಯವರಿಗೆ ಪತ್ರ ಬರೆದ ಹಿನ್ನೆಲೆಯಲ್ಲಿ ಈ ಪತ್ರ ಬರೆಯಲಾಗಿದೆ ಎಂದು ತಿಳಿಸಲಾಗಿದೆ.
ಸಾಹಿತಿ ಕುಂ.ವೀರಭದ್ರಪ್ಪ, ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಎಚ್.ಡಿ. ಕುಮಾರಸ್ವಾಮಿ ಮತ್ತು 61ಕ್ಕೂ ಅಧಿಕ ಎಡಬಿಡಂಗಿ ಸಾಹಿತಿಗಳೇ.. ನಿಮ್ಮ ನಿಮ್ಮ ಮನೆಯಲ್ಲಿ ಶವಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಳ್ಳಲು ಹೇಳಿ ಎಂಬುದಾಗಿ ಸಹಿಷ್ಣು ಹಿಂದು ಎನ್ನುವ ಹೆಸರಿನಲ್ಲಿ 2 ಪುಟಗಳ ಪತ್ರ ಬರೆಯಲಾಗಿದೆ.
ಕುಂ.ವೀರಭದ್ರಪ್ಪ ಅವರಿಗೆ ಭದ್ರಾವತಿಯಿಂದ ಈ ಪತ್ರ ಬಂದಿದ್ದು, ಅವರು ಇತ್ತೀಚೆಗೆ ನಾನು ಹಿಂದು ಅಲ್ಲ, ಲಿಂಗಾಯತ ಮಾತ್ರ ಎಂದು ನೀಡಿರುವ ಹೇಳಿಕೆಯನ್ನು ವಿರೋಧಿಸಿ ಈ ಜೀವಬೆದರಿಕೆ ಪತ್ರ ಬರೆಯಲಾಗಿದೆ. ಸೋಮವಾರ ಈಕುರಿತು ಅವರು ಕೊಟ್ಟೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲು ನಿರ್ಧರಿಸಿದ್ದಾರೆ.

ಅಡವಿಟ್ಟ ಚಿನ್ನ ಕೊಡಲ್ಲ ಎಂದ ಅಧಿಕಾರಿ; ಬ್ಯಾಂಕ್​ ಎದುರೇ ವಿಷ ಕುಡಿಯಲು ಮುಂದಾದ ರೈತ

ಭೀಕರ ಅಪಘಾತ; ಮಗುಚಿ ಬಿದ್ದ ಲಾರಿ, ಒಬ್ಬ ಸ್ಥಳದಲ್ಲೇ ಸಾವು, ಇನ್ನಿಬ್ಬರಿಗೆ ಗಂಭೀರ ಗಾಯ..

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:nineteen − eight =
Remember me
