ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲವು ತಿಂಗಳುಗಳಿಮದ ನೈತಿಕ ಪೊಲೀಸ್​​ಗಿರಿ ಪ್ರಕರಣಗಳು ಹೆಚ್ಚುತ್ತಿದ್ದು, ಅಂಥ ಘಟನೆಗಳ ಬಗ್ಗೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ ನೀಡಿದ್ದರು ಸಹ ಯಾವುದೇ ಪ್ರಯೋಜನವಾಗದಂತೆ ಕಾಣುತ್ತಿದೆ.
ಇದೀಗ ಎರಡು ಪ್ರತ್ಯೇಕ ಘಟನೆಗಳಲ್ಲಿ ಮಾಧ್ಯಮ ವರದಿಗಾರ ಹಾಗೂ ಪೊಲೀಸ್​ ಸಿಬ್ಬಂದಿ ಮೇಲೆ ನೈತಿಕ ಪೊಲೀಸ್​ ಗಿರಿ ನಡೆಸಿ ಹಲ್ಲೆಗೆ ಯತ್ನಿಸಿರುವ ಘಟನೆ ನಗರದ ಕಾವೂರು ಹಾಗೂ ಬಿ.ಸಿ. ರೋಡ್​ ಜಂಕ್ಷನ್​ನಲ್ಲಿ ನಡೆದಿದೆ.
ಖಾಸಗಿ ಸುದ್ದಿಸಂಸ್ಥೆಯೊಂದರಲ್ಲಿ ವರದಿಗಾರರಾಗಿ ಕೆಲಸ ಮಾಡುತ್ತಿರುವ ಅಭಿಜಿತ್​ ಎಂಬುವವರು ತನ್ನ ಸ್ನೇಹಿತೆಯ ಜೊತೆ ಊಟಕ್ಕೆ ತೆರಳಿ ವಾಪಸ್​ ಆಗುತ್ತಿದ್ದ ವೇಳೆ ಕೋಟೇಕಾರು ನಿವಾಸಿ ಚೇತನ್ (37) ಹಾಗೂ ಯೆಯ್ಯಾಡಿ ನಿವಾಸಿ ನವೀನ್(43) ಇಬ್ಬರನ್ನು ತಡೆದು ನೀವನು ಬ್ಯಾರಿಯಾ ಎಂದು ಪ್ರಶ್ನಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.
ಹಿಂದೂ ಯುವತಿ ಜೊತೆ ನಿನಗೇನು ಕೆಲಸ ಎಂದು ನಿಂದಿಸಿ ಆತನನ್ನು ಮುಸ್ಲಿಂ ಎಂದು ತಪ್ಪಾಗಿ ಅರ್ಥೈಸಿಕೊಂಡು ಇಬ್ಬರು ಆರೋಪಿಗಳು ಅಭಿಜಿತ್​ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಘಟನೆ ಸಂಬಂಧ ಅಭಿಜಿತ್​ ಕಾವೂರು ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳಿಬ್ಬರನ್ನು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ:ನಂದಿನಿ ಹಾಲಿನ ದರ ಹೆಚ್ಚಳ ಬೆನ್ನಲ್ಲೇ ತಿಂಡಿ ಪ್ರಿಯರಿಗೆ ಶಾಕ್​ ನೀಡಿದ ಹೋಟೆಲ್​ ಮಾಲೀಕರು
ಮತ್ತೊಂದು ಘಟನೆಯಲ್ಲಿ ತಮ್ಮ ಪತ್ನಿ ಹಾಗೂ ಅತ್ತಿಗೆ ಜೊತೆ ನಡೆದುಕೊಂಡು ಹೋಗುತ್ತಿದ್ದ ಪೊಲೀಸ್​ ಅಧಿಕಾರಿ ಜೊತೆ ಕುಡಿದ ಮತ್ತಿನಲ್ಲಿ ಇಬ್ಬರು ನೈತಿಕ ಪೊಲೀಸ್​ ಗಿರಿ ಎಸಗಿರುವ ಘಟನೆ ಬಂಟ್ವಾಳದಲ್ಲಿ ನಡೆದಿದೆ.
ಪೊಲೀಸ್​ ಅಧಿಕಾರಿ ಕುಮಾರ್​ ರೆಸ್ಟೋರೆಂಟ್ ನಲ್ಲಿ ಊಟ ಮುಗಿಸಿ ತನ್ನ ಪತ್ನಿ ಮತ್ತು ಆಕೆಯ ಸಹೋದರಿಯನ್ನು ತನ್ನ ಕ್ವಾರ್ಟರ್ಸ್‌ಗೆ ಬಿಡಲು ಹೋಗುತ್ತಿದ್ದಾಗ ಆರೋಪಿಗಳು ಅವರನ್ನು ಹಿಂಬಾಲಿಸಿದ್ದಾರೆ. ದಾರಿಯಲ್ಲಿ ಅಡ್ಡಗಟ್ಟಿ, ಮಹಿಳೆಯರ ಸಹವಾಸದಲ್ಲಿ ಏಕೆ ಇದ್ದೀರಿ ಎಂದು ಇಬ್ಬರೂ ಪ್ರಶ್ನಿಸಿದರು. ಆರೋಪಿಗಳು ಕುಮಾರ್ ಗೆ ನಿಂದಿಸಿ ಕಿರುಕುಳ ನೀಡಿದ್ದಾರೆ.
ಇದಲ್ಲದೆ ಆರೋಪಿಗಳಿಬ್ಬರು ಪೊಲೀಸ್​ ಅಧಿಕಾರಿ ಕುಮಾರ್​ ಹಾಗೂ ಅವರ ಪತ್ನಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ. ಪ್ರಕರಣ ಸಂಬಂಧ ಬಂಟ್ವಾಳ ಪೊಲೀಸರು ಮನೀಶ್ ಮತ್ತು ಮಂಜುನಾಥ್ ಎಂಬುವವರನ್ನು ವಶಕ್ಕೆ ಪಡೆದು ಆರೋಪಿಗಳ ವಿರುದ್ಧ ಭಾರತ ದಂಡ ಸಂಹಿತೆ(IPC Section) 341, 504, 354, 354(ಎ) ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Cop, family become victims of 'moral policing'!DK police have arrested Manish & Manjunath for harrassing and attempting to assault a cop,his wife at B C Road. Cop was mistaken for a Muslim. Accused also misbehaved with cop's wife@XpressBengaluru@ramupatil_TNIE@vinndz_TNIEpic.twitter.com/bvt9Riev0a
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × five =
Remember me
