ಬೆಳಗಾವಿ:ವಿಭಜನಾ (ವಾಟ್ನಿ) ಪತ್ರ ನೋಂದಣಿ ಮಾಡಿಕೊಡಲು ಲಂಚ ಕೇಳಿದ ಸವದತ್ತಿ ತಾಲೂಕಿನ ಮುರಗೋಡ ಸಬ್ ರಿಜಿಸ್ಟ್ರಾರ್ ಮತ್ತು ಬಾಂಡ್ ರೈಟರ್ ಬುಧವಾರ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬಲೆಗೆ ಬಿದ್ದಿದ್ದಾರೆ. ಸಬ್ ರಿಜಿಸ್ಟ್ರಾರ್ ಸಂತೋಷ ಕಪಲಿ, ಬಾಂಡ್ ರೈಟರ್ ಶಿವಯೋಗಿ ಶಂಕರಯ್ಯ ಮಲ್ಲಯ್ಯನವರ ಎಸಿಬಿ ಬಲೆಗೆ ಬಿದ್ದ ಆರೋಪಿಗಳು.
ವಾಟ್ನಿ ಪತ್ರ ನೋಂದಣಿ ಮಾಡಿಕೊಡಲು ಸಬ್ ರಿಜಿಸ್ಟ್ರಾರ್ ಸಂತೋಷ ಕಪಲಿ ಅವರು ಬಾಂಡ್ ರೈಟರ್ ಶಿವಯೋಗಿ ಶಂಕರಯ್ಯ ಮಲ್ಲಯ್ಯನವರ ಮೂಲಕ ನೋಂದಣಿ ಶುಲ್ಕ, ಇತರೆ ವೆಚ್ಚ ಎಂದು ಹೇಳಿ 10 ಸಾವಿರ ರೂ. ನೀಡುವಂತೆ ಬೇಡಿಕೆ ಇಟ್ಟಿದ್ದರು. ಅದರಲ್ಲಿ ಮುಂಗಡವಾಗಿ 6 ಸಾವಿರ ರೂ. ಫೋನ್​ ಪೇ ಮೂಲಕ ಪಾವತಿಸಿದ್ದರು. ಅದರಲ್ಲಿ 2870 ರೂ. ರಶೀದಿ ಮಾತ್ರ ನೀಡಿದ್ದರು. ಬಳಿಕ ವಾಟ್ನಿ ಪತ್ರ ಕೇಳಿದಾಗ ಬಾಕಿ ಉಳಿದಿರುವ 4 ಸಾವಿರ ರೂ. ನೀಡಿ ತೆಗೆದುಕೊಂಡು ಹೋಗುವಂತೆ ಸೂಚಿಸಿದ್ದರು. ಅಲ್ಲದೆ, ವಾಟ್ನಿ ಪತ್ರ ಕೊಡಲು ನಿತ್ಯ ಅಲೆದಾಡಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಸವದತ್ತಿ ತಾಲೂಕಿನ ಕೊಡ್ಲಿವಾಡ ಗ್ರಾಮದ ಶಿವಪ್ಪ ವರಗಣ್ಣವರ ಎಂಬುವರು ಎಸಿಬಿಗೆ ದೂರು ನೀಡಿದ್ದರು.
ಇದನ್ನೂ ಓದಿ:ಇನ್ನೊಬ್ಬ ಅಧಿಕಾರಿಯ ಲಂಚದ ಹಣ ಮನೇಲಿಟ್ಟುಕೊಂಡು ಸಿಕ್ಕಿಬಿದ್ದ ಅಧಿಕಾರಿ!
ದೂರಿನ ಆಧಾರದ ಮೇಲೆ ಬುಧವಾರ ದಾಳಿ ನಡಿಸಿದ ಎಸಿಬಿ ಅಧಿಕಾರಿಗಳು, ಲಂಚ ಪಡೆಯುವಾಗಿ ರೆಡ್ ಹ್ಯಾಂಡ್ ಆಗಿ ಆರೋಪಿತರನ್ನು ಹಿಡಿದು ಬಂಧಿಸಿದ್ದಾರೆ. ಡಿವೈಎಸ್‌ಪಿ ಜಿ.ಎಂ. ಕರುಣಾಕರಶೆಟ್ಟಿ, ಪೊಲೀಸ್ ನಿರೀಕ್ಷಕ ಎ.ಎಸ್. ಗುದಿಗೊಪ್ಪ ನೇತೃತ್ವದ ತಂಡ ದಾಳಿ ನಡೆಸಿದೆ ಎಂದು ಎಸಿಬಿ ಎಸ್‌ಪಿ ಬಿ.ಎಸ್.ನೇಮಕಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಾಲಾ ಛಾವಣಿ ಪದರ ಕುಸಿತ, ಐವರು ವಿದ್ಯಾರ್ಥಿಗಳಿಗೆ ಗಾಯ…

15 ಸಾವಿರ ಶಿಕ್ಷಕರ ನೇಮಕಾತಿಗೆ ಮೇನಲ್ಲಿ ಸ್ಪರ್ಧಾತ್ಮಕ ಪರೀಕ್ಷೆ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × four =
Remember me
