ಬಳ್ಳಾರಿ:ಸಾಲದ ಬಾಧೆ ರೈತರನ್ನಷ್ಟೇ ಅಲ್ಲ, ಉದ್ಯಮಿಗಳನ್ನೂ ಕಾಡುತ್ತಿದೆ. ಅವರು ಕೂಡ ಸಾಲಕ್ಕೆ ಹೆದರಿ ಪ್ರಾಣ ಕಳೆದುಕೊಳ್ಳುತ್ತಿರುವ ಪ್ರಕರಣಗಳು ನಡೆಯುತ್ತಿದ್ದು, ಅಂಥ ಸಾವಿನ ಪಟ್ಟಿಗೆ ಇದೀಗ ಮತ್ತೊಂದು ಸೇರ್ಪಡೆ ಆಗಿದೆ. ಸಾಲದ ಕಂತು ಕಟ್ಟಲಾಗದೆ ಎರಡು ಲಾರಿ ಮಾಲೀಕರೊಬ್ಬರು ನೇಣಿಗೆ ಕೊರಳೊಡ್ಡಿದ್ದಾರೆ.
ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ಅಂಕಮನಾಳ ಬಳಿ ಈ ಆತ್ಮಹತ್ಯೆ ನಡೆದಿದೆ. ತುಂಬರಗುದ್ದಿ ಗ್ರಾಮದ ಕರಿಯಪ್ಪ ಎಂಬವರು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಎರಡು ಲಾರಿ ಹೊಂದಿದ್ದು, ಆ ಮೂಲಕ ವಹಿವಾಟು ನಡೆಸುತ್ತಿದ್ದರು.
ಎರಡು ಲಾರಿಗಳನ್ನು ಹೊಂದಿದ್ದರು ಕೂಡ ತಿಂಗಳ ಅಂತ್ಯದಲ್ಲಿ ಸಾಲದ ಮಾಸಿಕ ಕಂತು ಕಟ್ಟಲು ಕರಿಯಪ್ಪ ಪರದಾಟ ನಡೆಸುವಂತೆ ಆಗುತ್ತಿತ್ತು. ಇದರಿಂದ ರೋಸಿ ಹೋಗಿದ್ದ ಕರಿಯಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಚೊರನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.
‘ಗರ್ಲ್​ ನಂ. 166’ ಗ್ರೇಟ್ ಎಸ್ಕೇಪ್​: 7ನೇ ವಯಸ್ಸಲ್ಲಿ ನಾಪತ್ತೆ, ಹದಿನಾರನೇ ವಯಸ್ಸಲ್ಲಿ ಮನೆಗೆ ಬಂದ್ಲು!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − two =
Remember me
