ರಾಮನಗರ:ಬೆಂಗಳೂರಿನ ಪಾದರಾಯನಪುರದಲ್ಲಿ ಗಲಭೆ ಮಾಡಿದ್ದ ಸುಮಾರು 121 ಮಂದಿಯನ್ನು ಬಂಧಿಸಿ ರಾಮನಗರ ಜೈಲಿಗೆ ಶಿಫ್ಟ್​ ಮಾಡಲಾಗಿತ್ತು.
ಆದರೆ ಈಗ ಆತಂಕಕಾರಿ ವಿಚಾರವೊಂದು ಹೊರಬಿದ್ದಿದೆ. ಅವರಲ್ಲಿ ಇಬ್ಬರಿಗೆ ಕರೊನಾ ಸೋಂಕು ಇರುವುದು ದೃಢಪಟ್ಟಿದೆ. ಇಷ್ಟು ದಿನ ಗ್ರೀನ್​ ಝೋನ್​ನಲ್ಲಿದ್ದ ರಾಮನಗರಕ್ಕೆ ಈಗ ಕರೊನಾ ಕಂಟಕ ಎದುರಾಗಿದೆ.
ಪಾದರಾಯನಪುರದಲ್ಲಿ ಕರೊನಾ ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನು ಗುರುತಿಸಿ, ಅವರನ್ನು ಕ್ವಾರಂಟೈನ್​ಗೆ ಒಳಪಡಿಸಲು ಹೋದಾಗ ಅಲ್ಲಿನ ಜನರು ಗಲಭೆ ಎಬ್ಬಿಸಿದ್ದರು. ಅರೆಸ್ಟ್ ಮಾಡಿದವರನ್ನು ರಾಮನಗರ ಜೈಲಿಗೆ ಶಿಫ್ಟ್ ಮಾಡುವ ಸರ್ಕಾರದ ನಿರ್ಧಾರಕ್ಕೆ ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಸೇರಿ ಹಲವರು ವಿರೋಧ ವ್ಯಕ್ತಪಡಿಸಿದ್ದರು.
ಈಗ ಮೊಹಮದ್ ಯಾಸಿನ್ ಹಾಗೂ ಮೊಹಮದ್ ಸಬಾಜ್ ಎಂಬುವರಲ್ಲಿ ಕರೊನಾ ಸೋಂಕು ಕಾಣಿಸಿಕೊಂಡಿದೆ. ಇದೀಗ ಇವರಿಬ್ಬರನ್ನೂ ಬೆಂಗಳೂರಿನ ವಿಕ್ಟೋರಿಯಾಕ್ಕೆ ಶಿಫ್ಟ್​ ಮಾಡಲಾಗುತ್ತಿದೆ. ಇನ್ನೂ ಮೂವರಿಗೆ ಸೋಂಕು ತಗುಲಿರುವ ಸಾಧ್ಯತೆ ಇದ್ದು ಅವರನ್ನೂ ಕ್ವಾರಂಟೈನ್​ಗೆ ಒಳಪಡಿಸಲಾಗುವುದು ಎಂದು ಮೂಲಗಳು ತಿಳಿಸಿವೆ.
ಕೊವಿಡ್​​ನಿಂದಾದ ನಷ್ಟದ ಮೊತ್ತದ ಬಿಲ್​​ನ್ನು ಚೀನಾಕ್ಕೆ ಕಳಿಸಿದೆಯಾ ಜರ್ಮನಿ? ಮಾಧ್ಯಮವೊಂದರ ವರದಿಯ ಹೆಡ್​ಲೈನ್ ಎಡವಟ್ಟು..!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + fourteen =
Remember me
