ಹುಬ್ಬಳ್ಳಿ:ಉತ್ತರಾಖಂಡದ ಎತ್ತರದ ಸ್ಥಳ ಸಹಸ್ರಸ್ಥಳ್ ಮೈಯಾಳಿಗೆ ಚಾರಣಕ್ಕೆ ತೆರಳಿದ್ದ ಕರ್ನಾಟಕದ 19 ಜನರ ಸದಸ್ಯರ ಪೈಕಿ 9ಮಂದಿ ಹವಾಮಾನ ವೈಪರೀತ್ಯದಿಂದಾಗಿ ಮೃತಪಟ್ಟಿದ್ದರು. ಮೃತದೇಹಗಳನ್ನ ಉತ್ತರಾಖಂಡದಿಂದ ಏರ್​ಲಿಫ್ಟ್​ ಮಾಡಲಾಗಿದ್ದು, ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕುಟುಂದವರಿಗೆ ಹಸ್ತಾಂತರ ಮಾಡಲಾಗಿದೆ. ಮೃತಪಟ್ಟವರ ಪೈಕಿ ಹುಬ್ಬಳ್ಳಿ ಮೂಲದ ದಂಪತಿ ಕೂಡ ಇದ್ದು, ಇವರ ಸಾವು ಕುಟುಂಬಸ್ಥರು ಹಾಗೂ ಆಪ್ತರನ್ನು ದುಃಖದ ಮಡುವಿಗೆ ತಳ್ಳಿದೆ.
ಹುಬ್ಬಳ್ಳಿಯ ಹುಬ್ಬಳ್ಳಿಯ ವಿನಾಯಕ ಮುಂಗರವಾಡಿ ಹಾಗೂ ಸುಜಾತಾ ಮುಂಗರವಾಡಿ ಮೃತ ದುರ್ದೈವಿಗಳು. ವಿಶೇಷವೆಂದರೆ, ಇವರಿಬ್ಬರ ಹುಟ್ಟಿದ ದಿನಾಂಕವೂ ಒಂದೇ ಆಗಿದ್ದು, ವಿನಾಯಕ ಮುಂಗರವಾಡಿ (1969-10-03) ಹಾಗೂ ಸುಜಾತಾ ಮುಂಗರವಾಡಿ (1972-10-03) ಇಬ್ಬರೂ ಒಂದೇ ದಿನ ಮೃತಪಟ್ಟಿದ್ದು ಕಾಕತಾಳೀಯವಾಗಿದೆ.
ಇದನ್ನೂ ಓದಿ:ಪ್ರಧಾನಿ ಪ್ರಮಾಣವಚನಕ್ಕೆ ಯಾರಿಗೆಲ್ಲಾ ಆಹ್ವಾನ?; ಇಲ್ಲಿದೆ ಕಂಪ್ಲೀಟ್​ ಡೀಟೇಲ್ಸ್​
ಸುಜಾತ ಮತ್ತು ವಿನಾಯಕ ಮುಂಗರವಾಡಿ ಸಾವನ್ನಪ್ಪಿದ ದಂಪತಿಗಳಾಗಿದ್ದು, ಇಬ್ಬರು ಹುಬ್ಬಳ್ಳಿ ಬಿವಿಬಿ ಕಾಲೇಜಿನಲ್ಲಿ ಎಂಜಿನಿಯರಿಂಗ್ ಮಾಡಿದ್ದರು. ಸದ್ಯ ಬೆಂಗಳೂರಿನಲ್ಲಿ ವಾಸಿಸುತ್ತಿದ್ದರು. ಮೃತ ದಂಪತಿಗಳು ಹುಟ್ಟಿದ್ದು ಒಂದೇ ದಿನಾಂಕದಂದು, ಮೃತಪಟ್ಟಿದ್ದು, ಒಂದೇ ದಿನ ಆಗಿದೆ. ದಂಪತಿಗಳ ಸಾವು ಇವರ ಕುಟುಂಬಕ್ಕೆ ಬರಸಿಡಿಲು ಬಡಿದಂತೆ ಆಗಿದೆ.
ಉತ್ತರ ಕರ್ನಾಟಕ ಸ್ನೇಹಲೋಕ ಟ್ರಸ್ಟ್ ಎಂಬ ಸಂಸ್ಥೆ ಹುಟ್ಟು ಹಾಕಿದ್ದ ವಿನಾಯಕ ಮುಂಗರವಾಡಿ, ಸುಜಾತಾ ಮುಂಗರವಾಡಿ ದಂಪತಿ ಸಮಾಜ ಸೇವೆಯಲ್ಲಿಯೂ ಮುಂದಿದ್ದರು. ಪ್ರತಿ ವರ್ಷ ಚಾರಣಕ್ಕೆ ಹೋಗುತ್ತಿದ್ದರು. ಈ ಬಾರಿ ಮಕ್ಕಳನ್ನು ಕೂಡ ಚಾರಣಕ್ಕೆ ಕರೆದೊಯ್ಯಲು ದಂಪತಿ ಯೋಜನೆ ಹಾಕಿಕೊಂಡಿದ್ದರು. ಆದರೆ, ಅವರಿಗೆ ಕೇವಲ 2 ಟಿಕೆಟ್ ಮಾತ್ರ ದೊರೆತಿತ್ತು. ಹೀಗಾಗಿ ದಂಪತಿ ಮಾತ್ರ ಚಾರಣಕ್ಕೆ ಹೋಗಿದ್ದರು. ದಂಪತಿಯ ಸಾವಿನ ಸುದ್ದಿ ಕುಟುಂಬ್ಕಕೆ ಸಿಡಿಲಿ ಬಡಿದಂತಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × three =
Remember me
