ಉಡುಪಿ: ಕೋವಿಡ್- 19 ಪಾಸಿಟಿವ್ ಪ್ರಕರಣಗಳು ದಿನೆದಿನೇ ಹೆಚ್ಚುತಿದ್ದು, ಈ ಬಗ್ಗೆ ಮುಂಜಾಗ್ರತಾ ಕ್ರಮವಾಗಿ ಬುಧವಾರ ರಾತ್ರಿಯಿಂದ 14 ದಿನಗಳವರೆಗೇ ಜಿಲ್ಲೆಯ ಎಲ್ಲಾ ಗಡಿಗಳನ್ನು ಬಂದ್ ಮಾಡುವ ನಿರ್ಧಾರವನ್ನು ಜಿಲ್ಲಾಡಳಿತ ತೆಗೆದುಕೊಂಡಿದೆ.‌ ಸದ್ಯ ಲಾಕ್ ಡೌನ್ ಮಾಡುವ ಬಗ್ಗೆ ನಿರ್ಧಾರ ತೆಗೆದುಕೊಂಡಿಲ್ಲ.ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಕೋವಿಡ್ 19 ತಡೆಗಟ್ಟುವಿಕೆಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ನಡೆದ ಸಭೆಯಲ್ಲಿ ಜಿಲ್ಲೆಯ ಎಲ್ಲಾ ಶಾಸಕರು ಅಧಿಕಾರಿಗಳು ಸಮಾಲೋಚನೆ ನಡೆಸಿದರು.
ಸಭೆಯಲ್ಲಿ ಲಾಕ್ ಡೌನ್ ಮಾಡುವುದು ಬೇಡ 14 ದಿನಗಳವರೆಗೆ ಉಡುಪಿ ಜಿಲ್ಲೆಯ ಎಲ್ಲಾ ಗಡಿಗಳನ್ನು ಸೀಲ್ಡೌನ್ ಮಾಡುವುದಾಗಿ ತೀರ್ಮಾನಿಸಲಾಯಿತು.  ಹಾಗೂ ಉಡುಪಿ ಜಿಲ್ಲಾ ಗಡಿಭಾಗದಿಂದ ಹೊರಗೆ ಹೋಗುವವರಿಗೆ ಮತ್ತು ಒಳಗೆ ಬರುವವರಿಗೆ ಬುಧವಾರ ರಾತ್ರಿ 8 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ. ರಾಜ್ಯ ಸರ್ಕಾರದ ಹಿಂದಿನ ಆದೇಶದಂತೆ ಭಾನುವಾರ ಸಂಪೂರ್ಣ ಲಾಕ್ಡೌನ್ ಯಥಾಸ್ಥಿತಿ ಮುಂದುವರೆಯುತ್ತದೆ ಎಂದು ಶಾಸಕ ರಘುಪತಿ ಭಟ್ ತಿಳಿಸಿದ್ದಾರೆ.
ಇದನ್ನೂ ಓದಿ:ರಾಜಸ್ಥಾನ ರಾಜಕೀಯ ನಾಟಕದಲ್ಲಿ ಕ್ಷಣಕ್ಕೊಂದು ತಿರುವು; ಪತನದ ಅಂಚಿನಲ್ಲಿ ಗೆಹ್ಲೋಟ್​ ಸರ್ಕಾರ
ಶಾಸಕರಾದ ಸುನೀಲ್ ಕುಮಾರ್, ಸುಕುಮಾರ್ ಶೆಟ್ಟಿ, ಲಾಲಾಜಿ ಆರ್ ಮೆಂಡನ್, ಶ್ರೀನಿವಾಸ್ ಶೆಟ್ಟಿ ಸಭೆಯಲ್ಲಿದ್ದರು.
ಸಿಎಲ್​ಪಿ ಮೀಟಿಂಗ್​ಗೆ ಎರಡನೆ ಬಾರಿ ಗೈರಾದ ಸಚಿನ್ ಪೈಲಟ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + 4 =
Remember me
