ಉಡುಪಿ:ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಉಡುಪಿ ತತ್ತರಿಸಿದೆ. ಜನಜೀವನ ಅಸ್ತವ್ಯಸ್ಥಗೊಂಡಿದ್ದು. ಉಡುಪಿ ನಗರ ಪ್ರದೇಶ ಸಂಪೂರ್ಣ ಜಲಾವೃತಗೊಂಡಿದೆ.
ಶನಿವಾರ ಬೆಳಿಗ್ಗೆಯಿಂದ ನಿರಂತರ ಸುರಿಯುತ್ತಿರುವ ಮಳೆಯಿಂದ ಉಡುಪಿಯ ತಗ್ಗು ಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಿವೆ.
ಉಡುಪಿ ಗುಂಡಿಬೈಲು, ಅಂಬಲಪಾಡಿ, ಮಠದ ಬೆಟ್ಟು, ಬೈಲಕೆರೆ ನಿಟ್ಟೂರು ಕೊಡಂಕೂರು ಚಿಟ್ಪಾಡಿ ಪ್ರದೇಶದಲ್ಲಿ ಕೃತಕ ನೆರೆ ಉಂಟಾಗಿದ್ದು 4 ದಶಕಗಳ ಬಳಿಕ ಉಡುಪಿಯಲ್ಲಿ ಇದೇ ಮೊದಲ ಬಾರಿಗೆ ಈ ರೀತಿ ನೆರೆ ಉಂಟಾಗಿದೆ. ತಗ್ಗು ಪ್ರದೇಶದಲ್ಲಿ ಸಿಕ್ಕಿಬಿದ್ದವರನ್ನು ರಕ್ಷಿಸಿದ ಅಗ್ನಿಶಾಮಕ ದಳ,‌ ಪೊಲೀಸ್ ಸಿಬ್ಬಂದಿಗಳು ದೋಣಿಯಲ್ಲಿ ರಕ್ಷಣೆ ಕಾರ್ಯಚರಣೆ ‌ನಡೆಸುತ್ತಿದ್ದಾರೆ.
ಇದನ್ನೂ ಓದಿ:ವಾರಭವಿಷ್ಯ: ಉಚ್ಚ ರಾಹುವು ನೀವು ತಪ್ಪು ಮಾಡಿದರೂ ಕ್ಷಮಿಸಿ ಮಾರ್ಗ ತೋರುತ್ತಾನೆ…
ಭೀಕರ ಮಳೆಯ ಪರಿಣಾಮ ಉಡುಪಿ ಕೃಷ್ಣ ಮಠದ ಪಾರ್ಕಿಂಗ್ ಆವರಣ, ನಗರದ ರಾಷ್ಟ್ರೀಯ ಹೆದ್ದಾರಿ ರಸ್ತೆ ಸಂಪೂರ್ಣ ಜಲಾವೃತಗೊಂಡಿದ್ದು. ನಗರದ ಅಂಗಡಿ ಗೋದಾಮುಗಳಿಗೆ ನೀರು ನುಗ್ಗಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.
ಭಾರಿಯ ಮಳೆಯ ಪರಿಣಾಮ ಸ್ವರ್ಣ, ಸೀತನದಿ ಉಕ್ಕಿ ಹರಿಯುತ್ತಿದೆ. ಮಲ್ಪೆ-ಮೊಳಕಾಲ್ಮೂರು ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಬಂದ್ ಆಗಿದೆ. ಪುತ್ತಿಗೆ ಭಾಗದಲ್ಲಿ ಕೃತಕ ನೆರೆಯಿಂದಾಗಿ ಮನೆಗಳು ಸಂಪೂರ್ಣ ಜಲಾವೃತವಾಗಿದ್ದು ಮನೆಯೊಳಗೆ ನೀರು ನುಗ್ಗಿ ಗೋಡೆ ಕುಸಿದ ಘಟನೆ ಸಂಭವಿಸಿದೆ.
ಈಗಾಗಲೇ ಬಂಗಾಳ ಉಪಸಾಗರದಲ್ಲಿ ಸೆ.20ರಂದು ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆಯ ಪರಿಣಾಮ ರಾಜ್ಯದಲ್ಲಿ ಸೆ. 22ರವರೆಗೆ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ. ಪ್ರಮುಖವಾಗಿ ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆ ಹಿನ್ನೆಲೆಯಲ್ಲಿ ‘ರೆಡ್ ಅಲರ್ಟ್’ ಎಚ್ಚರಿಕೆ ನೀಡಲಾಗಿದೆ.
ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸೆ.20ರಿಂದ 22ರವರೆಗೆ ಗುಡುಗು ಸಹಿತ ಭಾರೀ ಮಳೆ ನಿರೀಕ್ಷೆ ಇದೆ.
ಗ್ರಾಮದ ಮಧ್ಯೆದಲ್ಲಿಯೇ ಯುವಕನ ಬರ್ಬರ ಹತ್ಯೆ: ಬೆಳ್ಳಂಬೆಳಗ್ಗೆಯೇ ಬೆಚ್ಚಿಬಿದ್ದ ಗ್ರಾಮಸ್ಥರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 2 =
Remember me
