ಬೆಂಗಳೂರು:ವಿಧಾನಸೌಧ, ಶಾಸಕರ ಭವನ, ರಾಜಭವನಕ್ಕೆ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಹೊಸ ಭದ್ರತಾ ವ್ಯವಸ್ಥೆಯನ್ನು ಕಲ್ಪಿಸಲಾಗುವುದು ಎಂದು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್​​ ಸದನಕ್ಕೆ ತಿಳಿಸಿದ್ದಾರೆ.
ಶುಕ್ರವಾರ ಬಜೆಟ್​ ಮಂಡನೆ ವೇಳೆ ಆದ ಲೋಪ ದೋಷದ ಕುರಿತು ಮಾತನಾಡುವ ವೇಳೆ ವಿಧಾನಸಭೆ ಸಭಾಧ್ಯಕ್ಷ ಯು.ಟಿ.ಖಾದರ್​ ಸದನಕ್ಕೆ ಮಾಹಿತಿ ನೀಡಿದ್ದಾರೆ.
ಶುಕ್ರವಾರ ಬಜೆಟ್​ ಮಂಡನೆ ವೇಳೆ ತಿಪ್ಪೇರುದ್ರಪ್ಪ(76) ಎಂಬ ವ್ಯಕ್ತಿಯೋರ್ವ ದೇವದುರ್ಗ ವಿಧಾನಸಭೆ ಕ್ಷೇತ್ರದ ಜೆಡಿಎಸ್​ ಶಾಸಕಿ ಕರೆಮ್ಮ ನಾಯಕ್​ ಅವರ ಆಸನದಲ್ಲಿ ಕುಳಿತುಕೊಂಡಿದ್ದ. ಬಳಿಕ ಇದನ್ನು ಗಮನಿಸಿದ ಗುರುಮಠಕಲ್​ ಕ್ಷೇತ್ರದ ಶಾಸಕ ಶರಣಗೌಡ ಕಂದಕೂರ್​ ಈ ವಿಚಾರವನ್ನು ನನ್ನ ಹಾಗೂ ಮಾರ್ಷಲ್​ಗಳ ಗಮನಕ್ಕೆ ತಂದಿದ್ದಾರೆ.
ಇದನ್ನೂ ಓದಿ:ಟೊಮ್ಯಾಟೊ ಕಾಯಲು ಬೌನ್ಸರ್ ನೇಮಿಸಿ ಪೇಚಿಗೆ ಸಿಲುಕಿದ ತರಕಾರಿ ವ್ಯಾಪಾರಿ
ಕೂಡಲೇ ಆ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಆತ ಶಾಸಕನಲ್ಲ ಎಂದು ಬೆಳಕಿಗೆ ಬಂದಿದೆ. ಇಂತಹ ಲೋಪಗಳನ್ನು ತಡೆಯಲು ಅತ್ಯಾಧುನಿಕ ಭದ್ರತಾ ವ್ಯವಸ್ಥೆಯನ್ನು ಕಲ್ಪಿಸಲು ನಿರ್ಧರಿಸಲಾಗಿದೆ. ಈ ನಿಟ್ಟಿನಲ್ಲಿ ವಿಧಾನಸೌಧ, ಶಾಸಕರ ಭವನ, ರಾಜಭವನಕ್ಕೆ ಹೆಚ್ಚಿನ ಭದ್ರತೆಯನ್ನು ಒದಗಿಸಲಾಗುವುದು.
ಇನ್ನು ಮುಂದೆ ನಾನು ಸೇರಿದಂತೆ ಎಲ್ಲಾ ಶಾಸಕರು ಗುರುತಿನ ಚೀಟಿಯನ್ನು ತೋರಿಸಿ ಸದನವನ್ನು ಪ್ರವೇಶಿಸಬೇಕು. ಈ ವಿಚಾರದಲ್ಲಿ ಮಾಧ್ಯಮ ಪ್ರತಿನಿಧಿಗಳು ಸೇರಿದಂತೆ ಎಲ್ಲರೂ ಸಹಕಾರ ನೀಡಬೇಕು ಎಂದು ವಿಧಾನಸಭೆ ಸ್ಪೀಕರ್​ ಯು.ಟಿ. ಖಾದರ್​ ಸದನಕ್ಕೆ ವಿನಂತಿಸಿಕೊಂಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 + thirteen =
Remember me
